Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸರಕಾರದ ಹಣದಿಂದ ಗುಣಮಟ್ಟದ ಶೂ, ಸಾಕ್ಸ್...

ಸರಕಾರದ ಹಣದಿಂದ ಗುಣಮಟ್ಟದ ಶೂ, ಸಾಕ್ಸ್ ಅಸಾಧ್ಯ: ಶಿಕ್ಷಕರ ಅಳಲು

ಸರಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆಗೆ ನಿಧಿ ಬಿಡುಗಡೆ

ಜಿ.ಮಹಾಂತೇಶ್ಜಿ.ಮಹಾಂತೇಶ್11 July 2022 10:06 AM IST
share
ಸರಕಾರದ ಹಣದಿಂದ ಗುಣಮಟ್ಟದ ಶೂ, ಸಾಕ್ಸ್ ಅಸಾಧ್ಯ: ಶಿಕ್ಷಕರ ಅಳಲು

ದಾನಿಗಳನ್ನು ಅವಲಂಬಿಸಲು ಪರೋಕ್ಷ ಸೂಚನೆ

ಬೆಂಗಳೂರು: ಸರಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತವಾಗಿ ಶೂ ಮತ್ತು ಸಾಕ್ಸ್ ವಿತರಿಸಲು 132 ಕೋಟಿ ರೂ. ಬಿಡುಗಡೆ ಮಾಡಿ ಆದೇಶ ಹೊರಡಿಸಿರುವ ಸರಕಾರವು ಕಳೆದ 5 ವರ್ಷಗಳ ಹಿಂದೆ ತಲಾ ವಿದ್ಯಾರ್ಥಿಗೆ ಬಿಡುಗಡೆ ಮಾಡಿದ್ದ ಮೊತ್ತವನ್ನೇ ನಮೂದಿಸಿದೆ. ಪ್ರತಿಪಕ್ಷದ ಟೀಕೆ ಎದುರಿಸಲಾರದೇ ತರಾತುರಿಯಲ್ಲಿ ಈ ಆದೇಶ ಹೊರಡಿಸಿದಂತಿದೆ.

ಅಲ್ಲದೆ ದಾನಿಗಳು, ಖಾಸಗಿ ಸಂಸ್ಥೆಗಳು ಈ ಉದ್ದೇಶಕ್ಕಾಗಿ ಹೆಚ್ಚುವರಿ ಹಣ ನೀಡಿದರೆ ಅದನ್ನು ಬಳಸಿಕೊಂಡು ಇನ್ನೂ ಉತ್ತಮ ಗುಣಮಟ್ಟದ ಶೂ ಮತ್ತು ಸಾಕ್ಸ್‌ಗಳನ್ನು ಖರೀದಿಸಿ ವಿತರಿಸಬಹುದು ಎಂದೂ ಆದೇಶದಲ್ಲಿ ಹೇಳಿರುವುದು ಉತ್ತಮ ಗುಣಮಟ್ಟದ  ಶೂ ಮತ್ತು ಸಾಕ್ಸ್ ಖರೀದಿಸಲು ದಾನಿಗಳು ಮತ್ತು ಖಾಸಗಿ ಸಂಸ್ಥೆಗಳ ಬಳಿ ಶಿಕ್ಷಕರು ಕೈಯೊಡ್ಡುವ ಸ್ಥಿತಿಯನ್ನು ತಂದಿಟ್ಟಂತಾಗಿದೆ.

ಕಲಿಕಾ ಚೇತರಿಕೆ ಹಾಳೆಗಳನ್ನು ಜೆರಾಕ್ಸ್ ಮಾಡಿಸಲು ದಾನಿಗಳ ನೆರವು ಪಡೆಯಬೇಕು ಎಂದು ಹೊರಡಿಸಿದ್ದ ಸುತ್ತೋಲೆಯನ್ನು ಹಿಂಪಡೆದುಕೊಂಡಿರುವ ಬೆನ್ನಲ್ಲೇ ಶೂ, ಸಾಕ್ಸ್ ಖರೀದಿ ಸಂಬಂಧ ಹೊರಡಿಸಿರುವ ಆದೇಶವೂ ಚರ್ಚೆಗೆ ಗ್ರಾಸವಾಗಿದೆ.

2019ರ ಮೇ 6ರಲ್ಲಿಯೂ ಸರಕಾರ ಹೊರಡಿಸಿದ್ದ ಆದೇಶದಲ್ಲಿ ರಾಷ್ಟ್ರಮಟ್ಟದ ಹೆಸರಾಂತ ಕಂಪೆನಿಗಳ ಪ್ರತಿಷ್ಠಿತ ಬ್ರ್ಯಾಂಡ್‌ಗಳಾದ ಬಾಟಾ, ಲಿಬರ್ಟಿ, ಲ್ಯಾನ್ಸರ್, ಪ್ಯಾರಾಗಾನ್, ಕರೋನ, ಆ್ಯಕ್ಷನ್, ಲಕಾನಿ ಕಂಪೆನಿಗಳ ಅಧಿಕೃತ ಮಾರಾಟಗಾರರಿಂದ ಶೂ- ಸಾಕ್ಸ್‌ಗಳನ್ನು ಖರೀದಿಸಬೇಕು ಎಂದು ಸೂಚಿಸಿತ್ತು.

ಆದರೆ 2022ರ ಜುಲೈ 8ರಂದು ಹೊರಡಿಸಿರುವ ಆದೇಶದಲ್ಲಿ ಬ್ರ್ಯಾಂಡೆಡ್ ಉತ್ಪನ್ನಗಳ ಕುರಿತು ಉಲ್ಲೇಖಿಸಿಲ್ಲ.

2017-18ನೇ ಸಾಲಿನಲ್ಲಿ 1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ಖರೀದಿ ಸಂಬಂಧ ಶಾಲಾ ಎಸ್.ಡಿ.ಎಂ.ಸಿ ಖಾತೆಗಳಿಗೆ 129.84 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿ ಹೊರಡಿಸಿದ್ದ ಆದೇಶದಲ್ಲಿದ್ದ ದರವನ್ನೇ 2022-23ನೇ ಸಾಲಿನಲ್ಲಿಯೂ ನಮೂದಿಸಿ ಪ್ರಸಕ್ತ ಸ್ಥಳೀಯ ಮಾರುಕಟ್ಟೆಯಲ್ಲಿನ ವಾಸ್ತವ ದರಗಳನ್ನು ಪರಿಗಣಿಸಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಕಳೆದ 5 ವರ್ಷದ ಹಿಂದೆ ಬಿಡುಗಡೆ ಮಾಡಿದ್ದ ಅನುದಾನಕ್ಕೆ ಹೋಲಿಸಿದರೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಬಿಡುಗಡೆ ಮಾಡಿರುವ ಅನುದಾನದಲ್ಲಿ 2.16 ಕೋಟಿ ರೂ. ಮಾತ್ರ ಹೆಚ್ಚಳ ಮಾಡಿದೆ. ಅಲ್ಲದೆ 2017-18ನೇ ಸಾಲಿನಲ್ಲಿ 1ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 265 ರೂ., 6ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 295 ರೂ., 9ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 325 ರೂ.ಯಂತೆ ಬಿಡುಗಡೆ ಮಾಡಿತ್ತು. ಇದೇ ದರವು 2019-20ರಲ್ಲಿಯೂ ಮುಂದುವರಿದಿತ್ತು. ಇದೀಗ 2022-23ನೇ ಶೈಕ್ಷಣಿಕ ಸಾಲಿನಲ್ಲಿಯೂ ಅದೇ ಮೊತ್ತವನ್ನು ಎಸ್‌ಡಿಎಂಸಿಗಳಿಗೆ ಬಿಡುಗಡೆ ಮಾಡಲು ಸೂಚಿಸಿದೆ.

5 ವರ್ಷದ ಹಿಂದಿನ ದರವನ್ನೇ ಆದೇಶದಲ್ಲಿ ನಮೂದಿಸಿದೆ. ಆದರೆ ಮಾರುಕಟ್ಟೆಯಲ್ಲಿ ಈಗಲೂ ಅದೇ ದರ ಇರುವುದಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ದರವು ಸುಮಾರು 25ರಿಂದ 30 ರೂ. ಹೆಚ್ಚಳವಾಗಿದೆ. ಎಲ್ಲಾ ಸರಕು ಸಾಮಗ್ರಿಗಳ ದರವೂ ಏರಿಕೆಯಾಗಿರುತ್ತದೆ. ಹೀಗಿರುವಾಗ 5 ವರ್ಷದ ಹಿಂದಿನ ದರವನ್ನು ಪರಿಷ್ಕರಿಸಿ ಚಾಲ್ತಿ ದರವನ್ನು ನಮೂದಿಸಿ ಹಣ ಬಿಡುಗಡೆ ಮಾಡಬೇಕಿತ್ತು. ಆದರೆ ಈಗಿನ ಸರಕಾರವು 5 ವರ್ಷದ ಹಿಂದಿನ ದರವನ್ನೇ ನಮೂದಿಸಿ ಶಿಕ್ಷಕರನ್ನು ಮತ್ತೊಮ್ಮೆ ಕೈಚಾಚುವಂತೆ ಮಾಡಿದೆ. ಒಂದೊಮ್ಮೆ ದಾನಿಗಳು, ಖಾಸಗಿ ಸಂಘ ಸಂಸ್ಥೆಗಳು ನೆರವು ನೀಡದಿದ್ದರೇ ಕೆಳದರ್ಜೆಯ ಶೂಗಳನ್ನು ಖರೀದಿಸುವುದು ಅನಿವಾರ್ಯವಾಗುತ್ತದೆ ಎನ್ನುತ್ತಾರೆ ಮುಖ್ಯ ಶಿಕ್ಷಕರೊಬ್ಬರು.

ತರಗತಿಗಳು ಆರಂಭವಾಗಿ ಏಳು ವಾರಗಳು ಕಳೆದಿದ್ದರೂ ಸರಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಗಳನ್ನು ವಿತರಿಸಿರಲಿಲ್ಲ. ಹೀಗಾಗಿ ಪ್ರತಿಪಕ್ಷಗಳು ಟೀಕೆಗಳಿಗೆ ಗುರಿಯಾಗಿದ್ದ ರಾಜ್ಯ ಸರಕಾರ ಶಾಲಾ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ತಕ್ಷಣವೇ ಪೂರೈಸುವುದಾಗಿ ಆದೇಶ ಹೊರಡಿಸಿದೆ. ಮಕ್ಕಳಿಗೆ ಶೂ ಮತ್ತು ಸಾಕ್ಸ್ ಗಳನ್ನು ವಿತರಿಸಲು 132 ಕೋಟಿ ರೂ. ಮಂಜೂರು ಮಾಡಲಾಗಿದೆ. ರಾಜ್ಯಾದ್ಯಂತ ಸರಕಾರಿ ಶಾಲೆಗಳಲ್ಲಿ ಸುಮಾರು 48 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶದಲ್ಲಿ ತಿಳಿಸಿದ್ದಾರೆ.

ಅಗತ್ಯವಿರುವ ಹಣವನ್ನು ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ ಮೂಲಕ ಒದಗಿಸಲಾಗುವುದು ಎಂದು ಸಚಿವ ನಾಗೇಶ್ ಹೇಳಿದ್ದರು. ಈ ಶೈಕ್ಷಣಿಕ ವರ್ಷದಲ್ಲಿ ಮೇ 16ರಂದು ಶಾಲೆಗಳು ಪುನರಾರಂಭವಾಗಿದ್ದು, ತಮ್ಮ ವಾರ್ಡ್‌ಗಳಿಗೆ ಪಠ್ಯಪುಸ್ತಕ, ಸಮವಸ್ತ್ರ, ಶೂ ಮತ್ತು ಸಾಕ್ಸ್‌ಗಳನ್ನು ಒದಗಿಸುವಂತೆ ಪೋಷಕರು ಸರಕಾರಕ್ಕೆ ಮನವಿ ಮಾಡುತ್ತಿದ್ದರು. ಆದರೆ ಸರಕಾರ ಈ ನಿರ್ಧಾರವನ್ನು ತಡೆಹಿಡಿದಿತ್ತು ಎನ್ನಲಾಗಿದೆ.

ಸರಕಾರ ಈಗ ಬಿಡುಗಡೆ ಮಾಡಿರುವ ಹಣದಲ್ಲಿ ಉತ್ತಮ ಗುಣಮಟ್ಟದ ಶೂ ಮತ್ತು ಸಾಕ್ಸ್‌ಗಳನ್ನು ಖರೀದಿಸಲು ಸಾಧ್ಯವಿಲ್ಲ. ಮುಕ್ತ ಮಾರುಕಟ್ಟೆಯಲ್ಲಿಯೇ ತಲಾ ಒಂದು ಜತೆ ಶೂಗೆ ಕನಿಷ್ಠ 425 ರೂ.ಗಳಿವೆ. ಹೀಗಾಗಿ ಸರಕಾರ ತಲಾ ವಿದ್ಯಾರ್ಥಿಗೆ ಬಿಡುಗಡೆ ಮಾಡಿರುವ ಮೊತ್ತಕ್ಕೆ ಹೋಲಿಸಿದರೆ 160 ರೂ. ಕಡಿಮೆ ಇರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X