Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂತರ್-ಧರ್ಮೀಯ ಸಂಬಂಧದ ನೆಪದಲ್ಲಿ...

ಅಂತರ್-ಧರ್ಮೀಯ ಸಂಬಂಧದ ನೆಪದಲ್ಲಿ ಪೊಲೀಸರಿಂದ ನೆಲಸಮ ಕಾರ್ಯಾಚರಣೆ: ಪ್ರಯಾಗರಾಜ್ ಮುಸ್ಲಿಂ ಕುಟುಂಬದ ಆರೋಪ

ವಾರ್ತಾಭಾರತಿವಾರ್ತಾಭಾರತಿ11 July 2022 5:06 PM IST
share
ಅಂತರ್-ಧರ್ಮೀಯ ಸಂಬಂಧದ ನೆಪದಲ್ಲಿ ಪೊಲೀಸರಿಂದ ನೆಲಸಮ ಕಾರ್ಯಾಚರಣೆ: ಪ್ರಯಾಗರಾಜ್ ಮುಸ್ಲಿಂ ಕುಟುಂಬದ ಆರೋಪ

ಹೊಸದಿಲ್ಲಿ: ತಮ್ಮ ಕುಟುಂಬದ ಒಬ್ಬ ಸದಸ್ಯ ಹಿಂದು ಮಹಿಳೆಯೊಂದಿಗೆ ಅಂತರ-ಧರ್ಮೀಯ ಸಂಬಂಧ ಹೊಂದಿದ್ದಾರೆಂಬ ಕಾರಣಕ್ಕೆ ತಮಗೆ ಸೇರಿದ ಮಳಿಗೆಗಳನ್ನು ಭಾಗಶಃ ನೆಲಸಮಗೊಳಿಸಲಾಗಿದೆ ಎಂದು ಉತ್ತರ ಪ್ರದೇಶದ ಪ್ರತಾಪಘರದ ಮುಸ್ಲಿಂ ಕುಟುಂಬವೊಂದು ಆರೋಪಿಸಿದೆ. ಆದರೆ ನೆಲಸಮ ಆರೋಪವನ್ನು ನಿರಾಕರಿಸಿದ ಪೊಲೀಸರು ತಾವು ಜೋಡಿಯನ್ನು ಸೆರೆಹಿಡಿಯಲು ಯತ್ನಿಸಿದ್ದಾಗಿ ತಿಳಿಸಿದ್ದಾರೆ ಎಂದು Thewire.in ವರದಿ ಮಾಡಿದೆ.

ಈ ನಿರ್ದಿಷ್ಟ ಕುಟುಂಬದ ಯುವಕ ಕಳೆದ ಎರಡು ವರ್ಷಗಳಿಂದ ಠಾಕುರ್ ಸಮುದಾಯಕ್ಕೆ ಸೇರಿದ ಯುವತಿಯನ್ನು ಪ್ರೀತಿಸುತ್ತಿದ್ದಾನೆನ್ನಲಾಗದೆ. ಯುವತಿಯ ಕುಟುಂಬದಿಂದ ತಮಗೆ ಸತತ ಬೆದರಿಕೆಗಳು  ಬಂದಿವೆ ಹಾಗೂ ಆಕೆ ಅಪ್ರಾಪ್ತೆ ಎಂದು ಕುಟುಂಬ ಹೇಳುತ್ತಿದೆ ಎಂದು ಯುವಕನ ಕುಟುಂಬ ತಿಳಿಸಿದೆ. ಆದರೆ ಯುವತಿಯ ವಯಸ್ಸು 20 ಎಂದು ತಿಳಿದು ಬಂದಿದೆ.

ಜೂನ್ 14ರಂದು ಯುವಕ ಮತ್ತು ಯುವತಿ ಜೊತೆಯಾಗಿ ಬಾಳಲೆಂದು ತಮ್ಮ ಮನೆಗಳನ್ನು ತೊರೆದಿದ್ದರು. ನಂತರ ಯುವತಿಯ ಕುಟುಂಬ ಯುವಕನ ವಿರುದ್ಧ ದೂರು ನೀಡಿದ ಆಧಾರದಲ್ಲಿ ಅದೇ ದಿನ ಎಫ್‍ಐಆರ್ ದಾಖಲಾಗಿತ್ತು. ಯುವಕನ ತಂದೆಗೆ ಜೂನ್ 15ರಂದು ಠಾಣೆಗೆ ಬರ ಹೇಳಿ ಆರು ದಿನ ಕಸ್ಟಡಿಯಲ್ಲಿರಿಸಲಾಗಿತ್ತು ಎಂದು ಕುಟುಂಬ ತಿಳಿಸಿದ್ದು ಯುವಕನ ಸೋದರಿ ಠಾಣೆಗೆ ತೆರಳಿ ನಂತರ ಒಡಂಬಡಿಕೆಗೆ ಬಂದ ನಂತರ ಆತನನ್ನು ಬಿಡುಗಡೆಗೊಳಿಸಲಾಗಿತ್ತು ಎನ್ನಲಾಗಿದೆ.

 ಜುಲೈ 2ರಂದು ಮನೆಗೆ ಬಂದ ಪೊಲೀಸರು ಮುಖ್ಯ ಗೇಟ್ ಅನ್ನು ಮುರಿದು ಹತ್ತಿರದಲ್ಲಿ ಇರಿಸಲಾಗಿದ್ದ ಕೂಲರ್ ಹಾಗೂ ಚಾರ್‍ಪಾಯ್‍ಗೆ ಹಾನಿಯೆಸಗಿದ್ದರು. ಅದೇ ದಿನ ಯುವಕನ ಮಾವನಿಗೆ ಸೇರಿದ ಕಟ್ಟಡದಲ್ಲಿನ ಬಾಡಿಗೆದಾರರಿಗೆ ತಮ್ಮ ಮಳಿಗೆಗಳನ್ನು ತೆರವುಗೊಳಿಸುವಂತೆ ತಿಳಿಸಲಾಗಿತ್ತು. ಜುಲೈ 4ರಂದು ಮುಂಜಾನೆ ಪೊಲೀಸರು ಅಲ್ಲಿನ ಸೀಸಿಟಿವಿ ಕ್ಯಾಮರಾಗಳ ಸಂಪರ್ಕ ಹಾಗೂ ವಿದ್ಯುತ್ ಸಂಪರ್ಕ ಕಡಿತಗೊಳಿಸಿ  ಅಲ್ಲಿನ ಮೆಟ್ಟಿಲುಗಳು ಪ್ರವೇಶದ್ವಾರಗಳನ್ನು ನೆಲಸಮಗೊಳಿಸಿದ್ಧಾರೆ ಎಂದು ಯುವಕನ ಸೋದರಿ ಆರೋಪಿಸಿದ್ದಾರೆ.

ಹಿಂದು ಯುವತಿ ತಾನು ಪ್ರಬುದ್ಧಳು ಹಾಗೂ ಸ್ವಇಚ್ಛೆಯಿಂದ ಮನೆಯಿಂದ ಹೊರಗೆ ಬಂದಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾಳೆನ್ನಲಾಗಿದೆ. ಜೋಡಿ ಕಾನೂನುಬದ್ಧವಾಗಿ ವಿವಾಹವಾಗಿಲ್ಲ ಎಂಬ ಕಾರಣಕ್ಕೆ ಪೊಲೀಸರು ಅವರನ್ನು ಸೆರೆಹಿಡಿಯಲು ಪ್ರಯತ್ನಿಸುತ್ತಿದ್ದಾರೆಂಬ ಮಾಹಿತಿಯಿದೆ ಎಂದು thewire.in ವರದಿ ಮಾಡಿದೆ.

ಆದರೆ ಕುಟುಂಬಕ್ಕೆ ಸೇರಿದ ಮಳಿಗೆಗಳಲ್ಲಿ ನೆಲಸಮ ಕಾರ್ಯಾಚರಣೆ ನಡೆಸಲಾಗಿದೆ ಎಂಬ ಆರೋಪವನ್ನು ಪೊಲೀಸರು ನಿರಾಕರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X