Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ್ಯೂಟನ್‌ ನಿಯಮ, ಪೈಥಾಗೋರಸ್‌ ಪ್ರಮೇಯ...

ನ್ಯೂಟನ್‌ ನಿಯಮ, ಪೈಥಾಗೋರಸ್‌ ಪ್ರಮೇಯ ʼಸುಳ್ಳುಸುದ್ದಿಗಳುʼ: ಕರ್ನಾಟಕ ಎನ್‌ಇಪಿ ಪಠ್ಯ ಪ್ರಸ್ತಾವನೆಯಲ್ಲಿ ಉಲ್ಲೇಖ

ಪಠ್ಯಕ್ರಮದಲ್ಲಿ ಮನುಸ್ಮೃತಿ, ಪ್ರಾಚೀನ ಸಂಖ್ಯಾ ಪದ್ಧತಿಗಳನ್ನು ಅಳವಡಿಸಲು ಸಲಹೆ

ವಾರ್ತಾಭಾರತಿವಾರ್ತಾಭಾರತಿ11 July 2022 5:21 PM IST
share
ನ್ಯೂಟನ್‌ ನಿಯಮ, ಪೈಥಾಗೋರಸ್‌ ಪ್ರಮೇಯ ʼಸುಳ್ಳುಸುದ್ದಿಗಳುʼ: ಕರ್ನಾಟಕ ಎನ್‌ಇಪಿ ಪಠ್ಯ ಪ್ರಸ್ತಾವನೆಯಲ್ಲಿ ಉಲ್ಲೇಖ

ಬೆಂಗಳೂರು: ಸಂಸ್ಕೃತವನ್ನು ತೃತೀಯ ಭಾಷೆಯಾಗಿ ಕಲಿಸುವುದು, ಮನುಸ್ಮೃತಿ ಮತ್ತು ಪ್ರಾಚೀನ ಸಂಖ್ಯಾ ಪದ್ಧತಿಗಳಾದ ಭೂತಸಂಖ್ಯ ಮತ್ತು ಕಟಪಯಾದಿ ಸಾಂಖ್ಯವನ್ನು ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ಪರಿಚಯಿಸುವುದು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿಯಲ್ಲಿ ಶಾಲಾ ಪಠ್ಯಕ್ರಮದಲ್ಲಿ ಸೇರಿಸಲು ಕರ್ನಾಟಕ ಕಳುಹಿಸಿರುವ ಪ್ರಸ್ತಾವನೆಯಲ್ಲಿ ಸ್ಥಾನ ಪಡೆದಿದೆ ಎಂದು thenewsminute.com ವರದಿ ಮಾಡಿದೆ. ಭೂತಸಾಂಖ್ಯವು ಸಾಮಾನ್ಯ ನಾಮಪದಗಳನ್ನು ಬಳಸಿಕೊಂಡು ಸಂಸ್ಕೃತದಲ್ಲಿ ಸಂಖ್ಯೆಗಳನ್ನು ದಾಖಲಿಸುವ ವಿಧಾನವಾಗಿದ್ದರೆ, ಸುಲಭವಾಗಿ ನೆನಪಿಡುವ ಸಲುವಾಗಿರುವ ಸಂಖ್ಯೆಗಳ ಸಂಕೇತಗಳು ಕಟಪಯಾದಿ ವಿಧಾನವಾಗಿದೆ.

ರಾಜ್ಯ ಸರ್ಕಾರದ ಕೆಲವು ಪ್ರಸ್ತಾವನೆಗಳ ಬಗ್ಗೆ ರಾಜ್ಯದ ಶಿಕ್ಷಣ ತಜ್ಞರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇನ್‌ಇಪಿ ಅಡಿಯಲ್ಲಿನ ಪಠ್ಯಕ್ರಮಕ್ಕೆ ಸೇರಿಸಲು ಕೇಂದ್ರ ಸರಕಾರಕ್ಕೆ ಈ ಪ್ರಸ್ತಾವನೆಯನ್ನು ಕಳುಹಿಸಿದ್ದು, ಇವುಗಳು ನೂತನ ಪಠ್ಯಕ್ರಮದ ಭಾಗವಾಗುವ ಸಾಧ್ಯತೆಗಳಿವೆ ಎಂದು timesofindia.com ವರದಿ ಮಾಡಿದೆ.

ಕರ್ನಾಟಕವು ಕಳುಹಿಸಿರುವ ಪ್ರಸ್ತಾವನೆಯಲ್ಲಿ, ಸಂಸ್ಕೃತವನ್ನು ಮೂರನೇ ಭಾಷೆಯಾಗಿ ಕಡ್ಡಾಯ ಸೇರ್ಪಡೆ ಮಾಡುವ ಕುರಿತು ಉಲ್ಲೇಖಿಸಲಾಗಿದೆ. "ಸಾವಿರಾರು ಭಾಷೆಗಳ ನಾಡಿನಲ್ಲಿ ಕನಿಷ್ಠ ಮೂರು ಭಾಷೆಗಳನ್ನು ಕಲಿಸಬೇಕು. ಪ್ರಾದೇಶಿಕ ಭಾಷೆ, ಇಂಗ್ಲಿಷ್ ಮತ್ತು ಇನ್ನೊಂದು ಭಾರತೀಯ ಭಾಷೆ, ಪ್ರಮುಖವಾಗಿ ಸಂಸ್ಕೃತ. ಸಂಸ್ಕೃತವು ಭಾರತೀಯ ಜ್ಞಾನ ಅತೀಹೆಚ್ಚು ಲಭ್ಯವಿರುವ ಭಾಷೆಯಾಗಿದೆ ಮತ್ತು ಸಂಸ್ಕೃತದ ಮೂಲಭೂತ ಜ್ಞಾನವು ವಿದೇಶಿ ಭಾಷೆಗಳನ್ನು ಒಳಗೊಂಡಂತೆ ಯಾವುದೇ ಇತರ ಭಾಷೆಯನ್ನು ತೆಗೆದುಕೊಳ್ಳಲು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುತ್ತದೆ" ಎಂದು ಪ್ರಸ್ತಾವನೆಯಲ್ಲಿ ಹೇಳಲಾಗಿದೆ. 

ಪ್ರಸ್ತಾವನೆಯು ಪೈಥಾಗೋರಸ್ ಪ್ರಮೇಯ ಮತ್ತು ನ್ಯೂಟನ್‌ನ ತಲೆಯ ಮೇಲೆ ಸೇಬು ಬೀಳುವ ವಿಚಾರವನ್ನು 'ನಕಲಿ ಸುದ್ದಿ' ಎಂದು ಕರೆದಿದೆ. "ಪಠ್ಯಪುಸ್ತಕಗಳು (ಅಥವಾ ಮುದ್ರಣ/ಎಲೆಕ್ಟ್ರಾನಿಕ್/ಸಾಮಾಜಿಕ ಮಾಧ್ಯಮ) ಹೇಳುವ ಯಾವುದೇ ತಪ್ಪುಗಳನ್ನು ತಪ್ಪೇ ಇಲ್ಲದ ಸತ್ಯವೆಂದು ಒಪ್ಪಿಕೊಳ್ಳದೆ ಪ್ರಶ್ನಿಸುವ ಮನೋಭಾವವನ್ನು ಪ್ರೋತ್ಸಾಹಿಸಬೇಕಾಗಿದೆ. ಪೈಥಾಗೋರಸ್ ಪ್ರಮೇಯ ಮತ್ತು ನ್ಯೂಟನ್‌ನ ತಲೆಯ ಮೇಲೆ ಸೇಬು ಬೀಳುವ ನಕಲಿ ಸುದ್ದಿಗಳನ್ನು ಸೃಷ್ಟಿಸಿ ಪ್ರಚಾರ ಮಾಡಲಾಗುತ್ತಿದೆ" ಎಂದೂ ಉಲ್ಲೇಖಿಸಲಾಗಿದೆ. 

"ಯುರೋಪ್‌ ಮೂಲದ ಗಣಿತವನ್ನು ಬಿಟ್ಟು ಪ್ರಾಚೀನ ಭಾರತದ ಗಣಿತ ಪರಿಕಲ್ಪನೆಗಳನ್ನು ಸಂಯೋಜನೆ ಮಾಡಬೇಕು. ವೇಗವಾಗಿ ಮನಸ್ಸಿನಲ್ಲೇ ಲೆಕ್ಕಾಚಾರಗಳನ್ನು ಮಾಡಲು ವೈದಿಕ ಗಣಿತದ ಕೆಲವು ಸೂತ್ರಗಳನ್ನು ಪರಿಚಯಿಸಲು ಪ್ರಸ್ತಾವನೆಯು ಶಿಫಾರಸು ಮಾಡಿದೆ. ಪ್ರಸ್ತಾವನೆಯಲ್ಲಿನ ಮತ್ತೊಂದು ಸಲಹೆಯು ಗ್ರೀಕ್ ಗಣಿತಜ್ಞರಾದ ಪೈಥಾಗೊರಸ್ ಮತ್ತು ಹೆರಾನ್ ಅವರ ಮುಖಗಳ ಚಿತ್ರಣವನ್ನು ತೆಗೆದುಹಾಕಲು ಸಲಹೆ ನೀಡಿದ್ದು, ಭಾರತೀಯ ರೇಖಾಗಣಿತದ ಉದಾಹರಣೆಯನ್ನೂ ನೀಡಿದೆ. "ಭಾರತೀಯ ರೇಖಾಗಣಿತದ ಪಠ್ಯಪುಸ್ತಕಗಳಲ್ಲಿ ನೀಡಲಾದ ಕೆಲವು ಉದಾಹರಣೆಗಳನ್ನು ತರಗತಿಯ ಹೊರಗೆ, ಬಹುಶಃ ಆಟದ ಮೈದಾನದಲ್ಲಿ ಮಾಡಬಹುದು ಎಂದು ಶಿಫಾರಸು ಮಾಡಲಾಗಿದೆ. ಗ್ರೀಕ್ ಗಣಿತಶಾಸ್ತ್ರದ ವಿಭಾಗಗಳನ್ನು ಕಡಿಮೆಗೊಳಿಸಬೇಕಾಗಿದೆ, ವಿಶೇಷವಾಗಿ "ಗ್ರೀಕ್ ಗಣಿತಜ್ಞರ" ಮುಖಗಳ ಚಿತ್ರಣಗಳು. ಉದಾಹರಣೆಗೆ ಪೈಥಾಗರಸ್, ಹೆರಾನ್ ಇತ್ಯಾದಿ," ಎಂದು ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾಗಿದೆ.

ವಿಜ್ಞಾನ ಕ್ಷೇತ್ರದಲ್ಲಿ ಮಧ್ಯಕಾಲೀನ ಭಾರತೀಯ ಕೊಡುಗೆಗಳನ್ನು ಸೇರಿಸುವುದನ್ನು ಉಲ್ಲೇಖಿಸಿದ ಪ್ರಸ್ತಾವನೆಯು ಋಗ್ವೇದವು ಭೂಗ್ರಹದಲ್ಲೇ ಅತ್ಯಂತ ಹಳೆಯ ಮತ್ತು ಜೀವಂತ ಸಾಹಿತ್ಯವೆಂದು ಸರ್ವರಿಂದಲೂ ಅಂಗೀಕರಿಸಲ್ಪಟ್ಟಿದೆ ಎಂದಿದೆ. ಮಹಾತ್ಮ ಗಾಂಧಿ, ಬಿಆರ್ ಅಂಬೇಡ್ಕರ್ ಮತ್ತು ನೆಹರು ಅವರ ಕುರಿತಾದ ಪಾಠಗಳನ್ನು ತೆಗೆದುಹಾಕುವುದರ ಜೊತೆಗೆ ಆರ್‌ಎಸ್‌ಎಸ್ ವಿಚಾರವಾದಿಗಳಾದ ಕೆಬಿ ಹೆಡ್ಗೆವಾರ್ ಮತ್ತು ವಿನಾಯಕ ದಾಮೋದರ್ ಸಾವರ್ಕರ್ ಅವರ ಕುರಿತಾದ ಪಾಠಗಳನ್ನು ಸೇರಿಸಿದ ರಾಜ್ಯ ಸರ್ಕಾರವು ಕರ್ನಾಟಕದಲ್ಲಿ ಶಾಲಾ ಪಠ್ಯಪುಸ್ತಕಗಳಲ್ಲಿ ಮಾಡಿದ ಬದಲಾವಣೆಗಳ ವಿವಾದದ ನಡುವೆಯೇ ಈ ಪ್ರಸ್ತಾಪವು ಬಂದಿದೆ.

ಕೃಪೆ: Thenewsminute.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X