ಕಾರು- ಬೈಕ್ ಢಿಕ್ಕಿ: ಸಹೋದರರಿಬ್ಬರು ಮೃತ್ಯು
ಕಾರ್ಕಳ: ಕಾರೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಮೃತಪಟ್ಟ ಘಟನೆ ನಂದಳಿಕೆ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಜು.೧೦ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ನಂದಳಿಕೆಯ ಶೇಖರ ಎಂಬವರ ಪುತ್ರರಾದ ಸತೀಶ್ ಕುಲಾಲ್ (೨೮) ಹಾಗೂ ಸಂದೀಪ್ ಕುಲಾಲ್(೨೪) ಎಂದು ಗುರುತಿಸಲಾಗಿದೆ. ರಾಜ್ಯ ಹೆದ್ದಾರಿಯಲ್ಲಿ ಪಡುಬಿದ್ರೆ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು, ನಿಟ್ಟೆ ಕಡೆಯಿಂದ ಬೆಳ್ಮಣ್ ಕಡೆಗೆ ಬರುತ್ತಿದ್ದ ಸ್ಕೂಟರಿಗೆ ಢಿಕ್ಕಿ ಹೊಡೆಯಿತ್ತೆ ನ್ನಲಾಗಿದೆ. ಇದರಿಂದ ಸವಾರರಿಬ್ಬರು ಸ್ಕೂಟರ್ ಸಮೇತ ರಸ್ತೆಗೆ ಬಿದ್ದರು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಸವಾರ ಸಂದೀಪ್ ಕುಲಾಲ್ ಸ್ಥಳದಲ್ಲಿಯೇ ಹಾಗೂ ಸಹಸವಾರ ಸತೀಶ್ ಕುಲಾಲ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story