Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.ಜಿಲ್ಲೆಯಲ್ಲಿ ಮಳೆ ಇಳಿಮುಖ;...

ದ.ಕ.ಜಿಲ್ಲೆಯಲ್ಲಿ ಮಳೆ ಇಳಿಮುಖ; ಜೂ.12ರಿಂದ ಆರೆಂಜ್ ಅಲರ್ಟ್

ವಾರ್ತಾಭಾರತಿವಾರ್ತಾಭಾರತಿ11 July 2022 9:36 PM IST
share
ದ.ಕ.ಜಿಲ್ಲೆಯಲ್ಲಿ ಮಳೆ ಇಳಿಮುಖ; ಜೂ.12ರಿಂದ ಆರೆಂಜ್ ಅಲರ್ಟ್

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸೋಮವಾರ ಮಳೆ ಪ್ರಮಾಣದಲ್ಲಿ ಭಾರೀ ಇಳಿಮುಖವಾಗಿದೆ. ಆದರೂ ಮೋಡ ಕವಿದ ವಾತಾವರಣದೊಂದಿಗೆ ಆಗಾಗ ಮಳೆಯಾಗಿದೆ. ಈ ಮಧ್ಯೆ ಸತತವಾಗಿ ಸುರಿದ ಮಳೆಯಿಂದ ಸೋಮ ವಾರ ಹಾನಿಯ ಪ್ರಮಾಣದಲ್ಲಿ ತುಸು ಏರಿಕೆ ಕಂಡು ಬಂದಿವೆ.

ಕರಾವಳಿಯಲ್ಲಿ ಈ ಹಿಂದೆ ಘೋಷಿಸಲಾಗಿದ್ದ ರೆಡ್ ಅಲರ್ಟ್ ಮಂಗಳವಾರದಿಂದ ಆರೆಂಜ್ ಅಲರ್ಟ್ ಆಗಿ ಪರಿವರ್ತನೆಗೊಂಡಿವೆ. ಆರೆಂಜ್ ಅಲರ್ಟ್ ಶನಿವಾರ ಮುಂಜಾನೆವರೆಗೂ ಮುಂದುವರಿಯಲಿದೆ. ಹಾಗಾಗಿ ಮಳೆ ಒಂದಷ್ಟು ತಗ್ಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.

ರವಿವಾರ ಬೆಳಗ್ಗಿನಿಂದ ಸೋಮವಾರ ಬೆಳಗ್ಗಿನವರೆಗೆ ಸುಬ್ರಹ್ಮಣ್ಯದಲ್ಲಿ ಅತ್ಯಧಿಕ ೧೬ ಸೆಂ.ಮೀ. ಮಳೆಯಾಗಿದೆ. ಮೂಡುಬಿದಿರೆಯಲ್ಲಿ ೧೧, ಮಂಗಳೂರು ವಿಮಾನ ನಿಲ್ದಾಣ ಮತ್ತು ಬೆಳ್ತಂಗಡಿಯಲ್ಲಿ ತಲಾ ೯, ಪಣಂಬೂರು ಮತ್ತು  ಸುಳ್ಯದಲ್ಲಿ ತಲಾ ೮, ಪುತ್ತೂರು ಮತ್ತು ಮಂಗಳೂರಿನಲ್ಲಿ ತಲಾ ೭, ಮಾಣಿ, ಧರ್ಮಸ್ಥಳದಲ್ಲಿ ತಲಾ ೬ ಸೆಂ.ಮೀ. ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ತಿಳಿಸಿದೆ.

ಸೋಮವಾರ ಮಳೆ ಕಡಿಮೆ ಸುರಿದಿದ್ದರೂ ಕೂಡ ಸಮುದ್ರದಲ್ಲಿ ಬಲವಾದ ಗಾಳಿ ಬೀಸಿವೆ. ಪ್ರತಿ ಗಂಟೆಗೆ ೪೫-೫೫ ಕಿ.ಮೀ.ನಿಂದ ೬೫ ಕಿ.ಮೀ.ವರೆಗೆ ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಸಮುದ್ರದ ಪ್ರಕ್ಷುಬ್ಧತೆಯೂ ಮುಂದುವರಿದಿದೆ. ಭಾರಿ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿರುವುದರಿಂದ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಮುಂದುವರಿದ ಮಳೆಹಾನಿ

ಜಿಲ್ಲೆಯಲ್ಲಿ ಸೋಮವಾರವೂ ಮಳೆ ಹಾನಿಯ ಪ್ರಮಾಣ ಹೆಚ್ಚಾಗಿವೆ. ಸೋಮವಾರ ೧೪ ಮನೆಗಳು ಸಂಪೂರ್ಣ ನೆಲಸಮವಾಗಿದೆ ಮತ್ತು ೩೩ ಮನೆಗಳಿಗೆ ಭಾಗಶಃ ಹಾನಿಯಾಗಿವೆ. ಒಟ್ಟಾರೆ ಈವರೆಗೆ ೭೧ ಮನೆಗಳು ಸಂಪೂರ್ಣ ಮತ್ತು ೪೫೭ ಮನೆಗಳಿಗೆ ಭಾಗಶಃ ಹಾನಿಯಾಗಿವೆ.

ಜಿಲ್ಲೆಯಲ್ಲಿ ೯೧ ವಿದ್ಯುತ್ ಕಂಬಗಳು ಸೋಮವಾರ ಧರಾಶಾಹಿಯಾಗಿದೆ. ೮ ಟ್ರಾನ್ಸ್‌ಫಾರ್ಮರ್‌ಗಳು ಕೂಡ ನೆಲಸಮವಾಗಿದೆ. ಇದರಿಂದ ಈವರೆಗೆ ೩,೦೧೨ ವಿದ್ಯುತ್ ಕಂಬಗಳು ಮತ್ತು ೨೧೬ ಟ್ರಾನ್ಸ್‌ಫಾರ್ಮರ್‌ಗಳಿಗೆ ಹಾನಿಯಾಗಿದ್ದು, ಅಪಾರ ನಷ್ಟವಾಗಿದೆ.

ಸುಳ್ಯ ತಾಲೂಕಿನ ಜಾಲ್ಸೂರಿನಲ್ಲಿ ೨ ಕಾಳಜಿ ಕೇಂದ್ರ ತೆರೆಯಲಾಗಿದೆ. ಅದರಲ್ಲಿ ೬ ಮಂದಿ ಪುರುಷರು, ೪ ಮಂದಿ ಮಹಿಳೆಯರ ಸಹಿತ ೧೧ ಮಂದಿ ಆಶ್ರಯ ಪಡೆದಿದ್ದಾರೆ.
 
*ದ.ಕ.ಜಿಲ್ಲೆಯ ಮಳೆ ವಿವರ
*ಮಂಗಳೂರು: ೭೦.೧ ಮಿ.ಮೀ.
*ಬಂಟ್ವಾಳ: ೮೪.೬ ಮಿ.ಮೀ.
*ಪುತ್ತೂರು: ೮೪.೪ ಮಿ.ಮೀ.
*ಬೆಳ್ತಂಗಡಿ: ೭೫.೭ ಮಿ.ಮೀ
*ಸುಳ್ಯ: ೮೬.೭ ಮಿ.ಮೀ.
*ಮೂಡುಬಿದಿರೆ: ೧೦೭.೧ ಮಿ.ಮೀ
*ಕಡಬ: ೮೫.೫ ಮಿ.ಮೀ
(ಸರಾಸರಿ-೮೨.೪ ಮಿ.ಮೀ.)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X