Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 2022ರಲ್ಲಿ ದಾಖಲೆ ಮಟ್ಟವನ್ನು ತಲುಪಿದ...

2022ರಲ್ಲಿ ದಾಖಲೆ ಮಟ್ಟವನ್ನು ತಲುಪಿದ ಅಮೆಝಾನ್ ಅರಣ್ಯ ನಾಶ

ವಾರ್ತಾಭಾರತಿವಾರ್ತಾಭಾರತಿ12 July 2022 12:12 AM IST
share
2022ರಲ್ಲಿ ದಾಖಲೆ ಮಟ್ಟವನ್ನು ತಲುಪಿದ ಅಮೆಝಾನ್ ಅರಣ್ಯ ನಾಶ

ರಿಯೊಡಿ ಜನೈರೊ, ಜು.11: ಅಮಝಾನ್ ಅರಣ್ಯ ನಾಶ ಪ್ರಕ್ರಿಯೆ 2022ರಲ್ಲಿ ದಾಖಲೆ ಮಟ್ಟವನ್ನು ತಲುಪಿದ್ದು ನ್ಯೂಯಾರ್ಕ್ ನಗರದ 5 ಪಟ್ಟು ಹೆಚ್ಚಿನ ಅರಣ್ಯ ಪ್ರದೇಶ ನಾಶವಾಗಿದೆ ಎಂದು ಬ್ರೆಝಿಲ್‌ನ ಬಾಹ್ಯಾಕಾಶ ಸಂಸ್ಥೆ ವರದಿ ಮಾಡಿದೆ.

 ಅಮಝಾನ್ ಮಳೆ ಕಾಡಿನ ನಾಶ ಪ್ರಕ್ರಿಯೆ ಈ ವರ್ಷದ ಆರಂಭದ 6 ತಿಂಗಳಲ್ಲೇ ಅತ್ಯಂತ ಗರಿಷ್ಟ ಮಟ್ಟ ತಲುಪಿ ದಾಖಲೆ ಬರೆದಿದೆ. ಗ್ರಹದ ಆಮ್ಲಜನಕ ಮತ್ತು ಇಂಗಾಲ್ ಡೈಆಕ್ಸೈಡ್ ಚಕ್ರವನ್ನು ನಿರ್ವಹಿಸುವಲ್ಲಿ ನಿರ್ಣಾಯಕ ಪಾತ್ರವನ್ನು ನಿರ್ವಹಿಸುವ ಮಳೆಕಾಡಿಗೆ ಉಂಟಾಗಿರುವ ಹಾನಿ ಪರಿಸರವಾದಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ನ್ಯೂಯಾರ್ಕ್ ನಗರದ 5 ಪಟ್ಟಿನಷ್ಟು ಅಮೆಝಾನ್ ಮಳೆಕಾಡು ನಾಶವಾಗಿರುವುದು ಬ್ರೆಝಿಲ್‌ನ ಬಾಹ್ಯಾಕಾಶ ಸಂಸ್ಥೆ ಸಂಗ್ರಹಿಸಿರುವ ಉಪಗ್ರಹಗಳ ಚಿತ್ರಗಳಿಂದ ವ್ಯಕ್ತವಾಗಿದೆ. ಇದು 2016ರ ಬಳಿಕದ ಅತ್ಯಧಿಕ ಪ್ರಮಾಣವಾಗಿದೆ ಎಂದು ಸಂಸ್ಥೆ ಹೇಳಿದೆ.ಈ ವರ್ಷದ ಜನವರಿಯಿಂದ ಜೂನ್‌ವರೆಗಿನ ಉಪಗ್ರಹ ಮಾಹಿತಿಯ ಪ್ರಕಾರ 3,998 ಚದರ ಕಿ.ಮೀ ವ್ಯಾಪ್ತಿಯ ಅಮಝಾನ್ ಅರಣ್ಯ ನಾಶವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 3,088 ಚದರ ಕಿ.ಮೀ ಮಳೆಕಾಡು ನಾಶವಾಗಿತ್ತು. ಜೂನ್ ತಿಂಗಳೊಂದರಲ್ಲೇ 1,120 ಚದರಡಿ ಮಳೆಕಾಡು ನಾಶವಾಗಿದ್ದು ಇದೂ ಒಂದು ದಾಖಲೆಯಾಗಿದೆ.

ವಿಶ್ವದ ಅತೀ ದೊಡ್ಡ ಮಳೆಕಾಡು ಅಮಝಾನ್, ಅಪಾರ ಪ್ರಮಾಣದ ಇಂಗಾಲವನ್ನು ಹೊಂದಿದೆ. ಆದ್ದರಿಂದಲೇ ಅದನ್ನು ಇಂಗಾಲದ ತೊಟ್ಟಿ ಎಂದು ಕರೆಯಲಾಗುತ್ತದೆ. ಮರಗಳು ನಾಶವಾದರೆ ಕಾಡಲ್ಲಿರುವ ಇಂಗಾಲ ವಾತಾವರಣವನ್ನು ಸೇರಿಕೊಂಡು ವಾತಾವರಣದ ಉಷ್ಣತೆ ಹೆಚ್ಚಿಸುತ್ತದೆ ಮತ್ತು ಹವಾಮಾನ ಬದಲಾವಣೆ ಮತ್ತು ಹವಾಮಾನ ವೈಪರೀತ್ಯ ಸಮಸ್ಯೆಗೆ ಕಾರಣವಾಗುತ್ತದೆ.

ಕಳೆದ ಕೆಲ ದಶಕಗಳಲ್ಲಿ ಹೆಚ್ಚಾಗಿ ಜಾನುವಾರು ಸಾಕಣೆ ಮತ್ತು ಕೃಷಿಗಾಗಿ ಭೂಮಿಯನ್ನು ಪರಿವರ್ತಿಸುವುದರಿಂದ ಮಳೆಕಾಡಿನ ಅಸ್ತಿತ್ವವು ತೀವ್ರವಾದ ಅಪಾಯದಲ್ಲಿದೆ. ಕಳೆದ 5 ದಶಕಗಳಲ್ಲಿ ಅಮಝಾನ್ ತನ್ನ ಅರಣ್ಯದ ಕನಿಷ್ಟ 17%ದಷ್ಟನ್ನು ಕಳೆದುಕೊಂಡಿದೆ ಎಂದು ವಿವಿಧ ಅಧ್ಯಯನ ವರದಿ ಹೇಳಿದೆ. ಭೂಮಿಯ ವಾತಾವರಣದಲ್ಲಿರುವ ಇಂತಹ ಪ್ರಮುಖ ಭಾಗದ ಅರಣ್ಯನಾಶವನ್ನು ತಡೆಯಲು ಬ್ರೆಝಿಲ್ ಅಧ್ಯಕ್ಷ ಜಯರ್ ಬೊಲ್ಸೊನಾರೊ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೆಲವು ಪರಿಸರವಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಮಝಾನ್‌ನಲ್ಲಿ ಅರಣ್ಯ ನಾಶ ಅತ್ಯಂತ ಆಳದ ಮಟ್ಟಿಗೆ ತಲುಪಿದೆ. ಕಳೆದ 6 ತಿಂಗಳಲ್ಲಿ ಅಮಝಾನ್ ಅರಣ್ಯಪ್ರದೇಶದ ಹೃದಯ ಭಾಗದಲ್ಲಿರುವ ಅಮೆಝೊನಾಸ್ ರಾಜ್ಯದಲ್ಲಿ ದಾಖಲೆ ಮಟ್ಟದ ಅರಣ್ಯನಾಶ ನಡೆದಿದೆ ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X