Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನೆರೆ | ಮುಂಜಾಗೃತಾ ಕ್ರಮ ವಹಿಸಲು ಸರಕಾರ...

ನೆರೆ | ಮುಂಜಾಗೃತಾ ಕ್ರಮ ವಹಿಸಲು ಸರಕಾರ ವಿಫಲ: ಕಾಂಗ್ರೆಸ್ ನಾಯಕರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ12 July 2022 3:34 PM IST
share
ನೆರೆ | ಮುಂಜಾಗೃತಾ ಕ್ರಮ ವಹಿಸಲು ಸರಕಾರ ವಿಫಲ: ಕಾಂಗ್ರೆಸ್ ನಾಯಕರ ಆಕ್ರೋಶ

ಮಂಗಳೂರು, ಜು. 11: ಈ ಹಿಂದಿನ ಕೆಲ ವರ್ಷಗಳಲ್ಲಿ ಸಂಭವಿಸಿರುವ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ಪೂರ್ಣ ಪ್ರಮಾಣದಲ್ಲಿ ಪರಿಹಾರ ಒದಗಿಸುವಲ್ಲಿ ವಿಫಲವಾಗಿರುವ ರಾಜ್ಯ ಸರಕಾರ ಈ ಬಾರಿ ಮುಂಜಾಗೃತಾ ಕ್ರಮವನ್ನೂ ವಹಿಸಿಲ್ಲ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕರು ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಕರೆಯಲಾದ ಜಂಟಿ ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕಳೆದ ಸುಮಾರು ಮೂರು ವರ್ಷಗಳಲ್ಲಿ ಮಳೆ, ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ಸಮೀಕ್ಷೆ ನಡೆದು ಕೇಂದ್ರಕ್ಕೆ ವರದಿ ಸಲ್ಲಿಸಿದರೂ ಸೂಕ್ತ ಸ್ಪಂದನ ದೊರಕಿಲ್ಲ. 25 ಬಿಜೆಪಿ ಸಂಸದರು, ಡಬಲ್ ಇಂಜಿನ್ ಸರಕಾರವಿದ್ದರೂ ಪ್ರಯೋಜನವಾಗಿಲ್ಲ ಎಂದು ವ್ಯಂಗ್ಯವಾಡಿದರು.

ಕಳೆದ ಸುಮಾರು ಮೂರು ವರ್ಷಗಳಲ್ಲಿ ಸುಮಾರು 8,000 ಕೋಟಿ ರೂ.ನಷ್ಟು ಹಾನಿಯಾಗಿದ್ದು, ಕೇಂದ್ರದಿಂದ ದೊರಕಿದ್ದು, 3,965 ಕೋಟಿ ರೂ. ಮಾತ್ರ. ಈ ಹಣದಲ್ಲಿ ರಾಜ್ಯ ಸರಕಾರದ ಶೇ.40 ಕಳೆದು ಕಾಮಗಾರಿಗಳಲ್ಲಿ ಎಷ್ಟು ಕೆಲಸ ಆಗಿದೆ ಎಂಬುದನ್ನು ಊಹಿಸಬಹುದಾಗಿದೆ. ಈ ಬಾರಿಯೂ ಮಳೆಯಿಂದಾಗಿ ದ.ಕ. ಜಿಲ್ಲೆಯಲ್ಲಿ ನೆರೆಯಿಂದ ಸಾಕಷ್ಟು ಜನರು ತತ್ತರಿಸಿದ್ದಾರೆ. 185 ಹೆಕ್ಟೇರ್ ಕೃಷಿ ಭೂಮಿ ಹಾನಿಗೊಳಾಗಿದೆ. 12 ಹೆಕ್ಟೇರ್ ಅಡಿಕೆ ತೋಟ ಹಾನಿಗೊಳಗಾಗಿದೆ. ಅಧಿಕೃತವಾಗಿ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಅಂಗನವಾಡಿ, ಶಾಲಾ ಕಾಲೇಜು ಕಟ್ಟಡಗಳಿಗೆ ಹಾನಿಯಾಗಿದೆ. ಕಡಲ್ಕೊರೆತ ತೀವ್ರವಾಗಿದೆ. ಆದರೆ ಉಸ್ತುವಾರಿ ಸಚಿವರು ಮಾತ್ರ ಭೇಟಿ ನೀಡಿ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಿಲ್ಲ. ಮಳೆಗಾಲಕ್ಕೆ ಮುಂಚಿತವಾಗಿ ಸರ್ವ ಪಕ್ಷಗಳ ಸಭೆ ಕರೆದು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ದೂರಿದರು.

ಪ್ರಾಕೃತಿಕ ವಿಕೋಪದ ಸಂದರ್ಭ ಜನರಿಗಾಗಿರುವ ತೊಂದರೆಯನ್ನು ಆಲಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಸಚಿವರು ವಿಫಲವಾಗಿರುವುದಕ್ಕೆ ಮುಖ್ಯಮಂತ್ರಿಯ ಜಿಲ್ಲಾ ಭೇಟಿ ಸಾಕ್ಷಿಯಾಗಿದೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.

ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಮಸ್ಯೆ ಗಂಭೀರವಾಗಿದೆ. ಹಿಂದೆಲ್ಲಾ ಮಳೆಗಾಲಕ್ಕೆ ಮುಂಚಿತವಾಗಿ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪೂರ್ವಭಾವಿ ಸಭೆ ನಡೆಸಿ ಕ್ರಮ ವಹಿಸಲಾಗುತ್ತಿತ್ತು. ತುರ್ತು ಪರಿಹಾರ ನೀಡುವ ಕ್ರಮವಾಗುತ್ತಿತ್ತು. ಆದರೆ ಅದ್ಯಾವುದೂ ಪ್ರಸಕ್ತ ಸರಕಾರದಿಂದ ಆಗುತ್ತಿಲ್ಲ. ಸಜೀವ ಸರಕಾರಕ್ಕೆ ಮಳೆಗಾಲಕ್ಕೆ ಪೂರ್ವಭಾವಿಯಾಗಿ ಸರ್ವಪಕ್ಷ ಸಭೆ ನಡೆಸಲು ವಿಪಕ್ಷ ಒತ್ತಾಯ ಮಾಡಬೇಕಾದ ಅಗತ್ಯವಿಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ, ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಸದಾಶಿವ ಉಳ್ಳಾಲ್, ಶಾಹುಲ್ ಹಮೀದ್, ಶುಭೋದಯ ಆಳ್ವ, ನೀರಜ್ ಪಾಲ್, ಸುಧೀರ್ ಟಿ.ಕೆ., ಲಾರೆನ್ಸ್, ಭರತೇಶ್, ಜೋಕಿಂ, ವರದೇಶ್ ಅಮೀನ್, ಸುರೇಂದ್ರ ಕಾಂಬ್ಳಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X