Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚಾಮರಾಜಪೇಟೆ ಬಂದ್‍ಗೆ ಸಿಗದ ಬೆಂಬಲ:...

ಚಾಮರಾಜಪೇಟೆ ಬಂದ್‍ಗೆ ಸಿಗದ ಬೆಂಬಲ: ಎಂದಿನಂತೆ ಜನರ ಓಡಾಟ, ವ್ಯವಹಾರ

ವಾರ್ತಾಭಾರತಿವಾರ್ತಾಭಾರತಿ12 July 2022 7:17 PM IST
share
ಚಾಮರಾಜಪೇಟೆ ಬಂದ್‍ಗೆ ಸಿಗದ ಬೆಂಬಲ: ಎಂದಿನಂತೆ ಜನರ ಓಡಾಟ, ವ್ಯವಹಾರ

ಬೆಂಗಳೂರು, ಜು.12: ಈದ್ಗಾ ಮೈದಾನ ವಿವಾದ ಸಂಬಂಧ ಮಂಗಳವಾರ ಚಾಮರಾಜಪೇಟೆ ನಾಗರಿಕ ವೇದಿಕೆ, ಹಿಂದುತ್ವ ಸಂಘಟನೆಗಳು ಕರೆ ನೀಡಿದ್ದ ‘ಚಾಮರಾಜಪೇಟೆ ಬಂದ್’ಗೆ ಸೂಕ್ತ ರೀತಿಯಲ್ಲಿ ಬೆಂಬಲ ದೊರೆಯದ ಕಾರಣ, ಎಂದಿನಂತೆ ಜನಜಂಗುಳಿ ಕಂಡುಬಂದಿತು.

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಏಳು ವಾರ್ಡ್‍ಗಳ ಪೈಕಿ ಬರೀ ಚಾಮರಾಜಪೇಟೆ ವಾರ್ಡ್‍ನ ಮುಖ್ಯ ರಸ್ತೆಗಳಲ್ಲಿ ಅಂಗಡಿ ಮುಂಗಟ್ಟು, ವ್ಯಾಪಾರ ಚಟುವಟಿಕೆಗಳು ಬಂದ್ ಆಗಿದ್ದವು. ಜತೆಗೆ, ಅಹಿತಕರ ಘಟನೆಗಳು ನಡೆಯಬಹುದು ಎನ್ನುವ ಆತಂಕದಲ್ಲಿ ಕೆಲ ಖಾಸಗಿ ಶಾಲೆಗಳಲ್ಲಿ ರಜೆ ಘೋಷಿಸಲಾಗಿತ್ತು.

ಇನ್ನುಳಿದ ಗೋರಿಪಾಳ್ಯ, ಜೆ.ಜೆ ನಗರ, ಕೆಆರ್ ಮಾರುಕಟ್ಟೆ, ಪಾದರಾಯನಪುರ, ಭಕ್ಷಿಗಾರ್ಡನ್, ಆಝಾದ್ ನಗರ ವಾರ್ಡ್‍ಗಳಲ್ಲಿ ಬಂದ್‍ಗೆ ಬೆಂಬಲ ನೀಡದ ಹಿನ್ನೆಲೆ ಸಂಚಾರದಟ್ಟಣೆ, ಜನರ ಓಡಾಟ ಎಂದಿನಂತೆ ಕಂಡುಬಂದಿತು.

ಅಂಗಡಿ ಬಂದ್‍ಗೆ ಪಟ್ಟು: ಇಲ್ಲಿನ ಈದ್ಗಾ ಮೈದಾನ ವ್ಯಾಪ್ತಿಯಲ್ಲಿ ಎಂದಿನಂತೆ ಅಂಗಡಿ ತೆರೆಯಲು ಮುಂದಾದ ವರ್ತಕರೊಂದಿಗೆ ವಾಗ್ವಾದ ನಡೆಸಿದ ಹಿಂದುತ್ವ ಸಂಘಟನೆಗಳ ಕಾರ್ಯಕರ್ತರು, ಅಂಗಡಿ ಬಂದ್ ಮಾಡುವಂತೆ ಪಟ್ಟುಹಿಡಿದರು. ಇದಕ್ಕೆ ಸ್ಪಂದಿಸದ ಹಿನ್ನೆಲೆ ಬಲವಂತವಾಗಿ ಮುಚ್ಚಿಸಲು ಯತ್ನಿಸಿದರು ಹಲವರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದ ದೃಶ್ಯ ಕಂಡುಬಂದಿತು.

ಬಂದ್ ಕುರಿತು ಪ್ರತಿಕ್ರಿಯಿಸಿದ ಮಂಡಿಪೇಟೆ ಸಂಘದ ಅಧ್ಯಕ್ಷ ದಿನೇಶ್, ಚಾಮರಾಜಪೇಟೆ ಬಂದ್‍ಗೆ ಕರೆ ಕೊಟ್ಟಿರುವ ದುಷ್ಕರ್ಮಿಗಳು ಇಂದು ಈದ್ಗಾ ಮೈದಾನದ ಸುತ್ತಮುತ್ತಲಿನ ನಾಲ್ಕೈದು ರಸ್ತೆಗಳನ್ನು ಬಲವಂತವಾಗಿ ಮುಚ್ಚಿಸಿದ್ದಾರೆ. ಅದನ್ನು ಹೊರತುಪಡಿಸಿ ಚಾಮರಾಜಪೇಟೆಯ ಎಲ್ಲ ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದಿವೆ ಎಂದರು.

ನಮ್ಮ ಬಳಿಯೂ ಬೆಳಗ್ಗೆ ಕೆಲವರು ಬಂದು ಅಂಗಡಿಗಳನ್ನು ಮುಚ್ಚಿಸುವಂತೆ ಒತ್ತಾಯ ಮಾಡಿದರು. ಆದರೆ, ನಾವು ಅವರ ಬೆದರಿಕೆಗೆ ಜಗ್ಗಿಲ್ಲ. ನಾವೆಲ್ಲರೂ ಅಣ್ಣತಮ್ಮಂದಿರಂತೆ ಸಹಬಾಳ್ವೆ ನಡೆಸುತ್ತಿರುವಾಗ ಬಂದ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ನುಡಿದರು.

ನಾಗರಿಕ ಒಕ್ಕೂಟ ವೇದಿಕೆಯ ಕಾರ್ಯದರ್ಶಿ ರುಕ್ಮಾಂಗದ ಮಾತನಾಡಿ, ಇಂದು ಕರೆ ನೀಡಿರುವ ಬಂದ್‍ಗೆ ಬೆಳಗ್ಗೆಯಿಂದಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಮ್ಮ ಮನವಿಗೆ ಜನ ಸ್ಪಂದಿಸಿದ್ದಾರೆ ಎಂದರು.

ಬಂದೋಬಸ್ತ್: ಬಂದ್ ಹಿನ್ನೆಲೆ ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಒಟ್ಟು 8 ಸೆಕ್ಟರ್ ಹಾಗೂ 15 ಜಂಕ್ಷನ್‍ಗಳಾಗಿ ವಿಂಗಡಿಸಿರುವ ಪೊಲೀಸರು, ಸೆಕ್ಟರ್‍ಗಳಿಗೆ ಇನ್‍ಸ್ಪೆಕ್ಟರ್ ಉಸ್ತುವಾರಿ ನಿಯೋಜಿಸಲಾಗಿತ್ತು. ಪ್ರತಿ ಜಂಕ್ಷನ್‍ನಲ್ಲಿ ಪಿಎಸ್ಸೈ ಸೇರಿ ಪೊಲೀಸ್ ಸಿಬ್ಬಂದಿ ಭದ್ರತೆಗೆ ನಿಯೋಜನೆ ಮಾಡಲಾಗಿತ್ತು. ಜೊತೆಗೆ ಹೊಯ್ಸಳ ರೌಂಡ್ಸ್ ನಡೆಸಲಾಯಿತು.

ಪೊಲೀಸರೊಂದಿಗೆ ವಾಗ್ವಾದ..!

ಚಾಮರಾಜಪೇಟೆ ಮೈದಾನದ ಬಳಿ ನಾಗರಿಕರನ್ನು ತಡೆದ ಪೊಲೀಸರು, ಮೈದಾನದ ಒಳಗೆ ಬರಬೇಡಿ ಎಂದು ಜಾಗೃತಿ ಮೂಡಿಸಿದರು. ಆದರೆ, ಪ್ರತಿಭಟನಾಕಾರರು ಇದು ನಮ್ಮ ಮೈದಾನ, ಸಾರ್ವಜನಿಕರ ಮೈದಾನ, ನಾವ್ಯಾಕೆ ಹೊರಗೆ ಹೋಗಬೇಕು ಎಂದು ವಾಗ್ವಾದ ನಡೆಸಿದ ಪ್ರಸಂಗ ಜರುಗಿತು. ಈ ವೇಳೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮೈದಾನದಲ್ಲಿ ಇದ್ದವರನ್ನು ಹೊರಕಳುಹಿಸಿದರು.

ಬೇಡಿಕೆಗಳೇನು?

ಚಾಮರಾಜಪೇಟೆ ಮೈದಾನ ಬಿಬಿಎಂಪಿ ಸ್ವತ್ತು ಎಂದು ಘೋಷಿಸಬೇಕು. ಮೈದಾನವನ್ನು ಆಟದ ಮೈದಾನವನ್ನಾಗಿಯೇ ಉಳಿಸಬೇಕು. ಚಾಮರಾಜಪೇಟೆ ಮೈದಾನಕ್ಕೆ ಜಯಚಾಮರಾಜೇಂದ್ರ ಮೈದಾನ ಎಂದು ನಾಮಕರಣ ಮಾಡಬೇಕು. ಯಾವುದೇ ಕಾರಣಕ್ಕೂ ವಕ್ಫ್ ಬೋರ್ಡ್‍ಗೆ ವಹಿಸಬಾರದು. ಮೈದಾನ ವಿಚಾರವಾಗಿ ಕಾನೂನಾತ್ಮಕವಾಗಿ ಹೋರಾಡಲು ಸಮಿತಿ ರಚಿಸಬೇಕು.

ಮುಖಂಡರು ಪೊಲೀಸ್ ವಶಕ್ಕೆ

ಈದ್ಗಾ ಮೈದಾನ ಪ್ರವೇಶಕ್ಕೆ ಮುಂದಾದ ವೇಳೆ ಶ್ರೀರಾಮಸೇನೆ ಬೆಂಗಳೂರು ಅಧ್ಯಕ್ಷ ಚಂದ್ರಶೇಖರ್, ನಾಗರಿಕ ವೇದಿಕೆಯ ಕೆಲ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.

ಬಂದ್ ಬೆಂಬಲಿಸದ ಐಯ್ಯಂಗಾರ್ ಬೇಕರಿ

ಈದ್ಗಾ ಮೈದಾನ ಸಂಬಂಧ ಹಿಂದುತ್ವ ಸಂಘಟನೆಗಳು ಕರೆ ನೀಡಿದ್ದ ಬಂದ್‍ಗೆ ಯಾವುದೇ ಬೆಂಬಲ ನೀಡದೆ, ವರ್ತಕರು ಅಂಗಡಿಗಳನ್ನು ತೆರೆದು ವ್ಯಾಪಾರ ನಡೆಸುತ್ತಿದ್ದ ದೃಶ್ಯ ಕಂಡಿತು. ಚಾಮರಾಜಪೇಟೆಯ ಶಂಕರಮಠದ ಮುಖ್ಯರಸ್ತೆಯಲ್ಲಿರುವ ಹೆಸರಾಂತ ಐಯ್ಯಂಗಾರ್ ಬೇಕರಿಯಲ್ಲಿಯೂ ಗ್ರಾಹಕರು ಎಂದಿನಂತೆ ವ್ಯಾಪಾರದಲ್ಲಿ ನಿರತರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X