ಜುಗಾರಿ ಆಟವಾಡುತ್ತಿದ್ದ 28 ಮಂದಿಯ ಸೆರೆ
ಮಂಗಳೂರು, ಜು.೧೨: ನಗರದ ರಾವ್ ಆ್ಯಂಡ್ ರಾವ್ ಸರ್ಕಲ್ ಸಮೀಪದ ರಿಕ್ರಿಯೇಷನ್ ಕ್ಲಬ್ವೊಂದರಲ್ಲಿ ಅಂದರ್-ಬಾಹರ್ ಜುಗಾರಿ ಆಟವಾಡುತ್ತಿದ್ದ ಆರೋಪದ ಮೇರೆಗೆ ೨೮ ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸರ ತಂಡ ಆರೋಪಿಗಳನ್ನು ಬಂಧಿಸಿ ೧.೦೩ ಲ.ರೂ. ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





