Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ; ಕಡಲ್ಕೊರೆತದಿಂದ ಅಪಾರ ಹಾನಿ...

ಉಳ್ಳಾಲ; ಕಡಲ್ಕೊರೆತದಿಂದ ಅಪಾರ ಹಾನಿ ಸಂಭವಿಸಿದ ಬಟ್ಟಂಪಾಡಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

"ಕಾಸರಗೋಡಿನ ನೆಲ್ಲಿಕುನ್ನು ಮಾದರಿಯ ಸೀವೇವ್ ಬ್ರೇಕರ್ಸ್ ತಂತ್ರಜ್ಞಾನ ಅಳವಡಿಕೆ"

ವಾರ್ತಾಭಾರತಿವಾರ್ತಾಭಾರತಿ12 July 2022 9:53 PM IST
share
ಉಳ್ಳಾಲ; ಕಡಲ್ಕೊರೆತದಿಂದ ಅಪಾರ ಹಾನಿ ಸಂಭವಿಸಿದ ಬಟ್ಟಂಪಾಡಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಉಳ್ಳಾಲ; ತೀವ್ರ ಕಡಲ್ಕೊರೆತದಿಂದ ಅಪಾರ ಹಾನಿ ಸಂಭವಿಸಿದ ಸೋಮೇಶ್ವರ ಪಟ್ಟಣ ಪಂಚಾಯತ್ ವ್ಯಾಪ್ತಿಯ ಬಟ್ಟಂಪಾಡಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾಸರಗೋಡಿನ ನೆಲ್ಲಿಕುನ್ನು ಮಾದರಿಯ ಸೀವೇವ್ ಬ್ರೇಕರ್ಸ್ ತಂತ್ರಜ್ಞಾನವನ್ನು ಇಲ್ಲೂ ಅಳವಡಿಸುವುದಾಗಿ ಹೇಳಿದರು.

ಬೆಟ್ಟಂಪಾಡಿ ಕಡಲ್ಕೊರೆತದಿಂದ ತೀವ್ರ ಹಾನಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಬಟ್ಪಂಪಾಡಿಯಲ್ಲಿ ರಸ್ತೆ ಸಹಿತ ಮನೆ ಕೂಡಾ ಸಮುದ್ರ ಪಾಲಾಗಿದ್ದು ತಿಳಿದು ಪರಿಶೀಲನೆಗಾಗಿ ಬಂದಿದ್ದೇನೆ. ಕಡಲ್ಕೊರೆತ ತಡೆಗಟ್ಟಲು ಮಾಡಲಾದ ಎಡಿಬಿ ಕಾಮಗಾರಿ ವ್ಯರ್ಥ ಆಗಿದೆ. ಹಾಕಿದ ಕಲ್ಲು ಸಮುದ್ರ ಪಾಲಾಗಿದೆ ಎಂಬ ಆರೋಪ ಇದೆ. ಇನ್ನು ಈ ಕಡಲ್ಕೊರೆತ ತಡೆಗಟ್ಟಲು ತಜ್ಞರಿಂದ ಪರಿಶೀಲನೆ ನಡೆಸಿ ಅವರಿಂದ ವರದಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಈಗಾಗಲೇ ಹಾನಿಯಾದ ಮನೆಗಳಿಗೆ ಪರಿಹಾರ ಒದಗಿಸಲು ನಿರ್ಧರಿಸಲಾಗಿದೆ. 30 ಮೀನುಗಾರರ ಮನೆ ಪರಿಶೀಲನೆ ನಡೆಸಿ ತೊಂದರೆಗೊಳಗಾದ ಕುಟುಂಬವನ್ನು ಶೀಘ್ರ ಸ್ಥಳಾಂತರ ಮಾಡಬೇಕು. ಆಗಷ್ಟ್ ತಿಂಗಳಲ್ಲಿ ಮತ್ತೆ ಮಳೆ ಬರುತ್ತದೆ. ಈ ವೇಳೆ ಕಡಲ್ಕೊರೆತ ತೀವ್ರಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಕಡಲ್ಕೊರೆತ ಪ್ರದೇಶಗಳನ್ನು  ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ಸಮಸ್ಯೆ ಇದೆ. ಈ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದೇನೆ ಎಂದು ಸಿಎಂ ಹೇಳಿದರು.

ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿರುವ ಹಾನಿ ನೋಡಿದ್ದೇನೆ. ದಕ್ಷಿಣ ಕನ್ನಡದ ಸುಳ್ಯದಲ್ಲಿ ಭೂ ಕಂಪನದಿಂದ ಹಾನಿಯಾದ ಮನೆಗಳಿಗೆ ಭೇಟಿ ಕೊಟ್ಟಿದ್ದೇನೆ. ಭೂ ಕಂಪನದಿಂದ ಎಫೆಕ್ಟ್ ತುಂಬಾ ಆಗಿದೆ. ಉಪ್ಪಿನಂಗಡಿಯಲ್ಲಿ ನದಿಗಳ ಸಂಗಮ ಪ್ರದೇಶದಲ್ಲಿ ತೋಟಗಳಿಗೆ ಹಾನಿ ಆಗಿದೆ. ಭೂ ಕಂಪನದ ಬಗ್ಗೆ ಅಧ್ಯಯನಕ್ಕೆ ಮೂರು, ನಾಲ್ಕು ಸಂಸ್ಥೆಗೆ ಹೇಳಿದ್ದೇವೆ. ಅವರು ಅಧ್ಯಯನ ಮಾಡಿ‌ ಸಲಹೆ ನೀಡಿದ ನಂತರ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಕಡಲ್ಕೊರೆತ ಸಂತ್ರಸ್ತರ ಅಹವಾಲು ಆಲಿಸಿದ ಸಿ.ಎಂ ಶಾಶ್ವತ ಪರಿಹಾರದ ಭರವಸೆ ನೀಡಿದರು. ಶಾಸಕ ಯು.ಟಿ.ಖಾದರ್ ರಿಂದ ಸಮಸ್ಯೆ ಬಗ್ಗೆ ವಿವರಣೆ ಪಡೆದ ಸಿ.ಎಂ, ಸಮಸ್ಯೆ ಆಲಿಸಿ ನೇರವಾಗಿ ಉಡುಪಿಗೆ ತೆರಳಿದರು.

ಈ ಸಂದರ್ಭ ಕಂದಾಯ ಸಚಿವರಾದ ಆರ್‌. ಅಶೋಕ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಶಾಸಕರಾದ ಯು.ಟಿ.ಖಾದರ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಸೇರಿದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X