Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇರಾನ್ ನ ಪರಮಾಣು ಬಾಂಬ್ ತಡೆಯಲು...

ಇರಾನ್ ನ ಪರಮಾಣು ಬಾಂಬ್ ತಡೆಯಲು ಅಮೆರಿಕ-ಇಸ್ರೇಲ್ ಒಪ್ಪಂದ

ವಾರ್ತಾಭಾರತಿವಾರ್ತಾಭಾರತಿ13 July 2022 9:00 PM IST
share
ಇರಾನ್ ನ ಪರಮಾಣು ಬಾಂಬ್ ತಡೆಯಲು ಅಮೆರಿಕ-ಇಸ್ರೇಲ್ ಒಪ್ಪಂದ

ಜೆರುಸಲೇಂ, ಜು.13: ಇರಾನ್ ಎಂದಿಗೂ ಪರಮಾಣು ಶಸ್ತ್ರಾಸ್ತ್ರ ಪಡೆಯುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ಅಮೆರಿಕ ಮತ್ತು ಇಸ್ರೇಲ್ ಮಧ್ಯೆ ಹೊಸ ಒಪ್ಪಂದ ರೂಪುಗೊಂಡಿದ್ದು ಇದಕ್ಕೆ ಈ ವಾರ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಇಸ್ರೇಲ್ ಭೇಟಿ ಸಂದರ್ಭ ಸಹಿಬೀಳಲಿದೆ ಎಂದು ಇಸ್ರೇಲ್ ನ ಅಧಿಕಾರಿಗಳು ಹೇಳಿದ್ದಾರೆ. ಇರಾನ್ ನ ಪರಮಾಣು ಕಾರ್ಯಕ್ರಮ ಮತ್ತು ಪ್ರಾದೇಶಿಕ ಆಕ್ರಮಣದ ವಿರುದ್ಧ ಜಂಟಿ ನಿಲುವಿನ ಘೋಷಣೆಯು ಈ ವಾರ ಇಸ್ರೇಲ್ಗೆ ಬೈಡನ್ ಭೇಟಿಯ ಕೇಂದ್ರ ಬಿಂದುವಾಗಿದೆ.

 
ಅಮೆರಿಕದ ಯಾವುದೇ ಪ್ರತಿನಿಧಿಯೊಡನೆ ಇಸ್ರೇಲ್ ನಡೆಸುವ ಮಾತುಕತೆಯಲ್ಲಿ ಇರಾನ್ ವಿಷಯಕ್ಕೆ ಪ್ರಮುಖ ಆದ್ಯತೆ ಇರುತ್ತದೆ. ಇರಾನ್ ತನ್ನ ಬಾಧ್ಯತೆಗಳನ್ನು ನಿರಂತರ ಉಲ್ಲಂಘಿಸುತ್ತಿದೆ ಮತ್ತು ಅಂತರಾಷ್ಟ್ರೀಯ ಸಮುದಾಯವನ್ನು ಮೋಸಗೊಳಿಸುವುದನ್ನು ಮುಂದುವರಿಸಿದೆ. 

ಇದೀಗ 2015ರ ಪರಮಾಣು ಒಪ್ಪಂದದ ಮರುಸ್ಥಾಪನೆಯ ವಿಷಯದಲ್ಲಿ ಇರಾನ್ ಸಮಯದೊಂದಿಗೆ ಆಟವಾಡುತ್ತಿದೆ. ಸಮಯವು ತನ್ನ ಪರವಾಗಿದೆ ಎಂಬ ವಿಶ್ವಾಸ ಇರುವವರೆಗೆ ಇರಾನ್ ಯಾವುದೇ ವಿನಾಯಿತಿಗೆ ಒಪ್ಪಲಾರದು. ಈಗ ಸಮಯ ಮೀರುತ್ತಿದೆ ಮತ್ತು ಇರಾನ್ ಮೇಲೆ ಒತ್ತಡ ಹೇರಲು ಇದು ನಿರ್ಣಾಯಕ ಘಳಿಗೆಯಾಗಿದೆ ಎಂದು ಇಸ್ರೇಲ್ನ ಅಧಿಕಾರಿಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.
 
ಬೈಡನ್ ಆಡಳಿತದೊಂದಿಗಿನ ಸಹಯೋಗ ಬಲಿಷ್ಟವಾಗಿದೆ ಮತ್ತು ಅವರ ಭೇಟಿಯ ಸಂದರ್ಭ ಇದನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲಾಗುವುದು. ಹೊಸ ಜಂಟಿ ಘೋಷಣೆಯು ಅಮೆರಿಕ-ಇಸ್ರೇಲ್ ನಡುವಿನ ಸಂಬಂಧದ ಅನನ್ಯ ಗುಣಮಟ್ಟ, ಆಳ ಮತ್ತು ವ್ಯಾಪ್ತಿಗೆ ಜೀವಂತ ಸಾಕ್ಷಿಯಾಗಿದೆ. 

ಇದು ಎರಡೂ ಕಡೆಯ ಸಂಬಂಧಕ್ಕೆ, ನಿರ್ದಿಷ್ಟವಾಗಿ ಇಸ್ರೇಲ್ನ ಭದ್ರತೆ, ಸಮೃದ್ಧಿ ಮತ್ತು ಯೋಗಕ್ಷೇಮದ ಕುರಿತು ಹಾರ್ದಿಕ ಮತ್ತು ಆಳವಾದ ಭದ್ರತೆಯನ್ನು ತೋರಿಸುತ್ತದೆ ಎಂದು ಇಸ್ರೇಲ್ನ ರಾಜತಾಂತ್ರಿಕ ಮೂಲಗಳು ಹೇಳಿವೆ. ಇಸ್ರೇಲ್ನಿಂದ ಸೌದಿ ಅರೆಬಿಯಾಕ್ಕೆ ಪ್ರಯಾಣ ಬೆಳೆಸುವ ಮುನ್ನ ಬೈಡನ್ ಪೆಲೆಸ್ತೀನ್ ಅಧ್ಯಕ್ಷ ಮಹ್ಮೂದ್ ಅಬ್ಬಾಸ್ ರನ್ನು ಬೆಥ್ಲಹೇಮ್ನಲ್ಲಿ ಭೇಟಿಯಾಗುವ ನಿರೀಕ್ಷೆಯಿದೆ. 

ಬಳಿಕ ಪೂರ್ವ ಜೆರುಸಲೇಂನಲ್ಲಿರುವ ಪೆಲೆಸ್ತೀನ್ ಆಸ್ಪತ್ರೆ ಆಗಸ್ಟಾ ವಿಕ್ಟೋರಿಯಾಕ್ಕೆ ಭೇಟಿ ನೀಡಿ, ಆಸ್ಪತ್ರೆಗೆ ಅಮೆರಿಕದ ನೆರವನ್ನು ಮರುಸ್ಥಾಪಿಸುವ ಘೋಷಣೆ ಮಾಡಲಿದ್ದಾರೆ. ಈ ಸಂದರ್ಭ ಇಸ್ರೇಲ್ ಅಧಿಕಾರಿಗಳು ಅಮೆರಿಕದ ನಿಯೋಗದ ಜತೆ ತೆರಳಲು ಅವಕಾಶ ನಿರಾಕರಿಸಿರುವುದು ಈ ಪ್ರದೇಶ ಇಸ್ರೇಲ್ ನ ಭಾಗವಲ್ಲ ಎಂದು ಅಮೆರಿಕ ಪರಿಗಣಿಸಿರುವುದರ ದ್ಯೋತಕವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X