Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಸ್ಥಿದಾರ ರೈತರ ಸಾಲ ಮನ್ನಾಕ್ಕೆ...

ಸುಸ್ಥಿದಾರ ರೈತರ ಸಾಲ ಮನ್ನಾಕ್ಕೆ ಬಿಡುಗಡೆಯಾದ ಹಣ ದುರುಪಯೋಗ: ರೈತಸಂಘ ಆರೋಪ

ವಾರ್ತಾಭಾರತಿವಾರ್ತಾಭಾರತಿ13 July 2022 10:43 PM IST
share

ಚಿಕ್ಕಮಗಳೂರು, ಜು.13: ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಕಳೆದ 24 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಶಿವ ಸಹಕಾರಿ ಬ್ಯಾಂಕ್‍ನಿಂದ ಸಾಲ ಪಡೆದು ಸುಸ್ಥಿದಾರರಾಗಿದ್ದ 28 ರೈತರ ಸಾಲವನ್ನು ಕೇಂದ್ರ ಮನ್ನಾ ಮಾಡಿದ್ದು, ಸಾಲ ಮನ್ನಾ ಯೋಜನೆಯಡಿ ಬ್ಯಾಂಕ್‍ಗೆ 14,23757 ರೂ. ಹಣ ಬಂದಿದೆ. ಆದರೆ ಇದನ್ನು ಬ್ಯಾಂಕ್‍ನ ವ್ಯವಸ್ಥಾಪಕರು ಫಲಾನುಭವಿ ರೈತರ ಗಮನಕ್ಕೆ ತಾರದೇ ಇಬ್ಬರು ರೈತರ ಸಾಲ ಮನ್ನಾ ಮಾಡದೇ ವಂಚಿಸಿರುವುದು ಬೆಳಕಿಗೆ ಬಂದಿದೆ. ಸಂಬಂಧಿಸಿದ ಇಲಾಖಾಧಿಕಾರಿಗಳು ವಂಚನೆಗೊಳಗಾದ ರೈತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಜಿಲ್ಲಾಧ್ಯಕ್ಷ ದುಗ್ಗಪ್ಪಗೌಡ ಆರೋಪಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತರೀಕೆರೆ ಪಟ್ಟಣದಲ್ಲಿರುವ ಶಿವ ಸಹಕಾರಿ ಬ್ಯಾಂಕ್‍ನಿಂದ ತಾಲೂಕಿನ ನೂರಾರು ರೈತರು ಸಾಲ ಪಡೆದುಕೊಂಡಿದ್ದು, ಈ ಪೈಕಿ 28 ರೈತರು ವಿವಿಧ ಉದ್ದೇಶಕ್ಕೆ ಬ್ಯಾಂಕ್‍ನಿಂದ ಸಾಲ ಪಡೆದು ಸುಸ್ಥಿದಾರರಾಗಿದ್ದಾರೆ. ಸುಸ್ಥಿದಾರರಾಗಿದ್ದ 28 ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರಕಾರದ ಸಾಲ ಮನ್ನಾ ಯೋಜನೆಯಡಿಯಲ್ಲಿ ಬ್ಯಾಂಕ್‍ಗೆ 2009-10ನೇ ಸಾಲಿನಲ್ಲಿ 14,23,757 ಲಕ್ಷ ರೂ. ಹಣ ಬಂದಿದೆ. ಆದರೆ 28 ರೈತರ ಪೈಕಿ ತರೀಕೆರೆ ಪಟ್ಟಣದ ವಿನಾಯಕ ನಗರದ ನಿವಾಸಿ ಜಗನ್ನಾಥ್ ಎಂಬವರಿಗೆ ಕೇಂದ್ರದ ಸಾಲ ಮನ್ನಾ ಯೋಜನೆಯಡಿಯಲ್ಲಿ 2,75000 ರೂ. ಹಣ ಬಂದಿದ್ದರೇ, ತಾಲೂಕಿನ ಅಮೃತಾಪುರ ಹೋಬಳಿಯ ಹಾದಿಕೆರೆ ನಿವಾಸಿ ಚಿದಾನಂದ್ ಎಂಬವರಿಗೆ 53 ಸಾವಿರ ರೂ. ಹಣ ಬಂದಿದೆ. ಆದರೆ ಬ್ಯಾಂಕ್ ವ್ಯವಸ್ಥಾಪಕ ಸುರೇಶ್ ಎಂಬವರು ಸಾಲ ಮನ್ನಾ ಯೋಜನೆಯ ಫಲಾನುಭವಿಗಳಾದ ಜಗನ್ನಾಥ್ ಹಾಗೂ ಚಿದಾನಂದ್ ಎಂಬವರಿಗೆ ಈ ಬಗ್ಗೆ ಮಾಹಿತಿ ನೀಡದೇ ಹೆಚ್ಚುವರಿ ಹಣ ಕಟ್ಟಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದರು.

ಕೇಂದ್ರ ಸರಕಾರ ಈ ರೈತರ ಸಾಲ ಮನ್ನಾ ಬ್ಯಾಂಕ್‍ಗೆ ಹಣ ವರ್ಗಾವಣೆ ಮಾಡಿದ್ದರೂ ಬ್ಯಾಂಕ್‍ನ ವ್ಯವಸ್ಥಾಪಕರು ಆರ್‍ಬಿಐನ ಮಾನದಂಡಗಳಂತೆ ರೈತರಿಗೆ ಮಾಹಿತಿ ನೀಡದೇ ವಂಚಿಸಿದ್ದಾರೆ. ಸಾಲ ಮನ್ನಾ ಆಗಿದ್ದರೂ ಜಗನ್ನಾಥ್ ಅವರಿಂದ 2017ರವರೆಗೆ 9,50,000 ರೂ, ಹಣವನ್ನು ಬ್ಯಾಂಕ್‍ಗೆ ಕಟ್ಟಿಸಿಕೊಂಡಿದ್ದು, ಈ ರೈತನಿಗೆ ಸಾಲ ಮನ್ನಾ ಹಣ ಹಾಗೂ ಬ್ಯಾಂಕ್ ರೈತರ ಹಣಕ್ಕೆ ನೀಡುವ ಬಡ್ಡಿ ಸೇರಿ 36 ಲಕ್ಷ ರೂ. ಹಿಂದಿರುಗಿಸಬೇಕಿದೆ. ಅದೇ ರೀತಿ ಚಿದಾನಂದ್ ಅವರಿಗೆ 2,85000 ಹಣವನ್ನು ಬ್ಯಾಂಕ್ ಹಿಂದಿರುಗಿಸಬೇಕಿದೆ. ಆದರೆ ಬ್ಯಾಂಕ್‍ನ ವ್ಯವಸ್ಥಾಪಕರು ಇಲ್ಲದ ಸಬೂಬು ಹೇಳುತ್ತಾ ಪೂರ್ಣ ಹಣ ಹಿಂದಿರುಗಿಸದೇ ವಂಚನೆ ಮಾಡಿದ್ದಾರೆ. ಈ ಸಂಬಂಧ ಬ್ಯಾಂಕ್‍ನ ಅಧ್ಯಕ್ಷರು ಹಾಗೂ ನಿರ್ದೇಶಕರು ಸೇರಿದಂತೆ ಜಿಲ್ಲಾಧಿಕಾರಿ, ಎಸ್ಪಿ, ಜಿಲ್ಲಾ ಸಹಕಾರಿ ನಿಬಂಧಕರು ಹಾಗೂ ಸಹಕಾರಿ ಇಲಾಖಾಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದರು.

ಈ ಇಬ್ಬರು ರೈತರು ನೀಡಿದ್ದ ದೂರಿನ ಮೇರೆಗೆ ಬ್ಯಾಂಕ್‍ನಲ್ಲಿ ವಿಚಾರಿಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಬಾಕಿ 26 ಮಂದಿ ಸುಸ್ಥಿದಾರರಿಗೂ ಕೇಂದ್ರದ ಸಾಲ ಮನ್ನಾ ಯೋಜನೆಯಡಿ ಕೇಂದ್ರದಿಂದ ಬ್ಯಾಂಕ್‍ಗೆ ಹಣ ಬಂದಿದ್ದು, ಈ ಹಣ ರೈತರ ಖಾತೆಗೆ ಜಮಾ ಆಗಿದೆಯೋ ಇಲ್ಲವೂ ಎಂಬುದು ತಿಳಿದು ಬಂದಿಲ್ಲ. ಜಿಲ್ಲಾಧಿಕಾರಿ ಈ ಸಂಬಂಧ ತನಿಕೆ ಕೈಗೊಂಡು ನೊಂದ ರೈತರಿಗೆ ನ್ಯಾಯ ಒದಗಿಸಬೇಕು. ತಪ್ಪಿದಲ್ಲಿ ಬ್ಯಾಂಕ್‍ನ ಎದುರು ಧರಣಿ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ದುಗ್ಗಪ್ಪಗೌಡ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಬ್ಯಾಂಕ್‍ನಿಂದ ವಂಚನೆಗೊಳಗಾದ ರೈತರಾದ ಚಿದಾನಂದ್, ಜಗನ್ನಾಥ್ ಸೇರಿದಂತೆ ರೈತಸಂಘದ ಮುಖಂಡರಾದ ತರೀಕರೆ ಮಹೇಶ್, ಹುಣಸೇಗೌಡ, ಶಂಕರಪ್ಪ, ಮಂಜೇಗೌಡ, ಬಸವರಾಜಪ್ಪ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X