Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶ್ರೀಲಂಕಾ : ಸರಕಾರಿ ಕಟ್ಟಡಗಳಿಂದ ತೆರಳಲು...

ಶ್ರೀಲಂಕಾ : ಸರಕಾರಿ ಕಟ್ಟಡಗಳಿಂದ ತೆರಳಲು ಪ್ರತಿಭಟನಾಕಾರರ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ14 July 2022 9:25 PM IST
share
ಶ್ರೀಲಂಕಾ : ಸರಕಾರಿ ಕಟ್ಟಡಗಳಿಂದ ತೆರಳಲು ಪ್ರತಿಭಟನಾಕಾರರ ಒಪ್ಪಿಗೆ

ಕೊಲಂಬೊ, ಜು.14: ದೇಶಕ್ಕೆ ಎದುರಾಗಿರುವ ಭೀಕರ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಧ್ಯಕ್ಷ ಮತ್ತು ಪ್ರಧಾನಮಂತ್ರಿಯನ್ನು ಕೆಳಗಿಳಿಸುವ ತಮ್ಮ ಪ್ರಯತ್ನವನ್ನು ಮುಂದುವರಿಸಲಿದ್ದೇವೆ. ಆದರೆ ಸರಕಾರಿ ಕಟ್ಟಡಗಳ ಸ್ವಾಧೀನವನ್ನು ತೆರವುಗೊಳಿಸಲಾಗುವುದು ಎಂದು ಶ್ರೀಲಂಕಾದ ಸರಕಾರಿ ವಿರೋಧಿ ಪ್ರತಿಭಟನಾಕಾರರು ಗುರುವಾರ ಹೇಳಿದ್ದಾರೆ.

 ‌
ಕಳೆದ ಶನಿವಾರ ಪ್ರತಿಭಟನಾಕಾರರು ಅಧ್ಯಕ್ಷ ಗೊತಬಯ ರಾಜಪಕ್ಸರ ಸರಕಾರಿ ನಿವಾಸದ ಮೇಲೆ ದಾಳಿ ನಡೆಸಿ ಒಳನುಗ್ಗಿದ್ದರು. ಅದಕ್ಕೂ ಮುನ್ನವೇ ಗೊತಬಯ ಮಾಲ್ದೀವ್ಸ್ಗೆ ಪರಾರಿಯಾಗಿದ್ದರು. ಬುಧವಾರ ಪ್ರಧಾನಿ ರಣಿಲ್ ವಿಕ್ರಮಸಿಂಘೆ ಅವರ ಸರಕಾರಿ ನಿವಾಸದ ಒಳಗೂ ಪ್ರತಿಭಟನಾಕಾರರು ನುಗ್ಗಿದ್ದರು.
 
ನಾವು ಅಧ್ಯಕ್ಷರ ನಿವಾಸ, ಅಧ್ಯಕ್ಷೀಯ ಸಚಿವಾಲಯ ಮತ್ತು ಪ್ರಧಾನ ಮಂತ್ರಿ ಕಚೇರಿಯಿಂದ ತಕ್ಷಣವೇ ಜಾರಿಗೆ ಬರುವಂತೆ ಶಾಂತಿಯುತವಾಗಿ ಹಿಂದಕ್ಕೆ ಸರಿಯುತ್ತಿದ್ದೇವೆ. ಆದರೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಭಟನಾಕಾರರ ವಕ್ತಾರರು ಹೇಳಿದ್ದಾರೆ. ಈ ಮಧ್ಯೆ, ಜುಲೈ 13ರಂದು ರಾಜೀನಾಮೆ ನೀಡುವುದಾಗಿ ಈ ಹಿಂದೆ ಘೋಷಿಸಿದ್ದ ಗೊತಬಯ, ಇನ್ನೂ ತಮ್ಮ ರಾಜೀನಾಮೆ ಪ್ರಕಟಿಸಿಲ್ಲ. ಅವರು ಈಗ ಮಾಲ್ದೀವ್ಸ್ನಿಂದ ಸಿಂಗಾಪುರಕ್ಕೆ ತೆರಳಿದ್ದಾರೆ.
 
ಅಲ್ಲಿ ಕೆಲ ಸಮಯ ಉಳಿದುಕೊಂಡು ಅಲ್ಲಿಂದ ಯುಎಇಗೆ ತೆರಳುವ ನಿರೀಕ್ಷೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅಧ್ಯಕ್ಷರಾಗಿದ್ದಷ್ಟು ಸಮಯ ಬಂಧನದಿಂದ ರಕ್ಷಣೆ ಇರುವುದರಿಂದ ಅವರು ರಾಜೀನಾಮೆ ಪ್ರಕಟಿಸುವ ಮುನ್ನ ವಿದೇಶದಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳುವ ಉದ್ದೇಶ ಹೊಂದಿದ್ದಾರೆ ಎನ್ನಲಾಗಿದೆ. 

ಸರಕಾರಿ ಕಟ್ಟಡಗಳಿಂದ ಹಿಂದಕ್ಕೆ ಸರಿಯುವಂತೆ ಪ್ರತಿಭಟನೆಯನ್ನು ಬೆಂಬಲಿಸಿದ್ದ ಉನ್ನತ ಬೌದ್ಧ ಸನ್ಯಾಸಿಯೂ ಕರೆ ನೀಡಿದ್ದರು. 200 ವರ್ಷಕ್ಕಿಂತಲೂ ಹೆಚ್ಚು ಅಧ್ಯ್ಷಕರ ನಿವಾಸದ ಅಮೂಲ್ಯವಾದ ಕಲೆ ಮತ್ತು ಕಲಾಕೃತಿಯನ್ನು ಸಂರಕ್ಷಿಸುವುದನ್ನು ಖಚಿತಪಡಿಸಲು ನಿವಾಸವನ್ನು ಸರಕಾರಿ ಅಧಿಕಾರಿಗಳಿಗೆ ಹಿಂತಿರುಗಿಸಬೇಕು. ಇದು ರಾಷ್ಟ್ರೀಯ ಸಂಪತ್ತು, ಇದನ್ನು ಸರಕಾರಕ್ಕೇ ಮರಳಿಸಬೇಕು ಎಂದವರು ಪ್ರತಿಭಟನಾಕಾರರನ್ನು ಒತ್ತಾಯಿಸಿದ್ದರು.
 
ಅಧ್ಯಕ್ಷ ಗೊತಬಯ ಪರಾರಿಯಾದ ಬಳಿಕ ಅಧ್ಯಕ್ಷರ ನಿವಾಸದಲ್ಲಿದ್ದ ಭದ್ರತಾ ಸಿಬಂದಿಯನ್ನೂ ಪ್ರತಿಭಟನಾಕಾರರು ಹಿಂದಕ್ಕೆ ಕಳಿಸಿದ್ದರು. ಶನಿವಾರದ ಬಳಿಕ ಸಾವಿರಾರು ಮಂದಿ ಯಾವುದೇ ನಿರ್ಬಂಧವಿಲ್ಲದೆ ಅಧ್ಯಕ್ಷರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ರಾಜೀನಾಮೆ ಪ್ರಕಟಿಸದ ಗೊತಬಯ, ಈಗ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. 

ಅವರೊಬ್ಬ ಹೇಡಿ. ರಾಜಪಕ್ಸ ಕುಟುಂಬದೊಂದಿಗೆ ನಮ್ಮ ದೇಶವನ್ನು ಸರ್ವನಾಶ ಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ನಮಗೆ ವಿಶ್ವಾಸವಿಲ್ಲ. ನಮಗೆ ಹೊಸ ಸರಕಾರದ ಅಗತ್ಯವಿದೆ ಎಂದು ಪ್ರತಿಭಟನಾಕಾರರು ಘೋಷಿಸಿದ್ದಾರೆ. ಈ ಮಧ್ಯೆ, ಗುರುವಾರ ಕರ್ಫ್ಯೂವನ್ನು ತುಸುಹೊತ್ತು ಸಡಿಲಿಸಿದ ಬಳಿಕ ಸಂಜೆ ಮತ್ತೆ ಜಾರಿಗೊಳಿಸಲಾಗಿದೆ. ಬುಧವಾರ ರಾತ್ರಿ ಸಂಸತ್ತಿನ ಹೊರಗಡೆ ನಡೆದ ಘರ್ಷಣೆಯಲ್ಲಿ ಓರ್ವ ಯೋಧ ಮತ್ತು ಒಬ್ಬ ಪೊಲೀಸ್ ಸಿಬಂದಿ ಗಾಯಗೊಂಡಿದ್ದಾರೆ. 

ಸಂಸತ್ತಿಗೆ ನುಗ್ಗುವ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಬುಧವಾರ ರಾತ್ರಿ ನಡೆದ ಘರ್ಷಣೆಯಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದಾಗ ಸುಮಾರು 85 ಮಂದಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ ಒಬ್ಬ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ಕೊಲಂಬೊದ ಪ್ರಧಾನ ಆಸ್ಪತ್ರೆಯ ಹೇಳಿಕೆ ತಿಳಿಸಿದೆ. 

ಗೊತಬಯ ರಾಜೀನಾಮೆ ನೀಡದಿದ್ದರೆ ಬೇರೆ ಆಯ್ಕೆಯ ಪರಿಗಣನೆ:

ಜುಲೈ 13ರಂದು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದ ಗೊತಬಯ ರಾಜಪಕ್ಸ, ಇನ್ನೂ ರಾಜೀನಾಮೆ ಪ್ರಕಟಿಸಿಲ್ಲ ಎಂದು ಸಂಸತ್ನ ಸ್ಪೀಕರ್ ಮಹಿಂದಾ ಅಬೆವರ್ದನ ಹೇಳಿದ್ದಾರೆ.

ರಾಜೀನಾಮೆ ಪ್ರಕಟಿಸುವಂತೆ ಸೂಚಿಸಲಾಗಿದೆ. ಅವರು ಒಪ್ಪದಿದ್ದರೆ , ಅವರನ್ನು ಪದಚ್ಯುತಗೊಳಿಸಲು ಬೇರೆ ಆಯ್ಕೆಗಳನ್ನು ಪರಿಗಣಿಸಲಾಗುವುದು ಎಂದು ಅಬೆವರ್ದನ ಹೇಳಿದ್ದಾರೆ. ಈ ಮಧ್ಯೆ, ರಾಜಪಕ್ಸರ ರಾಜೀನಾಮೆ ಪತ್ರವನ್ನು ಸಿದ್ಧಪಡಿಸಲಾಗಿದೆ. ಅವರು ಹಸಿರುನಿಶಾನೆ ತೋರಿದೊಡನೆ ಸ್ಪೀಕರ್ ಅದನ್ನು ಪ್ರಕಟಿಸಲಿದ್ದಾರೆ ಎಂದು ಭದ್ರತಾ ಪಡೆಯ ಮೂಲಗಳು ಹೇಳಿವೆ.

ಈ ನಡುವೆ ರಾಜಪಕ್ಸ ರಾಜೀನಾಮೆ ನೀಡಿದ್ದಾರೆ ಎಂದು ಹಲವು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X