Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಎರಡನೇ ಏಕದಿನ: ಭಾರತಕ್ಕೆ 247 ರನ್ ಗುರಿ...

ಎರಡನೇ ಏಕದಿನ: ಭಾರತಕ್ಕೆ 247 ರನ್ ಗುರಿ ನೀಡಿದ ಇಂಗ್ಲೆಂಡ್

ಚಹಾಲ್‌ಗೆ 4 ವಿಕೆಟ್, ಆಂಗ್ಲರಿಗೆ ಮೊಯಿನ್ ಅಲಿ, ಡೇವಿಡ್ ವಿಲ್ಲಿ ಆಸರೆ

ವಾರ್ತಾಭಾರತಿವಾರ್ತಾಭಾರತಿ14 July 2022 9:51 PM IST
share

ಲಾರ್ಡ್ಸ್, ಜು.14: ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಾಲ್(4-47)ನೇತೃತ್ವದ ಭಾರತದ ಬೌಲರ್‌ಗಳ ಶಿಸ್ತುಬದ್ದ ದಾಳಿಗೆ ತತ್ತರಿಸಿ ಆರಂಭಿಕ ಆಘಾತಕ್ಕೆ ಒಳಗಾಗಿದ್ದ ಇಂಗ್ಲೆಂಡ್ ತಂಡ ಆಲ್‌ರೌಂಡರ್‌ಗಳಾದ ಮೊಯಿನ್ ಅಲಿ(47 ರನ್, 64 ಎಸೆತ) ಹಾಗೂ ಡೇವಿಡ್ ವಿಲ್ಲಿ(41 ರನ್, 49 ಎಸೆತ)ಉಪಯುಕ್ತ ಜೊತೆಯಾಟದ ನೆರವಿನಿಂದ ಗೌರವಾರ್ಹ ಮೊತ್ತ ಕಲೆ ಹಾಕಿದೆ.

 ಗುರುವಾರ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಇಂಗ್ಲೆಂಡ್ 49 ಓವರ್‌ಗಳಲ್ಲಿ 246 ರನ್ ಗಳಿಸಿ ಆಲೌಟಾಯಿತು. ಸ್ಪಿನ್ನರ್ ಚಹಾಲ್, ಹಾರ್ದಿಕ್ ಪಾಂಡ್ಯ(2-28) ಹಾಗೂ ಜಸ್‌ಪ್ರಿತ್ ಬುಮ್ರಾ(2-49)ದಾಳಿಗೆ ಕಂಗಲಾದ ಇಂಗ್ಲೆಂಡ್ ಒಂದು ಹಂತದಲ್ಲಿ 148 ರನ್‌ಗೆ ಆರು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆಗ ಆಂಗ್ಲರಿಗೆ ಆಸರೆಯಾದ ಮೊಯಿನ್ ಅಲಿ(47 ರನ್, 64 ಎಸೆತ, 2 ಬೌಂಡರಿ, 2 ಸಿಕ್ಸರ್)ಹಾಗೂ ಡೇವಿಡ್ ವಿಲ್ಲಿ(41 ರನ್, 49 ಎಸೆತ, 2 ಬೌಂಡರಿ, 2 ಸಿಕ್ಸರ್)7ನೇ ವಿಕೆಟ್‌ಗೆ 62 ರನ್ ಜೊತೆಯಾಟ ನಡೆಸಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ಅಲಿ ಅವರು ಲಿವಿಂಗ್‌ಸ್ಟೋನ್(33 ರನ್, 33 ಎಸೆತ)ಜೊತೆಗೆ 6ನೇ ವಿಕೆಟ್‌ಗೆ 46 ರನ್ ಜೊತೆಯಾಟದಲ್ಲಿ ಭಾಗಿಯಾದರು.

ಇನಿಂಗ್ಸ್ ಆರಂಭಿಸಿದ ಬೈರ್‌ಸ್ಟೋವ್(38 ರನ್, 38 ಎಸೆತ) ಹಾಗೂ ಜೇಸನ್ ರಾಯ್(23 ರನ್, 33 ಎಸೆತ) ಮೊದಲ ವಿಕೆಟ್‌ಗೆ 41 ರನ್ ಸೇರಿಸಿದರು. ಆಲ್‌ರೌಂಡರ್ ಬೆನ್ ಸ್ಟೋಕ್ಸ್ 21 ರನ್ ಗಳಿಸಿ ಚಹಾಲ್‌ಗೆ ಔಟಾದರು. ನಾಯಕ ಜೋಸ್ ಬಟ್ಲರ್(4 ರನ್)ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.

15ನೇ ಓವರ್‌ಗೆ 1 ವಿಕೆಟ್ ನಷ್ಟಕ್ಕೆ 72 ರನ್ ಗಳಿಸಿದ್ದ ಇಂಗ್ಲೆಂಡ್ ದಿಢೀರ್ ಕುಸಿತ ಕಂಡಿತು. ರೀಸ್ ಟೋಪ್ಲೆ(3 ರನ್)ವಿಕೆಟನ್ನು ಕಬಳಿಸಿದ ಬುಮ್ರಾ ಇಂಗ್ಲೆಂಡ್ ಇನಿಂಗ್ಸ್‌ಗೆ ತೆರೆ ಎಳೆದರು.

ಇಂಗ್ಲೆಂಡ್ ಪರ ಮೊಯಿನ್ ಅಲಿ ಸರ್ವಾಧಿಕ ಸ್ಕೋರ್ ಗಳಿಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X