Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸಿಟಿ ಸೆಂಟರ್ ಕಾರ್ನಿವಲ್‌ಗೆ...

ಮಂಗಳೂರು: ಸಿಟಿ ಸೆಂಟರ್ ಕಾರ್ನಿವಲ್‌ಗೆ ಚಾಲನೆ

12ನೇ ವರ್ಷಾಚರಣೆ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ14 July 2022 9:54 PM IST
share
ಮಂಗಳೂರು: ಸಿಟಿ ಸೆಂಟರ್ ಕಾರ್ನಿವಲ್‌ಗೆ ಚಾಲನೆ

ಮಂಗಳೂರು, ಜು.14: ರಾಜ್ಯದ 5ನೇ ಬೃಹತ್ ಮಾಲ್ ಎಂಬ ಹೆಗ್ಗಳಿಕೆಗೆ ಪಾತ್ರವಾದ ಮೊಹ್ತಿಶಾಂ ಕಾಂಪ್ಲೆಕ್ಸ್‌ನ ಸಿಟಿ ಸೆಂಟರ್ ಮಾಲ್‌ನ 12ನೇ ವರ್ಷಾಚರಣೆ ಪ್ರಯುಕ್ತ ‘ಸಿಟಿ ಸೆಂಟರ್ ಕಾರ್ನಿವಲ್’ಗೆ ಗುರುವಾರ ಮಾಲ್‌ನಲ್ಲಿ ಸಂಭ್ರಮದ ಚಾಲನೆ ದೊರೆಯಿತು.

ಅತಿಥಿಯಾಗಿ ಭಾಗವಹಿಸಿದ ಮೊಹ್ತಿಶಾಂ ಕಾಂಪ್ಲೆಕ್ಸ್ ಪ್ರೈವೇಟ್ ಲಿ.ನ ಸ್ಥಾಪಕ ಸದಸ್ಯ ಮೊಹ್ತಿಶಾಂ ಅಬ್ದುಲ್ ಬಾರಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮತ್ತೋರ್ವ ಅತಿಥಿ ನಟ ರೂಪೇಶ್ ಶೆಟ್ಟಿ ಮಾತನಾಡಿ, ಸಿಟಿ ಸೆಂಟರ್ ಮಾಲ್ ಜೊತೆ ಮಂಗಳೂರಿನ ಜನರಿಗೆ ಭಾವನಾತ್ಮಕ ಸಂಬಂಧ ಇದೆ. ಇಲ್ಲಿನ ಗ್ರಾಹಕರಿಗೆ ಮಾಲ್ ಬಗ್ಗೆ ಪರಿಚಯ ಮಾಡಿದ ಸಂಸ್ಥೆ ಸಿಟಿ ಸೆಂಟರ್. ದೇಶ ವಿದೇಶಗಳ ಬ್ರಾಂಡ್‌ಗಳ ಸಾಮಾಗ್ರಿಗಳು ಈ ಮಾಲ್ ಮೂಲಕ ಒಂದೆ ಕಡೆ ಗ್ರಾಹಕರಿಗೆ ದೊರೆಯುವಂತೆ ಆಗಿದೆ. ಅಲ್ಲದೆ ಚಲನ ಚಿತ್ರದ ಬೆಳವಣಿಗೆ ಹಾಗೂ ಕಲಾವಿದರಿಗೆ ಸಿಟಿ ಸೆಂಟರ್ ಪ್ರೋತ್ಸಾಹ ನೀಡಿದೆ ಎಂದರು.

ಚಲನ ಚಿತ್ರ ನಟ ವಿನೀತ್, ನಟಿ ರಚನಾ ರೈ ಶುಭ ಹಾರೈಸಿದರು.

ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಕಲಾವಿದರು, ಚಲನಚಿತ್ರ ನಟರು, ಗ್ರಾಹಕರು ಹಾಗೂ ಸಂಸ್ಥೆಯ ಪ್ರತಿನಿಧಿಗಳು ಭಾಗವಹಿಸಿದರು.

ಮೊಹ್ತಿಶಾಂ ಕಾಂಪ್ಲೆಕ್ಸ್ ಪ್ರೈವೇಟ್ ಲಿ.ನ ಆಡಳಿತ ನಿರ್ದೇಶಕ ಎಸ್.ಎಂ.ಅರ್ಶದ್, ನಿರ್ದೇಶಕ ಎಸ್.ಎಂ.ಸವೂದ್ ಹಾಗೂ ಸಿಇಒ ಧರ್ಮರಾಜ್ ಅತಿಥಿಗಳನ್ನು ಸ್ವಾಗತಿಸಿದರು. ಸಾಹಿಲ್ ಝಾಹಿರ್ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಕಲಾ ತಂಡದ ಸದಸ್ಯರು ತಮ್ಮ ಕಾರ್ಯಕ್ರಮಗಳ ಮೂಲಕ ವರ್ಷಾಚರಣೆಯ ಸಂಭ್ರಮಕ್ಕೆ ಮೆರುಗು ನೀಡಿದರು.

ಸಿಟಿ ಸೆಂಟರ್ ಕಾರ್ನಿವಲ್ ಜು.14ರಿಂದ ಆಗಸ್ಟ್ 15ರವರೆಗೆ ನಡೆಯಲಿದೆ. ಗ್ರಾಹಕರು ಹೆಚ್ಚು ಶಾಪಿಂಗ್ ಮಾಡುವ ಮೂಲಕ ಪ್ರತಿದಿನ ಅತ್ಯಾಕರ್ಷಕ ಬಹುಮಾನ ಗೆಲ್ಲುವ ಅವಕಾಶವಿದ್ದು, ಬಂಪರ್ ಬಹುಮಾನವಾಗಿ ಕಾರು, ಬೈಕ್ ಹಾಗೂ ಸ್ಕೂಟರ್ ಅನ್ನು ಗೆಲ್ಲಬಹುದಾಗಿದೆ. ಅಲ್ಲದೆ ವಾರಾಂತ್ಯದಲ್ಲಿ ನಡೆಯುವ ಡ್ರಾದಲ್ಲಿ ಹೋಂ ಸೆಂಟರ್‌ನಿಂದ ಸೋಫಾ ಸೆಟ್, ಕ್ಲಬ್ ಮಹೇಂದ್ರದಿಂದ ಹಾಲಿಡೇ ವೊಚರ್ಸ್‌ ಮತ್ತು ಐ ಫೋನ್ ಗೆಲ್ಲುವ ಸುವರ್ಣಾವಕಾಶವಿದೆ. ಅಲ್ಲದೆ ವಾರಾಂತ್ಯದಲ್ಲಿ ಮಕ್ಕಳು ಹಾಗೂ ದೊಡ್ಡವರಿಂದ ವಿವಿಧ ಕಲಾ ಪ್ರದರ್ಶನ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X