ಬಿರುಕು ಬಿಟ್ಟಿರುವ ಕಾಂಗ್ರೆಸ್ ಮನೆ ಸಿದ್ದರಾಮೋತ್ಸವದ ಬಳಿಕ ನೆಲಸಮ: ಬಿಜೆಪಿ

ಬೆಂಗಳೂರು: ಭಾರತ್ ಜೋಡೋ ಅಭಿಯಾನ ಮತ್ತು ಸಿದ್ದರಾಮೋತ್ಸವ, ಈ ಎರಡು ಕಾರ್ಯಕ್ರಮಗಳು ಕಾಂಗ್ರೆಸ್ (CONGRESS) ಪಕ್ಷವನ್ನು ಮಕಾಡೆ ಮಲಗಿಸಲಿದೆ ಎಂದು ಬಿಜೆಪಿ (BJP) ಟೀಕಿಸಿದೆ.
ಶುಕ್ರವಾರ ಟ್ವೀಟ್ ಮಾಡಿದ ಬಿಜೆಪಿ, ಬಿರುಕು ಬಿಟ್ಟಿರುವ ಕಾಂಗ್ರೆಸ್ ಮನೆ ಸಿದ್ದರಾಮೋತ್ಸವದ ಬಳಿಕ ನೆಲಸಮವಾಗಲಿದೆ. ಮನೆಯೊಳಗಿದ್ದವರು ಗುಳೆ ಹೊರಡಲನುವಾಗಿದ್ದಾರೆ. ಅಕ್ಟೊಬರ್ ತಿಂಗಳಲ್ಲಿ ನಡೆಲಿರುವ ಭಾರತ್ ಜೋಡೋ ಕಾರ್ಯಕ್ರಮಕ್ಕೂ ನಾಯಕರು ಸಿಗಲಾರದಷ್ಟು ಕಾಂಗ್ರೆಸ್ ಖಾಲಿಯಾಗಲಿದೆ ಎಂದು ವ್ಯಂಗ್ಯವಾಡಿದೆ.
ಭಾರತ್ ಜೋಡೋ ಅಭಿಯಾನದ ಅಂಗವಾಗಿ ಕರ್ನಾಟಕದಲ್ಲಿ ಪಾದಯಾತ್ರೆ ಮಾಡಲು ಉದ್ದೇಶಿಸಿರುವ ರಾಹುಲ್ ಗಾಂಧಿ ಅವರೇ, ಭಾರತ ಈಗ ಮತ್ತಷ್ಟು ಬಲಿಷ್ಠವಾಗಿದೆ. ಮುರಿದು ಹೋಗಿರುವುದು ಕಾಂಗ್ರೆಸ್ ಪಕ್ಷ, ಮೊದಲು ಕಾಂಗ್ರೆಸ್ ಜೋಡೋ ಅಭಿಯಾನ ಮಾಡಿ. ಮುಂದೊಂದು ದಿನ ಕಾಂಗ್ರೆಸ್ ಪಕ್ಷದ ಬಾಗಿಲು ಮುಚ್ಚಲೂ ಹಿಂಬಾಲಕರು ಸಿಗಲಾರರು ಎಂದು ಬಿಜೆಪಿ ಟ್ವೀಟಿಸಿದೆ.
ಬಿರುಕು ಬಿಟ್ಟಿರುವ ಕಾಂಗ್ರೆಸ್ ಮನೆ ಸಿದ್ದರಾಮೋತ್ಸವದ ಬಳಿಕ ನೆಲಸಮವಾಗಲಿದೆ. ಮನೆಯೊಳಗಿದ್ದವರು ಗುಳೆ ಹೊರಡಲನುವಾಗಿದ್ದಾರೆ.
— BJP Karnataka (@BJP4Karnataka) July 15, 2022
ಅಕ್ಟೊಬರ್ ತಿಂಗಳಲ್ಲಿ ನಡೆಲಿರುವ ಭಾರತ್ ಜೋಡೋ ಕಾರ್ಯಕ್ರಮಕ್ಕೂ ನಾಯಕರು ಸಿಗಲಾರದಷ್ಟು ಕಾಂಗ್ರೆಸ್ ಖಾಲಿಯಾಗಲಿದೆ.#ಕಾಂಗ್ರೆಸ್ಛೋಡೋಯಾತ್ರೆ







