Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಮಕ್ಕಳು 7 ಏಳು ಗಂಟೆಗೆ ಎದ್ದು ಶಾಲೆಗೆ...

"ಮಕ್ಕಳು 7 ಏಳು ಗಂಟೆಗೆ ಎದ್ದು ಶಾಲೆಗೆ ಹೋಗುತ್ತಾರೆಂದಾದರೆ...": ಒಂದುಗಂಟೆ ಮುಂಚೆಯೇ ಸುಪ್ರೀಂಕೋರ್ಟ್‌ ಕಾರ್ಯಾರಂಭ

ವಾರ್ತಾಭಾರತಿವಾರ್ತಾಭಾರತಿ15 July 2022 3:32 PM IST
share
ಮಕ್ಕಳು 7 ಏಳು ಗಂಟೆಗೆ ಎದ್ದು ಶಾಲೆಗೆ ಹೋಗುತ್ತಾರೆಂದಾದರೆ...: ಒಂದುಗಂಟೆ ಮುಂಚೆಯೇ ಸುಪ್ರೀಂಕೋರ್ಟ್‌ ಕಾರ್ಯಾರಂಭ

ಹೊಸದಿಲ್ಲಿ: ಸುಪ್ರೀಂ ಕೋರ್ಟಿನ ಕಲಾಪಗಳು ಬೆಳಿಗ್ಗೆ 9 ಗಂಟೆಗೆ ಆರಂಭಗೊಳ್ಳಬೇಕು ಎಂದು ದೇಶದ ಅತ್ಯುನ್ನತ ನ್ಯಾಯಾಲಯದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಲಿರುವ ಜಸ್ಟಿಸ್ ಯು.ಯು ಲಲಿತ್ ಅವರು ಇಂದು ಹೇಳಿದರು. ಪ್ರಕರಣವೊಂದರ ವಿಚರಣೆಯನ್ನು ಎಂದಿನಂತೆ 10.30ರ ಬದಲು ಬೆಳಿಗ್ಗೆ 9.30ಕ್ಕೆ ಜಸ್ಟಿಸ್ ಲಲಿತ್ ನೇತೃತ್ವದ ತ್ರಿಸದಸ್ಯ ಪೀಠ ಆರಂಭಿಸಿದ ಬಳಿಕ ಅವರು ಮೇಲಿನಂತೆ ಹೇಳಿದರು.

"ಮಕ್ಕಳು ಶಾಲೆಗೆ ಬೆಳಿಗ್ಗೆ 7 ಗಂಟೆಗೆ ಹೋಗಬಹುದಾದರೆ ನ್ಯಾಯಾಧೀಶರು ಮತ್ತು ವಕೀಲರು ಏಕೆ ತಮ್ಮ ಕೆಲಸವನ್ನು 9 ಗಂಟೆಗೆ ಆರಂಭಿಸಬಾರದು?" ಎಂದು ಅವರು ಹೇಳಿದರು. ಕಲಾಪ ಬೇಗನೇ ಆರಂಭಗೊಂಡಿರುವುದಕ್ಕೆ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ ಖುಷಿ ವ್ಯಕ್ತಪಡಿಸಿದ ನಂತರ ಜಸ್ಟಿಸ್ ಲಲಿತ್ ಮೇಲಿನಂತೆ ಹೇಳಿದರು.

ಇಂದು ಪ್ರಕರಣವೊಂದರ ವಿಚಾರಣೆ ನಡೆಸಿದ ತ್ರಿಸದಸ್ಯ ಪೀಠದಲ್ಲಿ  ಜಸ್ಟಿಸ್ ಲಲಿತ್ ಹೊರತಾಗಿ ಜಸ್ಟಿಸ್ ಎಸ್. ರವೀಂದ್ರ ಭಟ್ ಮತ್ತು ಜಸ್ಟಿಸ್ ಸುಧಾಂಶು ಧುಲಿಯಾ ಇದ್ದರು.

"9.30ಕ್ಕೆ ಕೋರ್ಟ್ ಕಲಾಪ ಆರಂಭಿಸುವುದು ಅತ್ಯಂತ ಸೂಕ್ತ" ಎಂದು ರೋಹಟ್ಗಿ ಹೇಳಿದಾಗ ಪ್ರತಿಕ್ರಿಯಿಸಿದ  ಜಸ್ಟಿಸ್ ಲಲಿತ್, ನ್ಯಾಯಾಲಯ ಬೇಗನೇ ಆರಂಭಗೊಳ್ಳಬೇಕು ಎಂದು ತಾವು ಯಾವತ್ತೂ ನಂಬಿರುವುದಾಗಿ ಹೇಳಿದರು.

ದೀರ್ಘ ವಿಚಾರಣೆಗಳು ಇಲ್ಲದೇ ಇದ್ದಾಗ ಸುಪ್ರೀಂ ಕೋರ್ಟ್ 9 ಗಂಟೆಗೆ ಕಲಾಪ ಆರಂಭಿಸಿ 11.30ಕ್ಕೆ ಅರ್ಧ ಗಂಟೆ ವಿರಾಮ ತೆಗೆದುಗೊಳ್ಳಬಹುದು ನಂತರ 2 ಗಂಟೆ ತನಕ ಕಲಾಪ ನಡೆಸಿದರೆ ಸಂಜೆ ಹೊತ್ತು ಹೆಚ್ಚು ಕೆಲಸ ಮಾಡಲು ಸಮಯ ದೊರೆಯುತ್ತದೆ ಎಂದು ಅವರು ಹೇಳಿದರು.

ಈಗಿನ ಪದ್ಧತಿಯಂತೆ ಸೋಮವಾರದಿಂದ ಶುಕ್ರವಾರದವರೆಗೆ ಕಲಾಪಗಳು 10.30ಕ್ಕೆ ಆರಂಭಗೊಂಡು 4 ಗಂಟೆಗೆ ಮುಗಿಯುತ್ತದೆ. ಅಪರಾಹ್ನ 1 ರಿಂದ 2ರ ತನಕ ಊಟದ ವಿರಾಮವಿರುತ್ತದೆ. ಜಸ್ಟಿಸ್ ಯು ಯು ಲಲಿತ್ ಅವರು ಆಗಸ್ಟ್ 27 ರಂದು ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿದ್ದು ಅವರ ಅವಧಿ ನವೆಂಬರ್ 8ಕ್ಕೆ ಕೊನೆಗೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X