Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೋಲಿನ ಭೀತಿಯಿಂದ ಬಿಜೆಪಿ ಚಿಂತನ-ಮಂಥನ:...

ಸೋಲಿನ ಭೀತಿಯಿಂದ ಬಿಜೆಪಿ ಚಿಂತನ-ಮಂಥನ: ಎಂ.ಬಿ.ಪಾಟೀಲ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ15 July 2022 7:58 PM IST
share
ಸೋಲಿನ ಭೀತಿಯಿಂದ ಬಿಜೆಪಿ ಚಿಂತನ-ಮಂಥನ: ಎಂ.ಬಿ.ಪಾಟೀಲ್ ಟೀಕೆ

ಬೆಂಗಳೂರು, ಜು. 15: ‘ಮಳೆ ಮತ್ತು ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನತೆ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಬಿಜೆಪಿ ಚಿಂತನ-ಮಂಥÀನ ನಡೆಸುತ್ತಿದ್ದು, ಅವರಿಗೆ ಈಗಲೇ ಸೋಲಿನ ಭೀತಿ ಆರಂಭವಾಗಿದೆ' ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್ ಇಂದಿಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲಲಿದೆ ಎಂದು ಅವರಿಗೆ ಆಂತರಿಕ ವರದಿ ಬಂದಿದೆ. ಆದುದರಿಂದ ಚುನಾವಣೆಯನ್ನು ಗೆಲ್ಲುವ ಕುರಿತು ಸಭೆ ಮಾಡುತ್ತಿದ್ದಾರೆ. ಆದರೆ, ಇದರಿಂದ ಯಾವುದೇ ಪ್ರಯೋಜನ ಇಲ್ಲ' ಎಂದು ಟೀಕಿಸಿದರು.

‘ಪ್ರವಾಹ ಪೀಡಿತ ಸ್ಥಳಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಕಳೆದ ಬಾರಿ ಪ್ರವಾಹಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ಈ ಬಗ್ಗೆ ಯಾರೂ ಬೇಕಾದರೂ ಪರಿಶೀಲನೆ ನಡೆಸಲಿ. ಸಂತ್ರಸ್ತರಿಗೆ ಪರಿಹಾರ ವಿತರಣೆ ಕೇವಲ ಕಣ್ಣೋರಿಸುವ ತಂತ್ರ ಆಗಬಾರದು. ಸರಕಾರ ಕೂಡಲೇ ಸಂತ್ರಸ್ತರ ನೆರವಿಗೆ ಧಾವಿಸಬೇಕಿದೆ' ಎಂದು ಎಂ.ಬಿ.ಪಾಟೀಲ್ ಆಗ್ರಹಿಸಿದರು.

ಡಿಕೆಶಿ ಹುಟ್ಟುಹಬ್ಬವನ್ನು ಆಚರಿಸುತ್ತೇವೆ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ಗೆ 75 ವರ್ಷವಾದರೆ ಅವರ ಹುಟ್ಟುಹಬ್ಬವನ್ನು ಮಾಡಲಿ. ಈಗ ಅವರಿಗೆ ಅರವತ್ತು ವರ್ಷ ತುಂಬಿದೆ, ಷಷ್ಟಿಪೂರ್ತಿ ಮಾಡಿಕೊಳ್ಳಲಿ. ಇದೀಗ ಸಿದ್ದರಾಮಯ್ಯರ 75ನೆ ಹುಟ್ಟುಹಬ್ಬವನ್ನು ಎಲ್ಲರೂ ಒಗ್ಗಟ್ಟಿನಿಂದ ಆಚರಿಸುತ್ತಿದ್ದೇವೆ' ಎಂದು ಪಾಟೀಲ್ ಸ್ಪಷ್ಟಣೆ ನೀಡಿದರು.

‘ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರೂ ಭಾಗವಹಿಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಪೂರ್ವಭಾವಿ ಸಭೆಗೆ ಭಾಗಿಯಾಗಬೇಕಾದ ಅಗತ್ಯ ಇರಲಿಲ್ಲ. ಈಗಾಗಲೇ ಅವರು ಕಾರ್ಯಕ್ರಮಕ್ಕೆ ಅತಿಥಿಯಾಗಿ ಬರುತ್ತಿದ್ದಾರೆ. ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಿತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಕಾಂಗ್ರೆಸ್ ಇದರಲ್ಲಿ ಪಾಲ್ಗೊಳ್ಳಲಿದೆ. ಆದರೆ, ಇದು ಪಕ್ಷದ ಕಾರ್ಯಕ್ರಮವಲ್ಲ' ಎಂದು ವಿವರಿಸಿದರು.

ಇನ್ನೊಂದು ಚಕ್ರತೀರ್ಥ ಕಥೆಯಾಗದಿರಲಿ: ‘ಶಾಲಾ ಮಕ್ಕಳಿಗೆ ಮೊಟ್ಟೆ ನೀಡಬಾರದೆಂಬುದು ಸರಿಯಲ್ಲ. ಸರಕಾರ ಈ ಕುರಿತು ಪೌಷ್ಟಿಕಾಂಶಕ್ಕೆ ಸಂಬಂಧಿಸಿದ ತಜ್ಞರ ಅಭಿಪ್ರಾಯ ಪಡೆದುಕೊಳ್ಳಬೇಕು. ನಾವು ಚಿಕ್ಕವರಿದ್ದಾಗಿನಿಂದ ಹಾಲು ಕುಡಿದು ಬೆಳೆದಿದ್ದೇವೆ. ಈಗ ಹಾಲು ಮೊಟ್ಟೆ ಕೊಡಬಾರದೆನ್ನುವುದು ಅವೈಜ್ಞಾನಿಕ. ಕೆಲವರ ‘ಅಜೆಂಡಾ' ಜಾರಿಗೆ ತರಲು ಸರಕಾರ ಹೊರಟಿದೆ. ಆಹಾರ ಪದ್ಧತಿ ವಿಚಾರ ಸಂಬಂಧ ತಜ್ಞರಿಂದ ಸಲಹೆ ಪಡೆಯಬೇಕು. ಸರಕಾರ ಮನಸ್ಸಿಗೆ ಬಂದಂತೆ ಜಾರಿ ಸಲ್ಲ. ಇದು ಇನ್ನೊಂದು ಚಕ್ರತೀರ್ಥ ಕಥೆಯಾಗುತ್ತದೆ'

-ಎಂ.ಬಿ.ಪಾಟೀಲ್ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X