Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸೌದಿ ಯುವರಾಜನೊಂದಿಗೆ ಜೋ ಬೈಡನ್ ಮುಷ್ಟಿ...

ಸೌದಿ ಯುವರಾಜನೊಂದಿಗೆ ಜೋ ಬೈಡನ್ ಮುಷ್ಟಿ ಲಾಘವ: ಸಂಬಂಧ ಪುನಾರಂಭ ನಿರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ16 July 2022 9:12 AM IST
share
ಸೌದಿ ಯುವರಾಜನೊಂದಿಗೆ ಜೋ ಬೈಡನ್ ಮುಷ್ಟಿ ಲಾಘವ: ಸಂಬಂಧ ಪುನಾರಂಭ ನಿರೀಕ್ಷೆ

ರಿಯಾದ್ (ಸೌದಿ ಅರೇಬಿಯಾ): ಶ್ರೀಮಂತ ಗಲ್ಫ್ ಸಾಮ್ರಾಜ್ಯದ ಜತೆಗಿನ ಸಂಬಂಧವನ್ನು ಪುನರಾರಂಭಿಸುವ ಸಂಕೇತವಾಗಿ, ಸೌದಿ‌ ಅರೇಬಿಯಾಗೆ ಭೇಟಿ ನೀಡಿರುವ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಸೌದಿ ಯುವರಾಜ ಮೊಹ್ಮದ್ ಬಿನ್ ಸಲ್ಮಾನ್ ಅವರಿಗೆ ಮುಷ್ಟಿಲಾಘವ ನೀಡುತ್ತಿರುವ ದೃಶ್ಯವನ್ನು ಸೌದಿ ಸರ್ಕಾರಿ ಟೆಲಿವಿಷನ್ ಪ್ರಸಾರ ಮಾಡಿದೆ. ಇದು ಉಭಯ ದೇಶಗಳ ನಡುವೆ ಹದಗೆಟ್ಟಿರುವ ಸಂಬಂಧ ಪುನರಾರಂಭದ ಸಂಕೇತವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ವಾಷಿಂಗ್ಟನ್ ಪೋಸ್ಟ್ ಪತ್ರಕರ್ತ ಮತ್ತು ರಾಜಕೀಯ ಎದುರಾಳಿ ಜಮಾಲ್ ಖಶೋಗಿ ಹತ್ಯೆಯಲ್ಲಿ ಮುಹಮ್ಮದ್ ಬಿನ್ ಸಲ್ಮಾನ್ ಅವರ ಪಾತ್ರವನ್ನು ಬೈಡನ್ ಟೀಕಿಸಿದ್ದ ಹಿನ್ನೆಲೆಯಲ್ಲಿ ಉಭಯ ಮುಖಂಡರ ಭೇಟಿ ಹಾಗೂ ಮಾತುಕತೆಗೆ ಶ್ವೇತಭವನದ ಅಧಿಕಾರಿಗಳು ಕಠಿಣ ಪರಿಶ್ರಮ ವಹಿಸಿದ್ದರು ಎಂದು hindustantimes.com ವರದಿ ಮಾಡಿದೆ.

ಮಾತುಕತೆಯ ಕೊನೆಗೆ ಜಿದ್ದಾದಲ್ಲಿರುವ ಅರಮನೆಯ ಎದುರಲ್ಲಿ ಉಭಯ ಮುಖಂಡರು ಪರಸ್ಪರ ಮುಷ್ಟಿಲಾಘವ ನೀಡಿದ ಘಟನೆ, ಹಿಂದೆ ಸೌದಿ ಅರೇಬಿಯಾವನ್ನು ಅಸ್ಪೃಶ್ಯ ದೇಶ ಎಂದು ಕರೆದಿದ್ದ ಅಮೆರಿಕ ಅಧ್ಯಕ್ಷರ ಭೇಟಿಯ ಒಟ್ಟಾರೆ ಚಿತ್ರಣವನ್ನು ವ್ಯಾಖ್ಯಾನಿಸುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಉಭಯ ಮುಖಂಡ ನಡುವಿನ ಮಾತಕತೆಯನ್ನು ಪರಸ್ಪರ ದೇಶಗಳ ನಡುವಿನ ಸಂಬಂಧಕ್ಕೆ ಇರುವ ತಡೆಯನ್ನು ಬದಿಗೊತ್ತುವ ಘಟನೆ ಎಂದು ಹೇಳಲಾಗುತ್ತಿದೆ. ಆರಂಭದಲ್ಲಿ ಅಮೆರಿಕ ಮಾಧ್ಯಮ ಪ್ರತಿನಿಧಿಗಳಿಗೆ ಮಾತುಕತೆಯ ವೇಳೆ ಅವಕಾಶ ನೀಡಲಾಗಿತ್ತಾದರೂ, ನೇರ ಪ್ರಸಾರಕ್ಕೆ ಅನುಮತಿ ನೀಡಿರಲಿಲ್ಲ. ಕೇವಲ ಉಭಯ ಮುಖಂಡರ ಮಾತು ಆಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿತ್ತು.

ಅಮೆರಿಕ ಹಾಗೂ ಸೌದಿ ನಿಯೋಗಗಳ ಪ್ರತಿನಿಧಿಗಳು ಕುಳಿತಿದ್ದ ಮೇಜಿನ ಬಳಿ ಇದ್ದ ಮೈಕ್ರೋಫೋನ್‍ಗಳನ್ನು ಆಫ್ ಮಾಡಿದ್ದರಿಂದ ಉಭಯ ಮುಖಂಡರ ಆರಂಭಿಕ ಶುಭಾಶಯ ವಿನಿಮಯದ ಬಗ್ಗೆ ಏನೂ ಕೇಳಿಸುತ್ತಿರಲಿಲ್ಲ.
ಸೌದಿ ಅರೇಬಿಯಾ ಖಶೋಗಿ ಕುಟುಂಬದ ಕ್ಷಮೆ ಯಾಚಿಸಿದೆಯೇ ಅಥವಾ ಸೌದಿ ಅರೇಬಿಯಾ ಇನ್ನೂ ಬೈಡನ್ ಪಾಲಿಗೆ ಅಸ್ಪೃಶ್ಯವಾಗಿ ಉಳಿದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಲು ಉಭಯ ಗಣ್ಯರು ನಿರಾಕರಿಸಿದರು.

ಸೌದಿ ಅರೇಬಿಯಾದ ಬಂದರು ನಗರ ಜಿದ್ದಾಗೆ ಆಗಮಿಸಿದಾಗ ಬೈಡನ್ ಅವರನ್ನು ಮಕ್ಕಾ ಪ್ರಾಂತ್ಯದ ಗವರ್ನರ್ ಖಾಲಿದ್ ಅಲ್ ಫೈಸಲ್ ಸ್ವಾಗತಿಸಿದರು. ಯುವರಾಜ ಸ್ವಾಗತಕ್ಕೆ ಆಗಮಿಸಿರಲಿಲ್ಲ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X