Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್ ಗಲಭೆ: ಅಫಿಡವಿಟ್‍ನಲ್ಲಿ ಅಹ್ಮದ್...

ಗುಜರಾತ್ ಗಲಭೆ: ಅಫಿಡವಿಟ್‍ನಲ್ಲಿ ಅಹ್ಮದ್ ಪಟೇಲ್ ಹೆಸರು ಉಲ್ಲೇಖಕ್ಕೆ ಪುತ್ರಿಯ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ16 July 2022 1:23 PM IST
share
ಗುಜರಾತ್ ಗಲಭೆ: ಅಫಿಡವಿಟ್‍ನಲ್ಲಿ ಅಹ್ಮದ್ ಪಟೇಲ್ ಹೆಸರು ಉಲ್ಲೇಖಕ್ಕೆ ಪುತ್ರಿಯ ಆಕ್ಷೇಪ

 ಹೊಸದಿಲ್ಲಿ: ಗುಜರಾತ್‍ನಲ್ಲಿ 2002ರಲ್ಲಿ ನಡೆದ ಹಿಂಸಾಚಾರದ ಬಳಿಕ ಅಲ್ಲಿನ ಬಿಜೆಪಿ ಸರಕಾರವನ್ನು ಉರಳಿಸಲು ಅಹ್ಮದ್ ಪಟೇಲ್ ಅವರು  ಸೂಚಿಸಿದಂತೆ ನಡೆದ ದೊಡ್ಡ ಮಟ್ಟದ ಷಡ್ಯಂತ್ರದಲ್ಲಿ ತೀಸ್ತಾ ಸೇಟಲ್ವಾಡ್ ಭಾಗಿಯಾಗಿದ್ದಾರೆ ಎಂದು ಆಕೆಯ ಜಾಮೀನು ಅರ್ಜಿ ವಿರೋಧಿಸುವ ವೇಳೆ ರಾಷ್ಟ್ರೀಯ ತನಿಖಾ ಏಜನ್ಸಿ ಸೆಷನ್ಸ್ ನ್ಯಾಯಾಲಯದ ಮುಂದೆ ಸಲ್ಲಿಸಿದ ತನ್ನ ಅಫಿಡವಿಟ್‍ನಲ್ಲಿ ತಿಳಿಸಿರುವುದಕ್ಕೆ ದಿವಂಗತ ಕಾಂಗ್ರೆಸ್ ನಾಯಕ ಪಟೇಲ್ ಅವರ ಪುತ್ರಿ ಮುಮ್ತಾಜ್ ಪಟೇಲ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಆಗಿನ ಗುಜರಾತ್ ಸೀಎಂ ಆಗಿದ್ದ ನರೇಂದ್ರ ಮೋದಿ ವಿರುದ್ಧ "ಇಷ್ಟೊಂದು ದೊಡ್ಡ ಮಟ್ಟದ ಸಂಚು ಹೂಡಿದ್ದಕ್ಕಾಗಿ" ತಮ್ಮ ತಂದೆಯ ವಿರುದ್ಧ ಏಕೆ ಕಾನೂನು ಕ್ರಮಕೈಗೊಳ್ಳಲಾಗಿರಲಿಲ್ಲ ಎಂದು ಟ್ವೀಟ್ ಮೂಲಕ ಮುಮ್ತಾಜ್ ಪ್ರಶ್ನಿಸಿದ್ದಾರೆ.

"ವಿಪಕ್ಷಗಳಿಗೆ ಕೆಟ್ಟ ಹೆಸರು ತರಲು ರಾಜಕೀಯ ಸಂಚುಗಳಿಗಾಗಿ ಬಳಸಲು ಅಹ್ಮದ್ ಪಟೇಲ್ ಅವರ ಹೆಸರು ಈಗಲೂ ಮಹತ್ವ ಪಡೆದಿದೆ ಎಂದು ನನಗನಿಸುತ್ತದೆ. ಯುಪಿಎ ಆಡಳಿತದ ವೇಳೆ ತಿಸ್ತಾಗೆ ಏಕೆ ಪ್ರಶಸ್ತಿ ನೀಡಲಾಗಿಲ್ಲ ಮತ್ತು ರಾಜ್ಯಸಭಾ ಸದಸ್ಯರನ್ನಾಗಿ ಮಾಡಲಾಗಿಲ್ಲ  ಮತ್ತು ಇಷ್ಟೊಂದು ದೊಡ್ಡ ಸಂಚು ಹೂಡಿದ್ದಕ್ಕೆ ಏಕೆ ಕೇಂದ್ರ 2020ರ ತನಕ ಕೇಂದ್ರ ಕಾನೂನು ಕ್ರಮಕೈಗೊಂಡಿಲ್ಲ" ಎಂದು ಆಕೆ ಕೇಳಿದ್ದಾರೆ.

ಗುಜರಾತ್‍ನ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಘಟನೆಯಲ್ಲಿ ಮೃತರಾಗಿದ್ದ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಈ ಮೂಲಕ ಆಗಿನ ಗುಜರಾತ್ ಸೀಎಂ ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿದ ಬೆನ್ನಲ್ಲೇ ಸಂಚು ಹೂಡಿದ ಆರೋಪದ ಮೇಲೆ ತೀಸ್ತಾ ಅವರ ಬಂಧನವಾಗಿತ್ತು. ನಂತರ ಆಗಿನ ಗುಜರಾತ್ ಪೊಲೀಸ್ ಅಧಿಕಾರಿ ಶ್ರೀಕುಮಾರ್ ಅವರ ಬಂಧನವಾಗಿದ್ದರೆ ತೀರಾ ಇತ್ತೀಚೆಗೆ ಈಗಾಗಲೇ ಇನ್ನೊಂದು ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ಟ್ ಅವರನ್ನು ಟ್ರಾನ್ಸ್ ಫರ್ ವಾರಂಟ್ ಮೂಲಕ ಬಂಧಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X