Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ನಿಲ್ಲದ ಮಳೆ ಆರ್ಭಟ;...

ಚಿಕ್ಕಮಗಳೂರು: ನಿಲ್ಲದ ಮಳೆ ಆರ್ಭಟ; ಮುಂದುವರಿದ ಅನಾಹುತಗಳ ಸರಣಿ

ವಾರ್ತಾಭಾರತಿವಾರ್ತಾಭಾರತಿ16 July 2022 6:29 PM IST
share
ಚಿಕ್ಕಮಗಳೂರು: ನಿಲ್ಲದ ಮಳೆ ಆರ್ಭಟ; ಮುಂದುವರಿದ ಅನಾಹುತಗಳ ಸರಣಿ

ಚಿಕ್ಕಮಗಳೂರು, ಜು.16: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಪ್ರಮುಖ ನದಿಗಳು, ಹಳ್ಳಕೊಳ್ಳಗಳು ಅಪಾಯದ ಮಟ್ಟದಲ್ಲೇ ಹರಿಯುತ್ತಿವೆ. ಭಾರೀ ಮಳೆಯಿಂದಾಗಿ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿ ಕಳಸ ಸಮೀಪದ ಜಾಂಬಳೆ ಎಂಬಲ್ಲಿ ಕಳಸ-ಮಂಗಳೂರು ಸಂಪರ್ಕದ ಹೆದ್ದಾರಿ ಮೇಲೆ ನದಿಯ ನೆರೆ ನೀರು ಹರಿದು ವಾಹನ ಸಂಚಾರಕ್ಕೆ ತೊಂದರೆಯಾಗಿದ್ದ ಘಟನೆ ವರದಿಯಾಗಿದೆ. 

ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿರುವುದರಿಂದ ಜನಜೀವನ ಅಸ್ತಸವ್ಯಸ್ತಗೊಂಡಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯಮಟ್ಟದಲ್ಲೇ ಹರಿಯುತ್ತಿದ್ದು, ನದಿ ಪಾತ್ರದ ಗ್ರಾಮಗಳ ಜನರು ಭಯದಲ್ಲಿ ಬದುಕುವಂತಾಗಿದೆ. ಶೃಂಗೇರಿ, ಕೊಪ್ಪ, ಮೂಡಿಗೆರೆ, ನರಸಿಂಹರಾಜಪುರ, ಕಳಸ ಭಾಗದಲ್ಲಿ ಭಾರೀ ಮಳೆ ನಿಲ್ಲುವ ಸೂಚನೆ ಇಲ್ಲದಂತಾಗಿದೆ. ಮಲೆನಾಡಿನಾದ್ಯಂತ ಹಳ್ಳಗಳು, ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಜನರು ಮನೆಯಿಂದ ಹೊರಬಾರದಂತಾಗಿದೆ. ನಿರಂತರ ಮಳೆ ಪರಿಣಾಮ ಕಾಫಿ, ಅಡಿಕೆ, ಭತ್ತದ ಗದ್ದೆಗಳಲ್ಲಿ ಕೃಷಿ ಚಟುವಟಿಕೆಗೂ ಹಿನ್ನಡೆಯಾಗಿದೆ. ಕಾಫಿ, ಅಡಿಕೆ ಬೆಳೆ ಕೊಳೆ ರೋಗಕ್ಕೆ ತುತ್ತಾಗಿದ್ದರೇ, ಬಯಲು ಭಾಗದಲ್ಲಿ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ತರಕಾರಿ, ರಾಗಿ, ಜೋಳದಂತಹ ಬೆಳೆಗಳು ಮಳೆ ಹೊಡೆತಕ್ಕೆ ಸಿಲುಕಿ ಕೊಳೆಯಲಾರಂಭಿಸಿವೆ.

ಜಿಲ್ಲೆಯ ಮಲೆನಾಡು ಮೂಡಿಗೆರೆ, ಕಳಸ, ಶೃಂಗೇರಿ ಭಾಗದಲ್ಲಿ ನಿರಂತರ ಮಳೆಗೆ ಅಲ್ಲಲ್ಲಿ ಗುಡ್ಡಕುಸಿತ ಉಂಟಾಗಿದೆ. ರಸ್ತೆಗಳಿಗೂ ಹಾನಿಯಾಗಿದೆ. ವಿದ್ಯುತ್ ಕಂಬಗಳು, ಮರಗಳು ಪ್ರತಿದಿನ ಧರೆಗುರುಳುತ್ತಿವೆ. ಹಳ್ಳಗಳ ನೀರು ಸಂಪರ್ಕ ರಸ್ತೆ ಮೇಲೆ ಹರಿಯುತ್ತಿರುವುದರಿಂದ ಕೆಲವು ಗ್ರಾಮಗಳು ಸಂಪರ್ಕವನ್ನು ಕಡಿದುಕೊಂಡಿವೆ. ಅನೇಕ ಮನೆಗಳು ಧರೆಗುರುಳಿ ಬಿದ್ದಿವೆ. ಕುದುರೆಮುಖ, ಕಳಸ, ಜಾಂಬಳೆ ಭಾಗದಲ್ಲಿ ಶನಿವಾರ ರಾತ್ರಿ, ಬೆಳಗ್ಗೆ ಭಾರೀ ಮಳೆ ಸುರಿದ ಪರಿಣಾಮ ಶುಕ್ರವಾರ ಬೆಳಗ್ಗೆ ಕಳಸ ಸಮೀಪದ ಜಾಂಬಳೆ ಗ್ರಾಮದ ಮೂಲಕ ಹಾದು ಹೋಗಿರುವ ಕಳಸ-ಮಂಗಳೂರು ಸಂಪರ್ಕದ ಹೆದ್ದಾರಿ ಮೇಲೆ ಭದ್ರಾ ನದಿಯ ನೆರೆ ನೀರು ಸುಮಾರು 3 ಅಡಿಗಳಷ್ಟು ನಿಂತ ಪರಿಣಾಮ ವಾಹನಗಳ ಸಂಚಾರಕ್ಕೆ ತೊಂದರೆಯಾಗಿತ್ತು.

ಚಿಕ್ಕಮಗಳೂರು, ಕಡೂರು, ತರೀಕೆರೆ ಭಾಗದಲ್ಲಿ ಮಳೆಯ ಅಬ್ಬರ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆಯಾದರೂ ಆಗಾಗ್ಗೆ ಧಾರಾಕಾರ ಮಳೆಯಾಗುತ್ತಿದ್ದು, ಮೂರು ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.

ನದಿಗಳಲ್ಲಿ ತೇಲಿ ಬರುತ್ತಿರುವ ಮೂಕ ಪ್ರಾಣಿಗಳ ಕಳೇಬರ: ಜಿಲ್ಲೆಯಾದ್ಯಂತ ಅಬ್ಬರಿಸುತ್ತಿರುವ ಮಳೆಗೆ ಮೂಕ ಪ್ರಾಣಿಗಳು ಪ್ರಾಣ ಕಳೆದುಕೊಳ್ಳುತ್ತಿವೆ. ಮೇವನ್ನು ಅರಸಿ ನದಿ ತೀರಕ್ಕೆ ಹೋಗಿದ್ದ ಹಸುಗಳು ನದಿ ನೀರಿನಲ್ಲಿ ಕೊಚ್ಚ ಹೋಗುತ್ತಿವೆ. ಶುಕ್ರವಾರ ಸಂಜೆ ಕಳಸ ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆ ಬಳಿ ಭದ್ರಾ ನದಿಯಲ್ಲಿ ತೇಲಿ ಬಂದ ಹಸುವಿನ ಕಳೇಬರ ಹೆಬ್ಬಾಳೆ ಸೇತುವೆ ಮೇಲೆ ಸಿಲುಕಿಕೊಂಡಿತ್ತು. ಮಲೆನಾಡು ಭಾಗದಲ್ಲಿ ನಿರಂತರ ಮಳೆಯಿಂದಾಗಿ ಶೀತ ವಾತಾವರಣಕ್ಕೂ ಜಾನುವಾರುಗಳು ಬಲಿಯಾಗುತ್ತಿವೆ.

ಜಿಲ್ಲಾದ್ಯಂತ 328 ಮನೆಗಳಿಗೆ ಹಾನಿ: ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಜಿಲ್ಲೆಯಲ್ಲಿ 35 ಮನೆಗಳಿಗೆ ಹಾನಿಯಾಗಿದೆ. 4 ಮನೆಗಳು ಸಂಪೂರ್ಣವಾಗಿ ಕುಸಿದಿವೆ. 12 ಮನೆಗಳಿಗೆ ಶೇ.25ರಿಂದ 75ರಷ್ಟು ಹಾನಿಯಾಗಿದೆ. 19 ಮನೆಗಳಿಗೆ ಶೇ.15ರಿಂದ 25ರಷ್ಟು ಹಾನಿಯಾಗಿದೆ. ಜೂನ್ ತಿಂಗಳಿಂದ ಇಲ್ಲಿವರೆಗೂ ಜಿಲ್ಲೆಯಲ್ಲಿ ಮಳೆಯಿಂದ 328 ಮನೆಗಳಿಗೆ ಹಾನಿಯಾಗಿದೆ. 44 ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ. 97 ಮನೆಗಳಿಗೆ ಶೇ.25ರಿಂದ 75ರಷ್ಟು ಹಾನಿಯಾಗಿದೆ. 187 ಮನೆಗಳಿಗೆ ಶೇ.15ರಿಂದ 25ರಷ್ಟು ಹಾನಿಯಾಗಿದೆ. 13 ಗುಡಿಸಲುಗಳಿಗೆ ಹಾನಿಯಾಗಿದೆ. ಮಳೆಯಿಂದಾಗಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಓರ್ವ ಶಾಲಾ ಬಾಲಕಿ ಸೇರಿ ಇಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಶೋಧ ಕಾರ್ಯ ಮುಂದುವರಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X