Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ ಎರಡನೇ ಮಂಕಿಪಾಕ್ಸ್‌ ಪ್ರಕರಣ...

ಕೇರಳದಲ್ಲಿ ಎರಡನೇ ಮಂಕಿಪಾಕ್ಸ್‌ ಪ್ರಕರಣ ಪತ್ತೆ: ಆರೋಗ್ಯ ಸಚಿವೆ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ18 July 2022 4:26 PM IST
share
ಕೇರಳದಲ್ಲಿ ಎರಡನೇ ಮಂಕಿಪಾಕ್ಸ್‌ ಪ್ರಕರಣ ಪತ್ತೆ: ಆರೋಗ್ಯ ಸಚಿವೆ ಮಾಹಿತಿ

ತಿರುವನಂತಪುರಂ: ಕೇರಳದಲ್ಲಿ ಇನ್ನೊಂದು ಮಂಕಿಪಾಕ್ಸ್ ಪ್ರಕರಣ ದೃಢಪಟ್ಟಿದೆ ಎಂದು ರಾಜ್ಯದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಕಳೆದ ಗುರುವಾರವಷ್ಟೇ ಕೇರಳ ಹಾಗೂ ದೇಶದ ಮೊದಲ ಮಂಕಿಪಾಕ್ಸ್ ಪ್ರಕರಣ ಸಂಯುಕ್ತ ಅರಬ್ ಸಂಸ್ಥಾನದಿಂದ ವಾಪಸಾದ ವ್ಯಕ್ತಿಯಲ್ಲಿ ದೃಢಪಟ್ಟಿತ್ತು.

ಸೋಂಕಿತ ವ್ಯಕ್ತಿಯ ಎಲ್ಲಾ 11 ಸಂಪರ್ಕಗಳನ್ನು ಗುರುತಿಸಲಾಗಿದೆ, ಈತನ 11 ಸಹಪ್ರಯಾಣಿಕರು, ಕುಟುಂಬ ಸದಸ್ಯರು, ಆಟೋ, ಟ್ಯಾಕ್ಸಿ ಚಾಲಕ ಹಾಗೂ ಆತ ಮೊದಲು ಚಿಕಿತ್ಸೆ ಪಡೆದಿದ್ದ ಖಾಸಗಿ ಆಸ್ಪತ್ರೆಯ ಚರ್ಮರೋಗ ತಜ್ಞರನ್ನೂ ನಿಗಾದಲ್ಲಿರಿಸಲಾಗಿದೆ.

ಮಂಕಿಪಾಕ್ಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಕೇರಳ ಸರಕಾರ ಸರ್ವಕ್ರಮಗಳನ್ನೂ ಕೈಗೊಳ್ಳುತ್ತಿದ್ದು ಐದು ಜಿಲ್ಲೆಗಳಲ್ಲಿ- ತಿರುವನಂತಪುರಂ, ಕೊಲ್ಲಂ, ಪಟ್ಟಣಂತಿಟ್ಟ, ಅಲಪ್ಪುಝ ಮತ್ತು ಕೊಟ್ಟಾಯಾಂನಲ್ಲಿ ವಿಶೇಷ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಮಂಕಿಪಾಕ್ಸ್ ಮೊದಲು ದೃಢಪಟ್ಟ ವ್ಯಕ್ತಿಯ ಸಹಪ್ರಯಾಣಿಕರು ಈ ಜಿಲ್ಲೆಯವರಾಗಿರುವುದರಿಂದ ಇಲ್ಲಿ ಎಚ್ಚರಿಕೆ ವಹಿಸಲಾಗಿದೆ ಎಂದು ಉನ್ನತ ಮಟ್ಟದ ಸಭೆ ನಡೆಸಿದ ನಂತರ ಸಚಿವೆ ಹೇಳಿದ್ದಾರೆ.

ಚಿಕನ್ ಪಾಕ್ಸ್ ಅಥವಾ ಅಂತಹುದೇ ಲಕ್ಷಣಗಳನ್ನು ಹೊಂದಿರುವವರ ಮೇಲೂ ನಿಗಾ ಇರಿಸಲಾಗಿದೆ. ಮಂಕಿಪಾಕ್ಸ್ ಸೋಂಕು ಬೇರೆ ಯಾರಿಗಾದರೂ ತಗಲಿರಬಹುದೇ ಎಂಬುದನ್ನು ಪತ್ತೆಹಚ್ಚಲು ರ್ಯಾಂಡಮ್ ಟೆಸ್ಟಿಂಗ್ ನಡೆಸಲಾಗುವುದು, ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗುವುದು. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರಗಳ ಜೊತೆಗೂ ಸರಕಾರ ಚರ್ಚೆ ನಡೆಸುತ್ತಿದ್ದು ಸೋಂಕಿನ ಲಕ್ಷಣಗಳು ಕಂಡುಬಂದಿದ್ದೇ ಆದಲ್ಲಿ ತಕ್ಷಣ ಪ್ರಯಾಣಿಕರನ್ನು ಪ್ರತ್ಯೇಕವಾಗಿರಿಸಿ ಆಸ್ಪತ್ರೆಗೆ ಸೇರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಸಚಿವೆ ಹೇಳಿದರು.

ರಾಜ್ಯದ 1200 ಆರೋಗ್ಯ ಕಾರ್ಯಕರ್ತರಿಗೆ ಮಂಕಿಪಾಕ್ಸ್ ಮುನ್ನೆಚ್ಚರಿಕಾ ಕ್ರಮಗಳ ಕುರಿತು ತರಬೇತಿ ನೀಡಲಾಗಿದೆ. ಈಗಾಗಲೇ ಮಂಕಿಪಾಕ್ಸ್ ದೃಢಪಟ್ಟವರ ಆರೋಗ್ಯ ಸ್ಥಿರವಾಗಿದೆ, ಅವರ ಸಂಪರ್ಕ ಹೊಂದಿದವರ ಜೊತೆಗೆ ಅಧಿಕಾರಿಗಳು ಸತತ ಸಂಪರ್ಕದಲ್ಲಿದ್ದು ಅವರ ಆರೋಗ್ಯ ಕುರಿತು ವಿಚಾರಿಸುತ್ತಿದ್ದಾರೆ ಎಂದು ಸಚಿವೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X