Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಖ್ಯಾತ ಗಾಯಕ, ಸಂಗೀತ ಸಂಯೋಜಕ ಭೂಪಿಂದರ್...

ಖ್ಯಾತ ಗಾಯಕ, ಸಂಗೀತ ಸಂಯೋಜಕ ಭೂಪಿಂದರ್ ಸಿಂಗ್ ನಿಧನ

ವಾರ್ತಾಭಾರತಿವಾರ್ತಾಭಾರತಿ19 July 2022 7:54 AM IST
share
ಖ್ಯಾತ ಗಾಯಕ, ಸಂಗೀತ ಸಂಯೋಜಕ ಭೂಪಿಂದರ್ ಸಿಂಗ್ ನಿಧನ

ಹೊಸದಿಲ್ಲಿ: 1970 ಹಾಗೂ 80ರ ದಶಕದ ಹಿಂದಿ ಚಿತ್ರರಂಗದ ಅತ್ಯುತ್ತಮ ಗಝಲ್ ಮತ್ತು ನಝ್ಮ್‍ಗಳಿಗೆ ಜೀವ ತುಂಬಿದ್ದ ಖ್ಯಾತ ಗಾಯಕ ಮತ್ತು ಸಂಗೀತ ಸಂಯೋಜಕ ಭೂಪಿಂದರ್ ಸಿಂಗ್ ಸೋಮವಾರ ಸಂಜೆ ಮುಂಬೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 82 ವರ್ಷ ವಯಸ್ಸಾಗಿತ್ತು.

"ದೊಡ್ಡಕರುಳು ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಅವರಿಗೆ ಕೆಲ ವಾರಗಳ ಹಿಂದೆ ಕೋವಿಡ್ ಸೋಂಕು ಕೂಡಾ ಪತ್ತೆಯಾಗಿತ್ತು" ಎಂದು ಅವರ ಬಾಂಗ್ಲಾದೇಶ ಸಂಜಾತೆ ಪತ್ನಿ ಹಾಗೂ ಗಝಲ್ ಸಹ ಗಾಯಕಿ ಮಿತಾಲಿ ಮುಖರ್ಜಿ (ಸಿಂಗ್) ಹೇಳಿದ್ದಾರೆ.

ಅಮೃತಸರದಲ್ಲಿ ಜನಿಸಿದ ಸಿಂಗ್ ಅವರ ಆಳ ಹಾಗೂ ವಿಶಿಷ್ಟ ಗಾಯನ, ಗಝಲ್‍ಗಳ ಭಾವಸ್ಪರ್ಶಿ ಗೀತೆಗಳಿಗೆ ಹೇಳಿ ಮಾಡಿಸಿದಂತಿತ್ತು. ಇವರ ಕಂಠದಿಂದ ಮೂಡಿಬಂದ "ದಿಲ್ ದೂಂದ್‍ತಾ ಹೈ ಫಿರ್ ವೊಹಿ' (ಮೌಸಮ್), 'ಏಕ್ ಅಕೇಲಾ ಇಸ್ ಶೆಹರ್ ಮೈನ್' (ಘರೋವಾಂದ) ಅತ್ಯಂತ ಜನಪ್ರಿಯವಾಗಿದ್ದವು. ಇವರ ಜನಪ್ರಿಯ ಹಾಡುಗಳನ್ನು ಮದನ್ ಮೋಹನ್, ಜೈದೇವ್, ಖಯ್ಯಮ್ ಹಾಗೂ ಆರ್.ಡಿ.ಬರ್ಮನ್ ಸಂಯೋಜಿಸಿದ್ದರು.

"ಇವರು ತಾಜಾ ಹಾಗೂ ಮಾದಕ ಧ್ವನಿಯ ಗಾಯಕ. ಆರ್.ಡಿ.ಬರ್ಮನ್ ಮತ್ತು ಗುಲ್ಜರ್ ಅವರ ಫೇವರಿಟ್ ಗಾಯಕರಾಗಿದ್ದರು" ಎಂದು ಗಝಲ್ ಗಾಯಕ ಅನೂಪ್ ಜಲೋಟಾ ಶೋಕಸಂದೇಶದಲ್ಲಿ ಹೇಳಿದ್ದಾರೆ. ಚಲನಚಿತ್ರ ಗೀತೆಗಳ ಹೊರತಾಗಿ ಇತರ ಗಝಲ್, ಭಜನ್ ಮತ್ತು ಗೀತೆಗಳನ್ನೂ ಸಿಂಗ್ ಸಂಯೋಜಿಸಿದ್ದರು. ಮಧ್ಯಕಾಲೀನ ಕವಿ ಕಬೀರ್ ಅವರ 'ಮೋಕೊ ಕಹನ್ ಧೂಂದೇ ರೇ ಬಂಡೆ' ಮತ್ತು ಆಹತ್ ಸಿ ಕೋಯಿ ಆಯೆ' ಇವರ ಅತ್ಯುತ್ತಮ ಸಂಯೋಜನೆಗಳು.

ಭೂಪಿಂದರ್ ಅವರು ಪ್ರಖ್ಯಾತ ಗಿಟಾರ್ ವಾದಕರೂ ಆಗಿದ್ದರು ಹಾಗೂ ಆರ್.ಡಿ.ಬರ್ಮನ್ ಅವರ ಮೇಳದಲ್ಲಿದ್ದರು. 'ದಮ್ ಮಾರೊ ದಮ್' (ಹರೇ ರಾಮ ಹರೇ ಕೃಷ್ಣ), ಛರಾ ಲಿಯಾ ಹೈ (ಯಾದೊಂ ಕಿ ಬರಾತ್) ಗೀತೆಗಳಿಗೆ ಇವರು ಗಿಟಾರ್ ನುಡಿಸಿ, ಜನಪ್ರಿಯರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X