Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಮ್ಮ ಶೇ 80ಕ್ಕೂ ಹೆಚ್ಚು ಉದ್ಯೋಗಿಗಳು...

ನಮ್ಮ ಶೇ 80ಕ್ಕೂ ಹೆಚ್ಚು ಉದ್ಯೋಗಿಗಳು ಹಿಂದುಗಳು: ವೈರಲ್ ವಿವಾದಿತ ವೀಡಿಯೋ ನಂತರ ಲುಲು ಮಾಲ್ ಹೇಳಿಕೆ

ಇದು ಸಮಾಜವಿರೋಧಿ ಶಕ್ತಿಗಳ ಕೆಲಸ ಎಂದ ಉತ್ತರಪ್ರದೇಶ ಸಚಿವ

ವಾರ್ತಾಭಾರತಿವಾರ್ತಾಭಾರತಿ19 July 2022 12:52 PM IST
share
ನಮ್ಮ ಶೇ 80ಕ್ಕೂ ಹೆಚ್ಚು ಉದ್ಯೋಗಿಗಳು ಹಿಂದುಗಳು: ವೈರಲ್ ವಿವಾದಿತ ವೀಡಿಯೋ ನಂತರ ಲುಲು ಮಾಲ್ ಹೇಳಿಕೆ

 ಲಕ್ನೋ: ಉದ್ಘಾಟನೆಯಾದ ದಿನದಂದೇ ಮಾಲ್‍ನೊಳಗೆ ನಮಾಜ್ ಸಲ್ಲಿಸುವ ವೀಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ವಿವಾದಕ್ಕೀಡಾಗಿರುವ ಲಕ್ನೋದ ಲುಲು ಮಾಲ್ ಆಡಳಿತ ಇದೀಗ ಹೇಳಿಕೆಯೊಂದನ್ನು ಬಿಡುಗಡೆಗೊಳಿಸಿ ತನ್ನ ಶೇ 80ಕ್ಕೂ ಹೆಚ್ಚಿನ ಉದ್ಯೋಗಿಗಳು ಹಿಂದುಗಳಾಗಿದ್ದಾರೆಂಬ ಮಾಹಿತಿ ಒದಗಿಸಿದೆ ಎಂದು indianexpress.com ವರದಿ ಮಾಡಿದೆ.

ಮಾಲ್ ಆಡಳಿತ ಒಂದು ನಿರ್ದಿಷ್ಟ ಸಮುದಾಯದ ಪರ ಇದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಮಾಲ್ ಆಡಳಿತ ಹೇಳಿಕೆ ಬಿಡುಗಡೆಗೊಳಿಸಿದೆ. "ಕೆಲ ಜನರು ತಮ್ಮ ಸ್ವಹಿತಾಸಕ್ತಿಗಳಿಗಾಗಿ ನಮ್ಮ ಸಂಸ್ಥೆಯನ್ನು ಗುರಿಯಾಗಿಸಿರುವುದು ದುರಾದೃಷ್ಟಕರ. ನಮ್ಮ  ಉದ್ಯೋಗಿಗಳಲ್ಲಿ ಸ್ಥಳೀಯ ನಿವಾಸಿಗಳು, ಉತ್ತರ ಪ್ರದೇಶ ಮತ್ತು ದೇಶದ ವಿವಿಧೆಡೆಗಳವರು ಇದ್ದಾರೆ. ಇವರಲ್ಲಿ ಶೇ 80ಕ್ಕೂ ಅಧಿಕ ಮಂದಿ ಹಿಂದುಗಳಾಗಿದ್ದಾರೆ ಹಾಗೂ ಉಳಿದವರು ಮುಸ್ಲಿಮರು, ಕ್ರೈಸ್ತರು ಮತ್ತು ಇತರರು. ನಮ್ಮ ಸಂಸ್ಥೆಯ ಯಾರಿಗೂ ಯಾವುದೇ ಧಾರ್ಮಿಕ ಚಟುವಟಿಕೆಗೆ ಅವಕಾಶವಿಲ್ಲ. ಪ್ರಾರ್ಥನೆ ಮತ್ತು ನಮಾಝ್ ಅನ್ನು ಸಲ್ಲಿಸಲು ಯತ್ನಿಸಿದವರ ವಿರುದ್ಧ ಮಾಲ್‍ನ ಆಡಳಿತ ದೂರು ನೀಡಿದೆ" ಎಂದು ಹಿಂದಿಯಲ್ಲಿ ಬರೆಯಲಾದ ಹೇಳಿಕೆಯನ್ನು ಲುಲು ಇಂಡಿಯಾ ಶಾಪಿಂಗ್ ಮಾಲ್ ಪ್ರೈವೇಟ್ ಲಿಮಿಟೆಡ್ ಇದರ ಪ್ರಾದೇಶಿಕ ನಿರ್ದೇಶಕ ಜಯಕುಮಾರ್ ಗಂಗಾಧರ್ ಬಿಡುಗಡೆಗೊಳಿಸಿದ್ದಾರೆ.

"ಲುಲು ಮಾಲ್ ಒಂದು ಉದ್ಯಮ ಸಂಸ್ಥೆಯಾಗಿದ್ದು, ಯಾವುದೇ ಜಾತಿ, ಧರ್ಮವನ್ನು ಪರಿಗಣಿಸದೆ ಉದ್ಯಮ ನಡೆಸುತ್ತಿದೆ. ನಮಗೆ ಗ್ರಾಹಕರೇ ಮುಖ್ಯ. ಸರಕಾರಿ ನಿಯಮಗಳಿಗೆ ಅನುಸಾರವಾಗಿ ನಾವು ಉದ್ಯಮ ನಡೆಸುತ್ತಿದ್ದೇವೆ. ನಮ್ಮ ಉದ್ಯೋಗಿಗಳು ಇಲ್ಲಿ ಅವರ ಜಾತಿ/ಧರ್ಮಗಳ ಕಾರಣದಿಂದಾಗಿ ಇಲ್ಲ, ಬದಲು ಅವರ ಅರ್ಹತೆ ಮತ್ತು ಕಾರ್ಯತತ್ಪರತೆಯಿಂದಾಗಿ ಇದ್ದಾರೆ, ಸ್ವಹಿತಾಸಕ್ತಿಗಾಗಿ ನಮ್ಮ ಗೌರವಾನ್ವಿತ ಸಂಸ್ಥೆಯನ್ನು ಟಾರ್ಗೆಟ್ ಮಾಡಬೇಡಿ ಎಂದು ಎಲ್ಲರಿಗೂ ಮನವಿ ಮಾಡುತ್ತೇವೆ ನಮಗೆ ನಮ್ಮ ಗ್ರಾಹಕರ ಹಿತದೃಷ್ಟಿಯಿಂದ ಉದ್ಯಮ ನಡೆಸಲು ಅವಕಾಶ ಒದಗಿಸಿ" ಎಂದೂ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಲುಲು ಮಾಲ್ ಕುರಿತ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಮೂಲಭೂತಸೌಕರ್ಯ ಮತ್ತು ಕೈಗಾರಿಕಾ ಅಭಿವೃದ್ಧಿ ಸಚಿವ ನಂದ ಗೋಪಾಲ್ ಗುಪ್ತ, "ಇದು ಸಮಾಜ-ವಿರೋಧಿ ಶಕ್ತಿಗಳ ಕೆಲಸ, ರಾಜ್ಯಕ್ಕೆ ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಸರಕಾರದ ಯಶಸ್ಸನ್ನು ಅರಗಿಸಿಕೊಳ್ಳಲಾಗದವರ ಕೃತ್ಯ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X