Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಾಡಿನ ಸೌಹಾರ್ದತೆ ಮೇಲೆ ಬಹುಮುಖಿಯಾಗಿ...

ನಾಡಿನ ಸೌಹಾರ್ದತೆ ಮೇಲೆ ಬಹುಮುಖಿಯಾಗಿ ದಾಳಿ: ಕೆ.ಎಸ್.ಲಕ್ಷ್ಮೀ

ಉಡುಪಿ ಜಿಲ್ಲಾ ಜನವಾದಿ ಮಹಿಳಾ ಪ್ರಥಮ ಸಮ್ಮೇಳನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ19 July 2022 7:17 PM IST
share
ನಾಡಿನ ಸೌಹಾರ್ದತೆ ಮೇಲೆ ಬಹುಮುಖಿಯಾಗಿ ದಾಳಿ: ಕೆ.ಎಸ್.ಲಕ್ಷ್ಮೀ

ಕುಂದಾಪುರ: ಬೆಲೆ ಏರಿಕೆ ಮೂಲಕ ಜನರ ಮೇಲೆ ನಡೆಸುತ್ತಿರುವ ದೌರ್ಜನ್ಯಗಳ ಬಗ್ಗೆ ಜನತೆಯ ದಿಕ್ಕು ತಪ್ಪಿಸಲು ನಾಡಿನ ಸೌಹಾರ್ದತೆಯ ಮೇಲೆ ಬಹುಮುಖಿಯಾಗಿ ದಾಳಿ ನಡೆಸಲಾಗುತ್ತಿದೆ. ಅಭಿವೃದ್ಧಿಯ ಅಜೆಂಡಾದೊಂದಿಗೆ ಅಧಿಕಾರಕ್ಕೆ ಬಂದವರು ಕೋಮು ಅಜೆಂಡಾವನ್ನು ಮುನ್ನೆಲೆಗೆ ತರುತ್ತಿರುವುದು ಸಂವಿಧಾನ ವಿರೋಧಿಯಾಗಿದೆ. ಇಂಥವರಿಗೆ ನಾಡಿನ ಮಹಿಳೆಯರು ತಕ್ಕ ಪಾಠ ಕಲಿಸ ಬೇಕಾಗಿದೆ ಎಂದು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ.ಎಸ್.ಲಕ್ಷ್ಮೀ ಹೇಳಿದ್ದಾರೆ.

ಕುಂದಾಪುರ ಹಂಚು ಕಾರ್ಮಿಕ ಭವನದಲ್ಲಿ ರವಿವಾರ ನಡೆದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಉಡುಪಿ ಜಿಲ್ಲಾ ಪ್ರಥಮ ಜಿಲ್ಲಾ ಸಮ್ಮೇಳನ ವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ವಾರ್ಷಿಕ ಎರಡು ಕೋಟಿ ಉದ್ಯೋಗ ನೀಡುವುದಾಗಿ ಘೋಷಿಸಿದ್ದ ಕೇಂದ್ರ- ರಾಜ್ಯ ಬಿಜೆಪಿ ಸರಕಾರಗಳ ಅವಧಿಯಲ್ಲಿ ೨೦೧೭ರಿಂದ ೨೦೨೨ರ ಮಧ್ಯೆ ೨ ಕೋಟಿ ಮಹಿಳೆಯರ ಉದ್ಯೋಗಗಳು ಕಾಣೆಯಾಗಿವೆ. ಶಿಕ್ಷಣದ ಹಣದುಬ್ಬರ ಶೇ.೯.೧, ಆರೋಗ್ಯದ ಹಣದುಬ್ಬರ ಶೇ.೯.೭೫, ಎಲ್.ಪಿ.ಜಿ. ಗ್ಯಾಸ್ ದರ ಶೇ.೧೪೪ ಹೆಚ್ಚಳವಾಗಿದೆ. ಇದು ದೇಶದ ಬಡವರ ಮೇಲೆ, ಮಹಿಳೆಯರ ಮೇಲೆ ಮಾರಣಾಂತಿಕ ಪ್ರಭಾವ ಬೀರಿದೆ ಎಂದರು.

ಸರಕಾರ ಕಾರ್ಪೋರೇಟ್ ಮತ್ತು ಕೋಮುವಾದ ಪರವಾದ ನೀತಿಗಳನ್ನು ಜಾರಿ ಮೂಡುವ ಮೂಲಕ ಮಹಿಳೆಯರ ಮೇಲಿನ ಸಾಮಾಜಿಕ ಮತ್ತು ಆರ್ಥಿಕ ದೌರ್ಜನ್ಯಗಳನ್ನು ಹೆಚ್ಚು ಮಾಡುತ್ತಿದೆ. ಹೀಗೆ ಸರಕಾರ ಮಹಿಳೆಯರಿಗೆ ಮಹಾನ್ ದ್ರೋಹ ಎಸಗಿದೆ ಎಂದು ಅವರು ಆರೋಪಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪ್ರಗತಿಪರ ಚಿಂತಕಿ ಡಾ.ರೇಖಾ ಬನ್ನಾಡಿ ಮಾತನಾಡಿ, ಮಹಿಳೆಯರ ಅಸ್ತಿತ್ವದ ಮೇಲೆ ನಿರಂತರ ದಾಳಿಗಳು ಹೆಚ್ಚುತ್ತಿದ್ದು, ಜೀವ ಪರವಾದ ಜಾತ್ಯಾತೀತ ಮಹಿಳಾ ಚಳುವಳಿಯನ್ನು ಕಟ್ಟಿ ಬೆಳೆಸುವ ಮೂಲಕ ಪ್ರಸಕ್ತ ಸವಾಲುಗಳನ್ನು ಎದುರಿಸಬೇಕು. ಇದು ಇಂದಿನ ಅಗತ್ಯತೆ ಎಂದು ಹೇಳಿದರು.

ಸಿಐಟಿಯು ರಾಜ್ಯ ಮುಖಂಡರಾದ ಕೆ.ಶಂಕರ್, ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಜಯಶ್ರೀ ಮಾತನಾಡಿದರು. ಅಧ್ಯಕ್ಷತೆಯನ್ನು ಆರತಿ ವಹಿಸಿದ್ದರು. ಧ್ವಜಾರೋಹಣವನ್ನು ಹಿರಿಯ ಸಂಗಾತಿ ಲಲಿತಾ  ನೆರವೇರಿಸಿದರು. ಸರೋಜಾ ಸ್ವಾಗತಿಸಿದರು. ನಾಗರತ್ನ ನಾಡಾ ಕಾರ್ಯಕ್ರಮ ನಿರೂಪಿಸಿದರು. ಶೀಲಾವತಿ ವಂದಿಸಿದರು.

ಕೊನೆಯಲ್ಲಿ ಉಡುಪಿ ಪ್ರಥಮ ಜಿಲ್ಲಾ ಸಮಿತಿಯನ್ನು ಆಯ್ಕೆ ಮಾಡ ಲಾಯಿತು. ಅಧ್ಯಕ್ಷರಾಗಿ ಸರೋಜಾ, ಕಾರ್ಯದರ್ಶಿಯಾಗಿ ಶೀಲಾವತಿ ಪಡುಕೋಣೆ, ಖಜಾಂಚಿಯಾಗಿ ಲಲಿತಾ ಅವರನ್ನು ಒಳಗೊಂಡ ೨೭ ಸದಸ್ಯರ ಜಿಲ್ಲಾ ಸಮಿತಿಯನ್ನು ಆಯ್ಕೆ ಮಾಡಲಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X