Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಲ್ಲಕುರುಚಿ ವಿದ್ಯಾರ್ಥಿನಿ ಸಾವು: ಮರು...

ಕಲ್ಲಕುರುಚಿ ವಿದ್ಯಾರ್ಥಿನಿ ಸಾವು: ಮರು ಮರಣೋತ್ತರ ಪರೀಕ್ಷೆಯನ್ನು ತಡೆಯಲು ಸುಪ್ರೀಂ ಕೋರ್ಟ್ ನಕಾರ

ವಾರ್ತಾಭಾರತಿವಾರ್ತಾಭಾರತಿ19 July 2022 8:09 PM IST
share
ಕಲ್ಲಕುರುಚಿ ವಿದ್ಯಾರ್ಥಿನಿ ಸಾವು: ಮರು ಮರಣೋತ್ತರ ಪರೀಕ್ಷೆಯನ್ನು ತಡೆಯಲು ಸುಪ್ರೀಂ ಕೋರ್ಟ್ ನಕಾರ

ಕಲ್ಲಕುರುಚಿ (ತ.ನಾ.),ಜು.19: ಮದ್ರಾಸ್ ಉಚ್ಚ ನ್ಯಾಯಾಲಯವು ಆದೇಶಿಸಿರುವ ತನ್ನ ಪುತ್ರಿಯ ಮರು ಮರಣೋತ್ತರ ಪರೀಕ್ಷೆಗೆ ತಡೆಯನ್ನು ನೀಡುವಂತೆ ಕೋರಿ ಕಲ್ಲಕುರಿಚಿಯಲ್ಲಿ ಸಾವಿಗೀಡಾಗಿರುವ ಶಾಲಾ ವಿದ್ಯಾರ್ಥಿನಿಯ ತಂದೆ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯವು ತಿರಸ್ಕರಿಸಿದೆ. ಕಲ್ಲಕುರುಚಿ ಸಮೀಪದ ಚಿನ್ನೇಲಮ್ನ ಕಾಣಿಯಮೂರ ಶಕ್ತಿ ಮೆಟ್ರಿಕ್ಯುಲೇಷನ್ ಶಾಲೆಯಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ಕುಡ್ಡಲೂರು ಜಿಲ್ಲೆಯ ಪೆರಿಯನಸಲೂರ ಗ್ರಾಮದ 17ರ ಹರೆಯದ ವಿದ್ಯಾರ್ಥಿನಿ ಜು.13ರಂದು ಹಾಸ್ಟೆಲ್ ನ ಆವರಣದಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. 

ಹಾಸ್ಟೆಲ್ ನ ಮೂರನೇ ಅಂತಸ್ತಿನಲ್ಲಿಯ ಕೋಣೆಯಲ್ಲಿ ವಾಸವಿದ್ದ ವಿದ್ಯಾರ್ಥಿನಿ ತುತ್ತತುದಿಯ ಅಂತಸ್ತಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಇದನ್ನು ನಿರಾಕರಿಸಿರುವ ಪೋಷಕರು ಸಾವಿಗೆ ಮುಂಚೆ ಆಕೆಯ ಮೇಲೆ ಲೈಂಗಿಕ ಹಲ್ಲೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಜು.14ರಂದು ನಡೆಸಲಾದ ಮೊದಲ ಮರಣೋತ್ತರ ಪರೀಕ್ಷೆಯ ವರದಿಯು ತೀವ್ರ ಗಾಯಗಳಿಂದಾಗಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎಂದು ತಿಳಿಸಿತ್ತು. ಹೊಸದಾಗಿ ಮರಣೋತ್ತರ ಪರೀಕ್ಷೆಯನ್ನು ಕೋರಿ ವಿದ್ಯಾರ್ಥಿನಿಯ ತಂದೆ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಅಂಗೀಕರಿಸಿದ ಮದ್ರಾಸ್ ಉಚ್ಚ ನ್ಯಾಯಾಲಯವು ಮರು ಮರಣೋತ್ತರ ಪರೀಕ್ಷೆಗೆ ಆದೇಶಿಸಿತ್ತು. ನ್ಯಾ.ಎನ್.ಸತೀಶ್ ಕುಮಾರ್ ಅವರು ಯಾವುದೇ ತೊಂದರೆಯನ್ನುಂಟು ಮಾಡದೆ ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಉಪಸ್ಥಿತರಿರಲು ವಿದ್ಯಾರ್ಥಿನಿಯ ತಂದೆ ಮತ್ತು ಅವರ ಪರ ವಕೀಲರಿಗೆ ಅನುಮತಿಯನ್ನೂ ನೀಡಿದ್ದರು.

ಮಂಗಳವಾರ ಮರು ಮರಣೋತ್ತರ ಪರೀಕ್ಷೆ ನಿಗದಿಯಾಗಿತ್ತು,ಆದರೆ ಅದನ್ನು ತಡೆಯುವಂತೆ ಕೋರಿ ವಿದ್ಯಾರ್ಥಿನಿಯ ತಂದೆ ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು. ವಿದ್ಯಾರ್ಥಿನಿಯ ತಂದೆ ಮರಣೋತ್ತರ ಪರೀಕ್ಷೆಯ ತಂಡದಲ್ಲಿ ತನ್ನ ಆಯ್ಕೆಯ ವೈದ್ಯರ ಸೇರ್ಪಡೆಯನ್ನು ಕೋರಿದ್ದರು. ಆದರೆ ಅದನ್ನು ನಿರಾಕರಿಸಿದ್ದ ಉಚ್ಚ ನ್ಯಾಯಾಲಯವು ಖ್ಯಾತ ವೈದ್ಯ ಶಾಂತಕುಮಾರ್ ಅವರನ್ನು ಪರೀಕ್ಷಾ ತಂಡದಲ್ಲಿ ಸೇರಿಸಲಾಗಿದೆ ಎಂದು ತಿಳಿಸಿತ್ತು.
 ‌
ಮಂಗಳವಾರ ಬೆಳಿಗ್ಗೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಮುಂದೆ ವಿಷಯವನ್ನು ಪ್ರಸ್ತಾಪಿಸಿದ ವಕೀಲರು, ತುರ್ತು ವಿಚಾರಣೆಗೆ ಕೋರಿದ್ದರು. ಬುಧವಾರ ವಿಚಾರಣೆ ನಡೆಸಲು ನ್ಯಾ.ರಮಣ ಒಪ್ಪಿಕೊಂಡರಾದರೂ ಇಂದೇ ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ವಕೀಲರು ತಿಳಿಸಿದರು. ಕ್ಷಮಿಸಿ,ಈ ವಿಷಯ ಈಗಾಗಲೇ ಉಚ್ಚ ನ್ಯಾಯಾಲಯದಲ್ಲಿದೆ ಎಂದು ನ್ಯಾ.ರಮಣ ಹೇಳಿದರು.

ಮರಣೋತ್ತರ ಪರೀಕ್ಷೆಯನ್ನು ನಡೆಸುವ ವೈದ್ಯರ ತಂಡವನ್ನು ಉಚ್ಚ ನ್ಯಾಯಾಲಯವು ರಚಿಸಿದೆ ಎಂದು ತಮಿಳುನಾಡು ಸರಕಾರದ ಪರ ವಕೀಲರು ತಿಳಿಸಿದರು. ನಿಮಗೆ ಉಚ್ಚ ನ್ಯಾಯಾಲಯದ ಮೇಲೆ ನಂಬಿಕೆ ಇಲ್ಲವೇ ಎಂದು ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿದ ನ್ಯಾ.ರಮಣ,ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X