Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೋವಿಡ್‌ನಿಂದ ವಯಸ್ಕರಲ್ಲಿ ಹೆಚ್ಚಿನ...

ಕೋವಿಡ್‌ನಿಂದ ವಯಸ್ಕರಲ್ಲಿ ಹೆಚ್ಚಿನ ಮಾನಸಿಕ ಆರೋಗ್ಯದ ಸಮಸ್ಯೆ: ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ19 July 2022 10:38 PM IST
share
ಕೋವಿಡ್‌ನಿಂದ ವಯಸ್ಕರಲ್ಲಿ ಹೆಚ್ಚಿನ ಮಾನಸಿಕ ಆರೋಗ್ಯದ ಸಮಸ್ಯೆ: ಅಧ್ಯಯನ ವರದಿ

ಲಂಡನ್, ಜು.19: ಕೋವಿಡ್-19 ಸೋಂಕಿಗೆ ಒಳಗಾದ ಹಿರಿಯ ವಯಸ್ಕರು ಖಿನ್ನತೆ ಮತ್ತು ಆತಂಕದಂತಹ ಮಾನಸಿಕ ಆರೋಗ್ಯ ಸಮಸ್ಯೆಗಳು ಮತ್ತು ಆರ್ಥಿಕ ತೊಂದರೆಯಿಂದ ಬಳಲುವ ಸಾಧ್ಯತೆ ಇತರರಿಗೆ ಹೋಲಿಸಿದರೆ 2 ಪಟ್ಟು ಹೆಚ್ಚು ಎಂದು ಅಧ್ಯಯನ ವರದಿಯೊಂದರಲ್ಲಿ ಉಲ್ಲೇಖಿಸಲಾಗಿದೆ.

52ರಿಂದ 74 ವರ್ಷ ವಯೋಮಾನದ 5,146 ವಯಸ್ಕರಲ್ಲಿ ಕೋವಿಡ್-19 ಸೋಂಕಿನಿಂದ ಆಗಿರುವ ತಕ್ಷಣದ ಮತ್ತು ದೀರ್ಘಾವಧಿಯ ಮಾನಸಿಕ ಆರೋಗ್ಯದ ಸಮಸ್ಯೆ, ಅವರ ಆರ್ಥಿಕ ಸ್ಥಿತಿಗತಿ, ಸಾಮಾಜಿಕ ಸಂವಹನಗಳ ಮೇಲೆ ಆಗಿರುವ ಪರಿಣಾಮಗಳ ಅಂಕಿಅಂಶವನ್ನು ಆಧರಿಸಿ ಪಿಎನ್ಎಎಸ್ ಪತ್ರಿಕೆಯಲ್ಲಿ ಇತ್ತೀಚೆಗೆ ಸಂಶೋಧನಾ ವರದಿ ಪ್ರಕಟವಾಗಿದೆ.

‌

ಸಾಂಕ್ರಾಮಿಕದ ಮೊದಲ ಅವಧಿಯ (2018-19) ಅಂಕಿಅಂಶ ಮತ್ತು 2020ರಲ್ಲಿ ಕೋವಿಡ್ ಅವಧಿಯ 2 ಮೌಲ್ಯಮಾಪನವನ್ನು ಪರಿಗಣಿಸಲಾಗಿದೆ. 2020ರ ಜೂನ್ ಮತ್ತು ಜುಲೈ ನಡುವಿನ ಅವಧಿಯಲ್ಲಿ ಸಂಭವನೀಯ ಕೋವಿಡ್-19 ಸೋಂಕಿತ 49%ದಷ್ಟು ಹಿರಿಯ ವಯಸ್ಕರು ಗಮನಾರ್ಹವಾದ ಖಿನ್ನತೆಯ ಲಕ್ಷಣಗಳನ್ನು ಹೊಂದಿದ್ದು, ಸೋಂಕಿಲ್ಲದವರಲ್ಲಿ ಈ ಪ್ರಮಾಣ 22% ಆಗಿರುತ್ತದೆ ಎಂದು ಲಂಡನ್ ಯುನಿವರ್ಸಿಟಿ ಕಾಲೇಜಿನ ಸಂಶೋಧಕರ ತಂಡ ನಡೆಸಿದ ಸಮೀಕ್ಷೆಯ ಫಲಿತಾಂಶದಲ್ಲಿ ವ್ಯಕ್ತವಾಗಿದೆ.

  

ಕೋವಿಡ್-19 ಸೋಂಕಿನ ಪರಿಣಾಮದಿಂದ ವ್ಯಕ್ತಿಗಳ ಮಾನಸಿಕ ಆರೋಗ್ಯ, ವೈಯಕ್ತಿಕ ಆರ್ಥಿಕ ಸ್ಥಿತಿಗತಿ ಹಾಗೂ ಸಾಮಾಜಿಕ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ ಎಂಬುದಕ್ಕೆ ಪ್ರಸ್ತುತ ಕಡಿಮೆ ಪುರಾವೆಗಳಿವೆ.

ಆದರೆ ನಮ್ಮ ಅಧ್ಯಯನದ ಪ್ರಕಾರ, ಕೋವಿಡ್ ಸೋಂಕಿನಿಂದ ಹಿರಿಯ ವಯಸ್ಕರಲ್ಲಿ ಹೆಚ್ಚಿನ ಖಿನ್ನತೆ, ಆತಂಕ, ಕಳಪೆ ಜೀವನ ಗುಣಮಟ್ಟ, ಒಂಟಿತನದ ಭಾವನೆ ಮತ್ತು ಆರ್ಥಿಕ ತೊಂದರೆಗಳು ಕೋವಿಡ್ ಸೋಂಕಿಗೆ ಒಳಗಾಗದವರಿಗೆ ಹೋಲಿಸಿದರೆ ಹೆಚ್ಚಿನ ಪ್ರಮಾಣದಲ್ಲಿರುತ್ತವೆ ಎಂದು ಅಧ್ಯಯನ ತಂಡದ ಮುಖ್ಯಸ್ಥ ಎಲ್ಲೀ ಲಾಬ್ ಹೇಳಿದ್ದಾರೆ. ಸೋಂಕು ತೀವ್ರವಾಗಿದ್ದ ಸಂದರ್ಭ ಹಾಗೂ ಬಳಿಕದ 6 ತಿಂಗಳಿನಲ್ಲಿ ಈ ಸಮಸ್ಯೆಗಳು ಕಂಡುಬಂದಿವೆ. ಕೋವಿಡ್ -19 ಸೋಂಕಿಗೆ ಒಳಗಾದವರಲ್ಲಿ 12%ದಷ್ಟು ಮಂದಿಯಲ್ಲಿ ಆತಂಕದ ಸಮಸ್ಯೆ ಹೆಚ್ಚಿದ್ದರೆ, ಸೋಂಕಿಗೆ ಒಳಗಾಗದವರಲ್ಲಿ ಈ ಸಮಸ್ಯೆ ಕೇವಲ 6%ದಷ್ಟು ಮಂದಿಯಲ್ಲಿ ಕಂಡುಬಂದಿದೆ.

ಈ ಪ್ರತಿಕೂಲ ಪರಿಣಾಮಗಳು ಕೋವಿಡ್ ಸೋಂಕಿನ ಆರಂಭದ 6 ತಿಂಗಳಿನವರೆಗೆ ಇರುತ್ತವೆ . 2020ರ ನವೆಂಬರ್ ಮತ್ತು ಡಿಸೆಂಬರ್ ಅವಧಿಯಲ್ಲಿ ನಡೆಸಿದ ಅನುಸರಣಾ ಪರಿಶೀಲನೆಯ ಪ್ರಕಾರ, ಸಂಭವನೀಯ ಸೋಂಕಿತ ಹಿರಿಯ ವಯಸ್ಕರಲ್ಲಿ ಖಿನ್ನತೆ ಮತ್ತು ಆತಂಕದ ಪ್ರಮಾಣ ಅನುಕ್ರಮವಾಗಿ 72% ಮತ್ತು 13% ಆಗಿದ್ದರೆ, ಸೋಂಕು ರಹಿತರಲ್ಲಿ ಈ ಪ್ರಮಾಣ ಕ್ರಮವಾಗಿ 33% ಮತ್ತು 7% ಆಗಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X