Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೆರಿಗೆ ಸಂಬಂಧಿತ ಮೃತ್ಯು: ವಿಶ್ವಸಂಸ್ಥೆಯ...

ಹೆರಿಗೆ ಸಂಬಂಧಿತ ಮೃತ್ಯು: ವಿಶ್ವಸಂಸ್ಥೆಯ ಗುರಿ ತಲುಪಲು 70% ಜಿಲ್ಲೆಗಳು ವಿಫಲ

ವಾರ್ತಾಭಾರತಿವಾರ್ತಾಭಾರತಿ20 July 2022 8:26 AM IST
share
ಹೆರಿಗೆ ಸಂಬಂಧಿತ ಮೃತ್ಯು: ವಿಶ್ವಸಂಸ್ಥೆಯ ಗುರಿ ತಲುಪಲು 70% ಜಿಲ್ಲೆಗಳು ವಿಫಲ

ಮುಂಬೈ: ದೇಶದ 640 ಜಿಲ್ಲೆಗಳ ಪೈಕಿ ಶೇಕಡ 70ರಷ್ಟು ಜಿಲ್ಲೆಗಳು ಹೆರಿಗೆ ಸಂಬಂಧಿತ ಸಾವಿನ "ಹಾಟ್ ಸ್ಪಾಟ್"ಗಳು ಎನಿಸಿದ್ದು, ಈ ಜಿಲ್ಲೆಗಳಲ್ಲಿ ವಿಶ್ವಸಂಸ್ಥೆಯ ಅಭಿವೃದ್ಧಿ ಗುರಿಯಲ್ಲಿ ನಿಗದಿಪಡಿಸಲಾದ ಪ್ರಮಾಣಕ್ಕಿಂತ ಅಧಿಕ ಹೆರಿಗೆ ಸಾವು ದಾಖಲಾಗುತ್ತಿದೆ ಎಂದು ಸಮಾಜ ವಿಜ್ಞಾನಿಗಳು ಬಹಿರಂಗಪಡಿಸಿದ್ದಾರೆ. ಇದೇ ಮೊದಲ ಬಾರಿಗೆ ಭಾರತದ ಹೆರಿಗೆ ಸಾವಿನ ಜಿಲ್ಲಾವಾರು ವಿಶ್ಲೇಷಣೆಯನ್ನು ನಿಖರವಾಗಿ ನಡೆಸಲಾಗಿದೆ ಎಂದು timesofindia.com ವರದಿ ಮಾಡಿದೆ.

ದಿಯೋನಾರ್‍ನ ಅಂತರರಾಷ್ಟ್ರೀಯ ಜನಸಂಖ್ಯಾ ವಿಜ್ಞಾನ ಸಂಸ್ಥೆಯ ಸಂಶೋಧಕರು 2017-2020ರ ಅವಧಿಯ 61.98 ದಶಲಕ್ಷ ಹೆರಿಗೆ ಹಾಗೂ 61,169 ಹೆರಿಗೆ ಸಾವಿನ ಅಂಕಿ ಅಂಶಗಳನ್ನು ವಿಶ್ಲೇಷಿಸಿದ್ದಾರೆ ಎಂದು ಪಿಎಲ್‍ಓಎಸ್ ಗ್ಲೋಬಲ್ ಪಬ್ಲಿಕ್ ಹೆಲ್ತ್ ಬಿಡುಗಡೆ ಮಾಡಿರುವ ವರದಿಯಲ್ಲಿ ಹೇಳಲಾಗಿದೆ. (2011ರ ಜನಗಣತಿಯ ಮಾಹಿತಿಯನ್ನು ವಿಶ್ಲೇಷಿಸಲಾಗಿದ್ದು, 2022ರಲ್ಲಿ ಅಸ್ತಿತ್ವದಲ್ಲಿರುವ 773 ಜಿಲ್ಲೆಗಳ ಬದಲು ಕೇವಲ 640 ಜಿಲ್ಲೆಗಳೆಂದು ಪರಿಗಣಿಸಲಾಗಿದೆ)

ಹೆರಿಗೆ ಸಾವಿನ ದರ ಎಂದರೆ ಪ್ರತಿ ಒಂದು ಲಕ್ಷ ಹೆರಿಗೆಯ ವೇಳೆ ಸಂಭವಿಸುವ ಹೆರಿಗೆ ಅಥವಾ ಗರ್ಭಧಾರಣೆ ಸಂಬಂಧಿ ಸಂಕೀರ್ಣತೆಗಳಿಂದಾದ ಸಾವಿನ ಸಂಖ್ಯೆಯಾಗಿದೆ. ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿ ಅನ್ವಯ 2030ರ ವೇಳೆಗೆ ಇದು 70 ಆಗಿರಬೇಕು.

ಐಐಪಿಎಸ್ ಅಧ್ಯಯನದ ಪ್ರಕಾರ ಅರುಣಾಚಲ ಪ್ರದೇಶದಲ್ಲಿ ಹೆರಿಗೆ ಸಾವಿನ ದರ ಅತ್ಯಧಿಕ (284) ಇದ್ದು, ಮಹಾರಾಷ್ಟ್ರದಲ್ಲಿ ಕನಿಷ್ಠ (40). ಐದು ರಾಜ್ಯಗಳಲ್ಲಿ 210ಕ್ಕಿಂತ ಹೆಚ್ಚು ಎಂಎಂಆರ್ ದಾಖಲಾಗಿದೆ. ಅರುಣಾಚಲ ಪ್ರದೇಶದ ಟಿರಪ್ ಗರಿಷ್ಠ ಎಂಎಂಆರ್ ಹೊಂದಿದ್ದರೆ, ಹಿಮಾಚಲ ಪ್ರದೇಶದ ಕಿನ್ನೌರ್ ಕನಿಷ್ಠ ಎಂಎಂಆರ್ ಹೊಂದಿದೆ.

ವರದಿಯ ಪ್ರಕಾರ ಒಟ್ಟು 24 ರಾಜ್ಯಗಳ 450 ಜಿಲ್ಲೆಗಳಲ್ಲಿ ವಿಶ್ವಸಂಸ್ಥೆ ನಿಗದಿಪಡಿಸಿದ ಗುರಿಯಾದ 70 ಸಾವಿನ ಸಂಖ್ಯೆಗಿಂತ ಅಧಿಕ ಹೆರಿಗೆ ಸಾವು ಸಂಭವಿಸುತ್ತಿದೆ. ಎಂಟು ರಾಜ್ಯ ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಂಎಂಆರ್ ದರ 140-209 ಇದ್ದು, 11 ರಾಜ್ಯಗಳಲ್ಲಿ 70-139ರ ನಡುವೆ ಇದೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X