Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಂಕನಾಡಿ | ಇಬ್ಬರ ವಿರುದ್ಧ ಗೂಂಡಾ...

ಕಂಕನಾಡಿ | ಇಬ್ಬರ ವಿರುದ್ಧ ಗೂಂಡಾ ಕಾಯ್ದೆ ದಾಖಲು

ಆರೋಪಿಗಳಿಬ್ಬರ ಬಳ್ಳಾರಿ ಜೈಲಿಗೆ ವರ್ಗಾವಣೆಗೆ ಕ್ರಮ: ಪೊಲೀಸ್ ಆಯುಕ್ತ

ವಾರ್ತಾಭಾರತಿವಾರ್ತಾಭಾರತಿ20 July 2022 11:03 AM IST
share
ಕಂಕನಾಡಿ | ಇಬ್ಬರ ವಿರುದ್ಧ ಗೂಂಡಾ ಕಾಯ್ದೆ ದಾಖಲು

ಮಂಗಳೂರು, ಜು.20: ಕೆಲ ಸಮಯದ ಹಿಂದೆ ವೆಲೆನ್ಸಿಯಾ ಜಂಕ್ಷನ್ ಬಳಿ ಸಾರ್ವಜನಿಕವಾಗಿ ಭಯದ ವಾತಾವರಣ ಸೃಷ್ಟಿಸಿದ್ದಲ್ಲದೆ, ಕೋಳಿ ಅಂಗಡಿ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದ ಆರೋಪಿಗಳಿಬ್ಬರ ಮೇಲೆ ಮಂಗಳೂರು ಪೊಲೀಸ್ ಆಯುಕ್ತರು ಗೂಂಡಾ ಕಾಯ್ದೆ ಹೇರಿದ್ದಾರೆ.

ಆರೋಪಿಗಳಾದ ಜಲ್ಲಿಗುಡ್ಡೆ ಬಜಾಲ್ ನಿವಾಸಿ ಪ್ರೀತಂ ಪೂಜಾರಿ ಯಾನೆ ಪ್ರೀತೇಶ್ (26) ಹಾಗೂ ಎಕ್ಕೂರು ನಿವಾಸಿ ಧೀರಜ್ ಕುಮಾರ್ ಯಾನೆ ಧೀರು (27) ಎಂಬಾತನ ವಿರುದ್ಧ ಗೂಂಡಾ ಕಾಯ್ದೆ ದಾಖಲಾಗಿದೆ.

ಆರೋಪಿಗಳಿಬ್ಬರು ಸಮಾಜಘಾತುಕ ಶಕ್ತಿಗಳಾಗಿ ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ ಇವರಿಬ್ಬರ ಮೇಲೆ ಗೂಂಡಾ ಕಾಯ್ದೆ ಹೇರಬೇಕೆಂದು ಕಂಕನಾಡಿ ಠಾಣಾಧಿಕಾರಿ ಶಿಫಾರಸು ಮಾಡಿರುವುದನ್ನು ಪರಿಗಣಿಸಿ ತಮ್ಮ ಅಧಿಕಾರವನ್ನು ಚಲಾಯಿಸಿ ಅವರ ಮೇಲೆ ಗೂಂಡಾ ಕಾಯ್ದೆ ಹೇರಿರುವುದಾಗಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಕೆಲ ತಿಂಗಳ ಹಿಂದೆ ಸಾರ್ವಜನಿಕವಾಗಿ ಕೊಲೆ ಬೆದರಿಕೆ ಪ್ರಕರಣದಲ್ಲಿ ಜೈಲಿನಲ್ಲಿರುವ ಈ ಇಬ್ಬರು ಆರೋಪಿಗಳು ಜಾಮೀನು ಪಡೆಯುವ ಪ್ರಯತ್ನದಲ್ಲಿದ್ದಾಲೇ ಗೂಂಡಾ ಕಾಯ್ದೆ ಹೇರಲಾಗಿದ್ದು, ಆರೋಪಿಗಳನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಪ್ರೀತೇಶ್  ಮತ್ತು ಧೀರಜ್ ಕುಮಾರ್ ಎಂಬವರ ವಿರುದ್ಧ ಈಗಾಗಲೇ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ದಾಖಲಾಗಿದ್ದು, ಕಳೆದ ಹಲವು ವರ್ಷಗಳಿಂದ ಮದ್ಯಪಾನ ವ್ಯಸನ ಹೊಂದಿರುವುದರಲ್ಲದೆ, ಗಂಭೀರ ಅಪರಾಧ ಪ್ರಕರಣಗಳ ಮೂಲಕ ಸಾರ್ವಜನಿಕರಿಗೆ ಅಪಾಯ ಮತ್ತು ಬೆದರಿಕೆ ಭಾವನೆ ಉಂಟು ಮಾಡುವ ರೀತಿಯಲ್ಲಿ ವರ್ತಿಸಿರುವುದು ಕಂಡು ಬಂದಿದೆ. ಧೀರಜ್ 2015ರಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಗುರುತಿಸಿಕೊಂಡಿದ್ದು, ಆಟೋ ರಿಕ್ಷಾ ಚಾಲನೆ ಮಾಡುವುದಾಗಿ ಹೇಳಿಕೊಡಿದ್ದರೂ ಯಾವುದೇ ನಿಖರ ಉದ್ಯೋಗ ಹೊಂದಿಲ್ಲ. ಈತನ ಮೇಲೆ ದರೋಡೆಗೆ ತಯಾರಿ, ಕೊಲೆಗೆ ಯತ್ನ, ಅಪಹರಣ ಮತ್ತು ಕೊಲೆಗೆ ಯತ್ನ, ಕೊಲೆಗೆ ಯತ್ನ ಮತ್ತು ಗಂಭೀರ ಗಾಯ, ಅಪರಾಧ ಒಳಸಂಚು, ಹಲ್ಲೆ, ದರೋಡೆ ಮತ್ತು ಹಲ್ಲೆ ಸೇರಿ ಒಟ್ಟು 12 ಪ್ರಕರಣಗಳು ದಾಖಲಾಗಿವೆ. ಈತ ಹಾಗೂ ಈತನ ಸಹಚರರು ಸುಮಾರು 66 ಮಂದಿಯ ಗ್ಯಾಂಗ್ ರಚಿಸಿಕೊಂಡು ಸುಮಾರು 34ಕ್ಕೂ ಅಧಿಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಪ್ರೀತಂ ವಿರುದ್ಧವೂ ಜೀವ ಬೆದರಿಕೆ ಮತ್ತು ಗಾಂಜಾ ಸೇವೆ, ಕೊಲೆಗೆ ಯತ್ನ ಮತ್ತು ಬೆದರಿಕೆ, ಅಪಹರಣ ಮತ್ತು ಬೆದರಿಕೆ, ಬೆದರಿಕೆ ಮತ್ತು ಹಲ್ಲೆ, ಹಲ್ಲೆ ಮತ್ತು ಗಾಂಜಾ ಸೇವನೆ ಹಾಗೂ ಅಕ್ರಮ ಕೂಟ ಸೇರಿ ದರೋಡೆ, ಕೊಲೆ ಯತ್ನ ಮತ್ತು ಗಾಂಜಾ ಸೇವನೆ, ಕೊಲೆ ಯತ್ನ ಮತ್ತು ಗಾಂಜಾ ಸೇವನೆ ಸೇರಿ ಒಟು 12 ಪ್ರಕರಣಗಳು ದಾಖಲಾಗಿದ್ದು, ಕಂಕನಾಡಿ ಠಾಣೆಯಲ್ಲಿ ರೌಡಿಶೀಟರ್ ಹೊಂದಿದ್ದಾನೆ. ಇವರಿಬ್ಬರಿಗೆ ಜಾಮೀನು ದೊರಕಿದ್ದಲ್ಲಿ ಮತ್ತೆ ಸಾರ್ವಜನಿಕವಾಗಿ ಅಶಾಂತಿ ಸೃಷ್ಟಿಸುವ ಕೃತ್ಯದಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಇರುವುದರಿಂದ ಇವರಿಬ್ಬರ ಮೇಲೆ ಗೂಂಡಾ ಕಾಯ್ದೆ ಹೇರುವಂತೆ ಕಂಕನಾಡಿ ಠಾಣಾಧಿಕಾರಿ ಶಿಫಾರಸು ಮಾಡಿದ್ದರು.


‘‘ಸಮಾಜಘಾತುಕ ಶಕ್ತಿಗಳನ್ನು ನಿಯಂತ್ರಿಸುವ ಹಾಗೂ ಸಮಾಜದಲ್ಲಿ ಶಾಂತಿಯನ್ನು ಕಾಪಾಡುವ ದೃಷ್ಟಿಯಿಂದ ರೌಡಿಶೀಟರ್‌ಗಳಾದ ಪ್ರೀತೇಶ್  ಮತ್ತು ಧೀರಜ್ ಕುಮಾರ್ ಮೇಲೆ ಮೇಲೆ ಗೂಂಡಾ ಕಾಯ್ದೆಯನ್ನು ಹೇರಲಾಗಿದೆ. ಇವರಿಬ್ಬರ ಮೇಲೆ ತಲಾ 12 ಗಂಭೀರ ಪ್ರಕರಣಗಳು ದಾಖಲಾಗಿರುವುದಲ್ಲದೆ, ಇತ್ತೀಚೆಗೆ ವೆಲೆನ್ಸಿಯಾ ಬಳಿ ಕೋಳಿ ಅಂಗಡಿ ಬಳಿ ಚಾಕು ತೋರಿಸಿ ಅಂಗಡಿ ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದರು. ಇವರಿಬ್ಬರಿಗೂ ಜಾಮೀನು ದೊರೆಯುವ ಹಂತದಲ್ಲಿದ್ದು, ಆದರೆ ಇವರ ಪೂರ್ವಾಪರ ಅವಲೋಕಿಸಿದಾಗ ಇವರು ಜೈಲಿನಿಂದ ಹೊರಬಂದು ಮತ್ತೆ ಸಮಾಜ ಘಾತುಕ ಕೃತ್ಯಗಳಲ್ಲಿ ತೊಡಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಈ ಕಾಯ್ದೆಯನ್ನು ಹೇರಲಾಗಿದೆ. ಇದೀಗ ಅವರಿಬ್ಬರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ. ಇವರಿಬ್ಬರ ಜತೆ 60ಕ್ಕೂ ಅಧಿಕ ಮಂದಿಯ ಜತೆಯಾಗಿ ಅಪರಾಧ ಕೃತ್ಯಗಳನ್ನು ನಡೆಸಿರುವುದು ಕಂಡು ಬಂದಿದ್ದು, ಅವರನ್ನೆಲ್ಲಾ ಗುರುತಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಪ್ರಕರಣಗಳಲ್ಲಿ ಜೈಲು ಸೇರಿದರೂ ಜಾಮೀನು ಪಡೆದು ಮತ್ತೆ ತಮ್ಮ ಪ್ರಭಾವ ಬಳಸಿ ಅಪರಾಧ ಕೃತ್ಯಗಳನ್ನು ಈ ಇಬ್ಬರು ಆರೋಪಿಗಳು ಮಾಡಿರುತ್ತಾರೆ’’.

-ಎನ್.ಶಶಿಕುಮಾರ್, ಪೊಲೀಸ್ ಆಯುಕ್ತರು, ಮಂಗಳೂರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X