ಕುಂದಾಪುರ | ಚಾಕಲೇಟ್ ಗಂಟಲಲ್ಲಿ ಸಿಲುಕಿ ಏಳು ವರ್ಷದ ಬಾಲಕಿ ಮೃತ್ಯು

ಕುಂದಾಪುರ, ಜು.20: ಕವರ್ ಇದ್ದ ಚಾಕಲೇಟ್ ನುಂಗಿ ಎರಡನೇ ತರಗತಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಬೈಂದೂರು ತಾಲೂಕು ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬವಳಾಡಿಯಲ್ಲಿ ಬುಧವಾರ ನಡೆದಿದೆ.
ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬವಳಾಡಿ ಗ್ರಾಮದ ನಿವಾಸಿ ಸಮನ್ವಿ(7) ಮೃತ ಬಾಲಕಿ ಎಂದು ತಿಳಿದುಬಂದಿದೆ.
ಸಮನ್ವಿ ಖಾಸಗಿ ಆಂಗ್ಲ ಮಾಧ್ಯಮದಲ್ಲಿ 2ನೇ ತರಗತಿ ಓದುತ್ತಿದ್ದು, ಮುಂಜಾನೆ ಶಾಲೆಗೆ ಹೊರಡುತ್ತಿರುವ ವೇಳೆ ಹಠ ಹಿಡಿದಿದ್ದರಿಂದ ಸಮಧಾನಪಡಿಸಲು ಅಮ್ಮ ಚಾಕಲೇಟ್ ನೀಡಿದ್ದಾರೆ. ಈ ವೇಳೆ ಶಾಲಾ ವಾಹನ ಬಂದಿದ್ದು, ವಿದ್ಯಾರ್ಥಿನಿ ಅವಸರದಲ್ಲಿ ಕವರ್ ಸಹಿತ ಚಾಕಲೇಟ್ ಅನ್ನು ನುಂಗಿದ್ದಾಳೆ. ಚಾಕಲೇಟ್ ಗಂಟಲಲ್ಲಿ ಸಿಲುಕಿಕೊಂಡಿದ್ದರಿಂದ ಬಾಲಕಿ ಅಸ್ವಸ್ಥಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಕೂಡ ಅಷ್ಟರಲ್ಲೇ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.
Next Story





