Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೆಲೆ ಏರಿಕೆ,ಜಿಎಸ್‌ಟಿ ವಿರುದ್ಧ...

ಬೆಲೆ ಏರಿಕೆ,ಜಿಎಸ್‌ಟಿ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ: ಸಂಸತ್ ಅಧಿವೇಶನ ಮೂರನೇ ದಿನವೂ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ20 July 2022 8:58 PM IST
share
ಬೆಲೆ ಏರಿಕೆ,ಜಿಎಸ್‌ಟಿ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ: ಸಂಸತ್ ಅಧಿವೇಶನ ಮೂರನೇ ದಿನವೂ ಮುಂದೂಡಿಕೆ

ಹೊಸದಿಲ್ಲಿ,ಜು.20: ಬೆಲೆ ಏರಿಕೆ,ಜಿಎಸ್‌ಟಿ ಮತ್ತು ಇನ್ನಿತರ ಜ್ವಲಂತ ವಿಷಯಗಳ ಕುರಿತು ಚರ್ಚೆಗಾಗಿ ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲಗಳಿಂದಾಗಿ ಲೋಕಸಭೆ ಮತ್ತು ರಾಜ್ಯಸಭೆ ಸತತ ಮೂರನೇ ದಿನವಾದ ಬುಧವಾರವೂ ದಿನದ ಮಟ್ಟಿಗೆ ಮುಂದೂಡಲ್ಪಟ್ಟವು.

ಸದನದೊಳಗೆ ಪ್ರತಿಭಟನೆಯಲ್ಲಿ ತೊಡಗಿದ್ದ ಪ್ರತಿಪಕ್ಷ ಸದಸ್ಯರ ವಿರುದ್ಧ ಬುಧವಾರ ಕೊಂಚ ಹೆಚ್ಚಿನ ಕಠಿಣ ನಿಲುವು ತಳೆದಿದ್ದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು,ಸದನವು ಇರುವುದು ಚರ್ಚೆಗಾಗಿ ಮತ್ತು ವಿಷಯಗಳನ್ನೆತ್ತಲು,ಘೋಷಣೆಗಳನ್ನು ಕೂಗಲು ಮತ್ತು ಕೋಲಾಹಲವನ್ನು ಸೃಷ್ಟಿಸಲು ಅಲ್ಲ ಎಂದು ಹೇಳಿದರು.

 ಈ ಮೊದಲು ಜಿಎಸ್‌ಟಿಯಿಂದ ಹೊರಗಿದ್ದ ಅಗತ್ಯ ವಸ್ತುಗಳನ್ನು ಅದರ ವ್ಯಾಪ್ತಿಗೆ ಸೇರಿಸಿದ್ದನ್ನು ಪ್ರಶ್ನಿಸಿದ ಪ್ರತಿಪಕ್ಷ ಸದಸ್ಯರು ಮೊಸರು,ಬೆಣ್ಣೆ ಮತ್ತು ಮಜ್ಜಿಗೆ ಪ್ಯಾಕೆಟ್‌ಗಳನ್ನು ಹಿಡಿದುಕೊಂಡು ಸದನದ ಅಂಗಳಕ್ಕೆ ಮುತ್ತಿಗೆ ಹಾಕಿದ್ದು ಸ್ಪೀಕರ್‌ಗೆ ತೀವ್ರ ಅಸಮಾಧಾನವನ್ನುಂಟು ಮಾಡಿತ್ತು. ನಿರ್ದಿಷ್ಟವಾಗಿ ಬೆಲೆ ಏರಿಕೆ ಕುರಿತು ಚರ್ಚೆಗಾಗಿ ಸದನದ ಇತರ ಎಲ್ಲ ಕಲಾಪಗಳನ್ನು ಅಮಾನತುಗೊಳಿಸಬೇಕು ಎಂದು ಪ್ರತಿಪಕ್ಷ ಸದಸ್ಯರು ಬಯಸಿದ್ದರು. ಆದರೆ ತಾನು ಶೂನ್ಯಕಾಲದಲ್ಲಿ ವಿಷಯವನ್ನು ಪ್ರಸ್ತಾಪಿಸಲು ಅವಕಾಶ ನಿಡುವುದಾಗಿ ಸ್ಪೀಕರ್ ಪಟ್ಟು ಹಿಡಿದಿದ್ದರು.

 ಪ್ರತಿಪಕ್ಷ ಸದಸ್ಯರು ಪ್ರದರ್ಶಿಸಿದ್ದ ಭಿತ್ತಿಪತ್ರಗಳು ಬಿರ್ಲಾ ಅವರಿಗೆ ಇನ್ನಷ್ಟು ಸಿಟ್ಟು ತರಿಸಿದ್ದವು. ಸದನದಲ್ಲಿ ಭಿತ್ರಿಪತ್ರಗಳನ್ನು ತರುವುದು ನಿಯಮಗಳ ಉಲ್ಲಂಘನೆಯಾಗುತ್ತದೆ ಎಂದು ಮಂಗಳವಾರವೂ ಅವರು ಬೆಟ್ಟು ಮಾಡಿದ್ದರು. ಭಿತ್ತಿಪತ್ರಗಳನ್ನು ಪ್ರದರ್ಶಿಸಲು ಜನರು ನಿಮ್ಮನ್ನು ಇಲ್ಲಿಗೆ ಕಳುಹಿಸಿಲ್ಲ,ಹಾಗೆ ಮಾಡುತ್ತಿರುವವರು ಸಂಸತ್ತಿನ ಪ್ರತಿಷ್ಠೆಗೆ ಧಕ್ಕೆಯನ್ನುಂಟು ಮಾಡುತ್ತಿದ್ದಾರೆ ಎಂದು ಸ್ಪೀಕರ್ ಕಿಡಿಕಾರಿದರು.

‘ಅಮೃತ ಕಾಲ’ದಲ್ಲಿ ಜನರು ಅರ್ಥಪೂರ್ಣ ಚರ್ಚೆಗಳನ್ನು ನಮ್ಮಿಂದ ನಿರೀಕ್ಷಿಸುತ್ತಾರೆ ಎಂದು ಅವರು ಹೇಳಿದರು. ಭಾರೀ ಯಶಸ್ಸಿನ ಅವಧಿಯನ್ನು ಸೂಚಿಸುವ ‘ಅಮೃತ ಕಾಲ ’ ಜ್ಯೋತಿಷ್ಯಶಾಸ್ತ್ರದ ಪದವಾಗಿದ್ದು,ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಈಗಿನ ಸ್ಥಿತಿಯನ್ನು ಬಣ್ಣಿಸಲು ಆಗಾಗ್ಗೆ ಈ ಪದವನ್ನು ಬಳಸುತ್ತಿರುತ್ತಾರೆ.

ನಿಯಮಗಳಂತೆ ಚರ್ಚೆಗೆ ಅವಕಾಶ ನೀಡಲು ತಾನು ಸಿದ್ಧನಿದ್ದೇನೆ,ಆದರೆ ಗದ್ದಲ ಮುಂದುವರಿದರೆ ಅಲ್ಲ. ನೀವು ನಿಮ್ಮ ಆಸನಗಳಿಗೆ ಮರಳಿದರೆ ಮಾತ್ರ ನಿಮಗೆ ಅವಕಾಶ ದೊರೆಯುತ್ತದೆ ಎಂದು ಸ್ಪೀಕರ್ ಹೇಳಿದರು.

ಕೋಲಾಹಲ ಮುಂದುವರಿದಾಗ ಲೋಕಸಭೆಯನ್ನು ಅಪರಾಹ್ನ ಎರಡು ಗಂಟೆಯವರೆಗೆ ಮುಂದೂಡಲಾಯಿತು. ಮರುಸಮಾವೇಶಗೊಂಡಾಗಲೂ ಪ್ರತಿಭಟನೆ ಮುಂದುವರಿದಾಗ ಸದನವನ್ನು ಸಂಜೆ ನಾಲ್ಕು ಗಂಟೆಯವರೆಗೆ ಮತ್ತು ಬಳಿಕ ದಿನದ ಮಟ್ಟಿಗೆ ಮುಂದೂಡಲಾಯಿತು. ಅತ್ತ ರಾಜ್ಯಸಭೆಯೂ ಎರಡು ಬಾರಿ ಅಲ್ಪಾವಧಿಗೆ ಮುಂದೂಡಲ್ಪಟ್ಟು ಬಳಿಕ ದಿನದ ಮಟ್ಟಿಗೆ ಮುಂದೂಡಲ್ಪಟ್ಟಿತು.ಉಭಯ ಸದನಗಳು ಗುರುವಾರ ಬೆಳಿಗ್ಗೆ 11 ಗಂಟೆಗೆ ಪುನರಾರಂಭಗೊಳ್ಳಲಿವೆ.

ಇದಕ್ಕೂ ಮುನ್ನ ಬೆಳಿಗ್ಗೆ ಕಾಂಗೆಸ್ ಸದಸ್ಯರು ಸಂಸತ್ ಆವರಣದಲ್ಲಿಯ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆಯನ್ನು ನಡೆಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X