Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗ್ರಾಹಕರ ಆಹಾರ ಬಿಲ್‌ನಲ್ಲಿ ಸೇವಾ ಶುಲ್ಕ...

ಗ್ರಾಹಕರ ಆಹಾರ ಬಿಲ್‌ನಲ್ಲಿ ಸೇವಾ ಶುಲ್ಕ ಸೇರಿಸದಂತೆ ಆದೇಶ: ದಿಲ್ಲಿ ಹೈಕೋರ್ಟ್ ತಡೆ

ವಾರ್ತಾಭಾರತಿವಾರ್ತಾಭಾರತಿ20 July 2022 10:20 PM IST
share
ಗ್ರಾಹಕರ ಆಹಾರ ಬಿಲ್‌ನಲ್ಲಿ ಸೇವಾ ಶುಲ್ಕ ಸೇರಿಸದಂತೆ ಆದೇಶ: ದಿಲ್ಲಿ ಹೈಕೋರ್ಟ್ ತಡೆ

ಹೊಸದಿಲ್ಲಿ, ಜು. 20: ಗ್ರಾಹಕರ ಆಹಾರ ಬಿಲ್‌ನಲ್ಲಿ ಸೇವಾ ಶುಲ್ಕವನ್ನು   ಸೇರಿಸಬಾರದು ಎಂದು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ನೀಡಿದ್ದ ಆದೇಶಕ್ಕೆ ದಿಲ್ಲಿ ಉಚ್ಚ ನ್ಯಾಯಾಲಯ ಬುಧವಾರ ತಡೆಯಾಜ್ಞೆ ನೀಡಿದೆ. 

ರೆಸ್ಟೋರೆಂಟ್‌ಗಳ ಬಿಲ್‌ನಲ್ಲಿ ಸೇವಾ ಶುಲ್ಕ ವಿಧಿಸುವುದು ಅಸಮರ್ಪಕ ವ್ಯಾಪಾರ ಕ್ರಮ. ಸೇವಾ ಶುಲ್ಕ ಪಾವತಿಸುವಂತೆ ರೆಸ್ಟೋರೆಂಟ್‌ಗಳನ್ನು ಗ್ರಾಹಕರನ್ನು ಬಲವಂತಪಡಿಸಬಾರದು ಎಂದು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಜುಲೈ 4ರಂದು ಹೇಳಿತ್ತು.  
ಈ ಆದೇಶವನ್ನು ನ್ಯಾಷನಲ್ ರೆಸ್ಟೋರೆಂಟ್ ಅಸೋಸಿಯೇಶನ್ ಆಫ್ ಇಂಡಿಯಾ, ಫೆಡರೇಶನ್ ಆಫ್ ಹೊಟೇಲ್ಸ್ ಆ್ಯಂಡ್ ರೆಸ್ಟಾರೆಂಟ್ ಅಸೋಸಿಯೇಶನ್ಸ್ ಆಫ್ ಇಂಡಿಯಾ ದಿಲ್ಲಿ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದೆ.  

5 ಲಕ್ಷಕ್ಕೂ ಅಧಿಕ ರೆಸ್ಟಾರೆಂಟ್‌ಗಳನ್ನು ಪ್ರತಿನಿಧಿಸುವ ನ್ಯಾಷನಲ್ ರೆಸ್ಟಾರೆಂಟ್ ಅಸೋಸಿಯೇಶನ್ ಆಫ್ ಇಂಡಿಯಾ ತನ್ನ ಮನವಿಯಲ್ಲಿ, ಜುಲೈ 4ರ ಆದೇಶ ನಿರಂಕುಶ, ಅಸಮರ್ಥನೀಯ. ಸತ್ಯ ಹಾಗೂ ಸನ್ನಿವೇಶವನ್ನು ಪರಿಗಣಿಸದೇ ಜಾರಿಗೊಳಿಸಿರುವುದರಿಂದ ಈ ನೋಟೀಸನ್ನು ರದ್ದುಗೊಳಿಸುವ ಅಗತ್ಯತೆ ಇದೆ ಎಂದು ಹೇಳಿದೆ.  

ಬುಧವಾರ ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಯಶ್ವಂತ್ ವರ್ಮಾ, ಎಲ್ಲಾ ರೆಸ್ಟೋರೆಂಟ್‌ಗಳು ಹಾಗೂ ಹೊಟೇಲ್‌ಗಳು ಮೆನು ಹಾಗೂ ಇತರ ಸ್ಥಳಗಳಲ್ಲಿ ಸೇವಾ ಶುಲ್ಕ ಪ್ರದರ್ಶಿಸಬೇಕು ಎಂದು ಆದೇಶಿಸಿದರು. ಆಹಾರ ಪಾರ್ಸಲ್‌ಗಳಿಗೆ ಸೇವಾ ಶುಲ್ಕ ವಿಧಿಸುವುದಿಲ್ಲ ಎಂದು ರೆಸ್ಟಾರೆಂಟ್‌ಗಳನ್ನು ಪ್ರತಿನಿಧಿಸಿದ ನ್ಯಾಯವಾದಿಯ ಪ್ರತಿಪಾದನೆಯನ್ನು ನ್ಯಾಯಮೂರ್ತಿಗಳು ದಾಖಲಿಸಿಕೊಂಡರು.

‘‘ನೀವು ಸೇವಾ ಶುಲ್ಕ ಪಾವತಿಸಲು ಬಯಸದೇ ಇದ್ದರೆ, ರೆಸ್ಟಾರೆಂಟ್ ಪ್ರವೇಶಿಸಬೇಡಿ. ಇದು ಅಂತಿಮವಾಗಿ ಆಯ್ಕೆಯ ಪ್ರಶ್ನೆ’’ ಎಂದು ಉಚ್ಚ ನ್ಯಾಯಾಲಯ ಹೇಳಿತು. 
ತಮ್ಮ ಪ್ರತಿಕ್ರಿಯೆ ಸಲ್ಲಿಸುವಂತೆ ಪ್ರತಿಕ್ರಿಯೆದಾರರಿಗೆ ನ್ಯಾಯಾಲಯ ಸೂಚಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆ ನವೆಂಬರ್ 25ರಂದು ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X