Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರ ಸರಕಾರ ಸಂಸತ್ತಿನ ಮಾರ್ಗವನ್ನು...

ಕೇಂದ್ರ ಸರಕಾರ ಸಂಸತ್ತಿನ ಮಾರ್ಗವನ್ನು ತೊರೆದು ಸರ್ವಾಧಿಕಾರದತ್ತ ಹೆಜ್ಜೆ ಹಾಕುತ್ತಿದೆ: ಮಾವಳ್ಳಿ ಶಂಕರ್

ವಾರ್ತಾಭಾರತಿವಾರ್ತಾಭಾರತಿ22 July 2022 6:26 PM IST
share
ಕೇಂದ್ರ ಸರಕಾರ ಸಂಸತ್ತಿನ ಮಾರ್ಗವನ್ನು ತೊರೆದು ಸರ್ವಾಧಿಕಾರದತ್ತ ಹೆಜ್ಜೆ ಹಾಕುತ್ತಿದೆ: ಮಾವಳ್ಳಿ ಶಂಕರ್

ಬೆಂಗಳೂರು, ಜು.22: ಕೇಂದ್ರ ಸರಕಾರವು ಸಂಸತ್ತಿನ ಮಾರ್ಗವನ್ನು ತೊರೆದು, ಸರ್ವಾಧಿಕಾರದ ಧೋರಣೆಗಳನ್ನು ಅನುಸರಿಸುತ್ತಿದೆ. ಸರಕಾರದ ಈ ಮಾರ್ಗವು ದೇಶದ ಬಹುಸಂಖ್ಯಾತರಲ್ಲಿ ಆತಂಕವನ್ನು ಉಂಟು ಮಾಡುತ್ತಿದೆ ಎಂದು ದಲಿತ ಮುಖಂಡ ಮಾವಳ್ಳಿ ಶಂಕರ್ ಕಳವಳ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಗಾಂಧಿ ಭವನದಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ ಆಯೋಜಿಸಿದ್ದ ಮಾವಳ್ಳಿ ಶಂಕರ್‍ರ 60ನೇ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರಕಾರಗಳ ಈ ಧೋರಣೆಗಳನ್ನು ಖಂಡಿಸುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ಹೊರಬೇಕು. ದಲಿತ ಚಳುವಳಿ ನಾಯಕ ಪ್ರೊ. ಬಿ.ಕೃಷ್ಣಪ್ಪ ಅವರು ಕಂಡ ಕನಸನ್ನು ನನಸು ಮಾಡಬೇಕು. ಕರ್ನಾಟಕದಲ್ಲಿ ದಲಿತ ಚಳುವಳಿಗಳು ಪುನಾರಾಂಭವಾಗಬೇಕು ಎಂದು ಕರೆ ನೀಡಿದರು. 

ಸರಕಾರಗಳ ಅನ್ಯಾಯದ ವಿರುದ್ಧ ನಡೆಯುವ ಹೋರಾಟಗಳನ್ನು ನಾವು ಯಾವುದೇ ಕಾರಣಕ್ಕೂ ನಿಲ್ಲಿಸಬಾರದು. ಅವು ಜೀವಂತವಾಗಿರಬೇಕು ಎಂದ ಅವರು, ಇಂತಹ ಸಮಾರಂಭಗಳು ನಮಗೆ ಕೇವಲ ಸಂತೋಷವನ್ನು ಮಾತ್ರ ನೀಡುವುದಿಲ್ಲ, ಬದಲಾಗಿ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸುತ್ತದೆ ಎಂದು ಹೇಳಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಲಿತ ಮುಖಂಡ ಗುರುಪ್ರಸಾದ್ ಕೆರಗೋಡು ಅವರು ಮಾತನಾಡಿ, ಬಜೆಟ್‍ನಲ್ಲಿ ದಲಿತರ ಹಕ್ಕಿನ ಪಾಲನ್ನು ಕುರಿತು ಆರಂಭಿಸಿದ ಎಸ್‍ಸಿಪಿ ಮತ್ತು ಟಿಎಸ್‍ಪಿ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಮಾವಳ್ಳಿ ಶಂಕರ್ ಅವರು ನಡೆಸಿದ ದಲಿತ ಹೋರಾಟಗಳು ಚಳುವಳಿಯ ಮೈಲುಗಲ್ಲುಗಳಾಗಿವೆ. ದಶಕಗಳ ಕೆಳಗೆ ‘ಸಂವಿದಾನ ಸಂಕಲ್ಪ ದಿನ’ವನ್ನು ಸಂಘಟನೆಯ ಕಾರ್ಯಕ್ರಮವಾಗಿಸಿದ್ದ ಶಂಕರ್, ದಲಿತ ಸಂಘರ್ಷ ಸಮಿತಿಯ ಸಂಘಟನೆಯ ರಾಜ್ಯ ಸಂಚಾಲಕರಾಗಿ ಚಳುವಳಿಯನ್ನು ಗಟ್ಟಿಗೊಳಿಸುತ್ತಾ ಬಂದಿದ್ದಾರೆ. ಅಂಬೇಡ್ಕರ್‍ವಾದ ಪತ್ರಿಕೆಯನ್ನು ಹೊರತಂದು ದಲಿತ ಚಳುವಳಿಗಳನ್ನು ದಾಖಲಿಸಿದ್ದಾರೆ ಎಂದು ನೆನಪಿಸಿಕೊಂಡರು. 

ಕಾರ್ಯಕ್ರಮದಲ್ಲಿ ರೈತ ಮುಖಂಡ ಬಡಗಲಪುರ ನಾಗೇಂದ್ರ, ಲಕ್ಷ್ಮೀನಾರಾಯಣ ನಾಗವಾರ, ನಟರಾಜ್ ಹುಳಿಯಾರ್ ಮತ್ತಿತರ ಮುಖಂಡರು ಭಾಗವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X