Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಹಾಂಗೀರಪುರಿ ಹಿಂಸಾಚಾರಕ್ಕೆ ಸಂಬಂಧಿಸಿ 5...

ಜಹಾಂಗೀರಪುರಿ ಹಿಂಸಾಚಾರಕ್ಕೆ ಸಂಬಂಧಿಸಿ 5 ಮಹಿಳೆಯರನ್ನು ಅಕ್ರಮ ದಿಗ್ಬಂಧನದಲ್ಲಿರಿಸಿದ ಪೊಲೀಸರು: ಆರೋಪ

ಹೈಕೋರ್ಟ್ ಮೊರೆ ಹೋದ ಸಂತ್ರಸ್ತ ಕುಟುಂಬ

ವಾರ್ತಾಭಾರತಿವಾರ್ತಾಭಾರತಿ23 July 2022 4:22 PM IST
share
ಜಹಾಂಗೀರಪುರಿ ಹಿಂಸಾಚಾರಕ್ಕೆ ಸಂಬಂಧಿಸಿ 5 ಮಹಿಳೆಯರನ್ನು ಅಕ್ರಮ ದಿಗ್ಬಂಧನದಲ್ಲಿರಿಸಿದ ಪೊಲೀಸರು: ಆರೋಪ

 ಹೊಸದಿಲ್ಲಿ: ತಮ್ಮನ್ನು ದಿಲ್ಲಿ ಪೊಲೀಸರು 42 ಗಂಟೆಗಳ ಕಾಲ ಆಕ್ರಮವಾಗಿ ವಶಪಡಿಸಿಕೊಂಡಿದ್ದರು ಎಂದು ಐದು ಮಂದಿ ಮುಸ್ಲಿಂ ಮಹಿಳೆಯರು ಆರೋಪಿಸಿದ್ದಾರೆ. ಆದರೆ ರಾಜಧಾನಿಯ ಜಹಾಂಗೀರಪುರಿ ಪ್ರದೇಶದಲ್ಲಿ ಈ ವರ್ಷದ ಎಪ್ರಿಲ್ 16ರಂದು ನಡೆದ ಮತೀಯ ಹಿಂಸಾಚಾರ ಪ್ರಕರಣ ಸಂಬಂಧ ಅವರನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ತಮ್ಮ ಮನೆಯ ಪುರುಷರು ಪೊಲೀಸರಿಗೆ ಶರಣಾಗುವಂತೆ ಮಾಡುವಂತೆ ತಮಗೆ ಬೆದರಿಕೆಗಳು ಬರುತ್ತಿವೆ ಎಂದು ಆ ಪ್ರದೇಶದ ಕೆಲ ಮಹಿಳೆಯರು ಹೇಳಿದ್ದಾರೆಂದು ಮಾಧ್ಯಮವೊಂದು ವರದಿ ಮಾಡಿದೆ. ಒಂದು ನಿರ್ದಿಷ್ಟ ಮಹಿಳೆಯ ಪುತ್ರ ಈ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಎಂಬ ಶಂಕೆ ಪೊಲೀಸರಿಗಿದೆ ಎಂದು ಆ ಮಹಿಳೆಯ ಕುಟುಂಬ ಹೇಳಿದೆ.

ಜುಲೈ 17ರಂದು ಈ ಮಹಿಳೆಯ ಮನೆಗೆ ರಾತ್ರಿ 9 ಗಂಟೆ ಸುಮಾರಿಗೆ ಬಂದ ಪೊಲೀಸರು ಆಕೆಯ ಪುತ್ರನ ಬಗ್ಗೆ ವಿಚಾರಿಸಿದ್ದರು, ತಿಳಿದಿಲ್ಲ ಎಂದಾಗ ಮಹಿಳೆ ಮತ್ತಾಕೆಯ ಪುತ್ರಿಯನ್ನು ಪೊಲೀಸ್ ವಾಹನದಲ್ಲಿ ಕುಳಿತುಕೊಳ್ಳುವಂತೆ ಹೇಳಲಾಯಿತು. 

ಇಬ್ಬರನ್ನೂ ನಂತರ ಜಹಾಂಗೀರಪುರಿ ಠಾಣೆಗೆ ಕರೆದೊಯ್ಯಲಾಯಿತು, ಪುತ್ರಿಗೆ 17 ವರ್ಷ, ಆಕೆ ಅಪ್ರಾಪ್ತೆ ಎಂದು ಹೇಳಿದರೂ ಪೊಲೀಸರು ಕಿವಿಗೆ ಹಾಕಿಸಿಕೊಳ್ಳಲಿಲ್ಲ ಎಂದು ಆರೋಪಿಸಲಾಗಿದೆ. ನಂತರ ಅವರ ಮೂವರು ಸಂಬಂಧಿ ಮಹಿಳೆಯರು ಠಾಣೆಗೆ ಹೋದಾಗ ಅವರನ್ನೂ ವಶಪಡಿಸಿಕೊಳ್ಳಲಾಯಿತು ಹಾಗೂ ಅವರಲ್ಲಿ 4 ವರ್ಷದ ಬಾಲಕಿಯೂ ಸೇರಿದ್ದಳು. 

ನಮ್ಮನ್ನು ಒಂದು ಕೊಠಡಿಯಲ್ಲಿ ಮೂರು ದಿನಗಳ ಕಾಲ ಕೂರಿಸಲಾಯಿತು ಎಂದು ಮಹಿಳೆಯರು ಹೇಳಿದ್ದಾರೆ. ಅವರಲ್ಲೊಬ್ಬಾಕೆ ತಮ್ಮ ಬಳಿಯಿದ್ದ ಫೋನ್‍ನಿಂದ ವಕೀಲರಿಗೆ ಕರೆ ಮಾಡಿದ ನಂತರ ಅವರು ಠಾಣೆಗೆ ಬಂದ ನಂತರವಷ್ಟೇ ಅವರನ್ನು ಬಿಡುಗಡೆಗೊಳಿಸಲಾಯಿತು. ಪೊಲೀಸರು ತಮ್ಮನ್ನು ನಿಂದಿಸಿದ್ದಾರೆಂದೂ ಮಹಿಳೆಯರು ಆರೋಪಿಸಿದ್ದಾರೆ.

ಪೊಲೀಸರು ಅಕ್ರಮವಾಗಿ ತಮ್ಮನ್ನು ದಿಗ್ಬಂಧನದಲ್ಲಿರಿಸಿದ್ದರು ಈ ಕುರಿತು ತನಿಖೆ ನಡೆಸಬೇಕೆಂದು ಕೋರಿ ಕುಟುಂಬ ಈಗ ದಿಲ್ಲಿ ಹೈಕೋರ್ಟಿನ ಕದ ತಟ್ಟಿದೆ. ಅಕ್ರಮವಾಗಿ ದಿಗ್ಬಂಧನದಲ್ಲಿರಿಸಿದ್ದಕ್ಕಾಗಿ ಪರಿಹಾರ ನೀಡಬೇಕೆಂದೂ ಮಹಿಳೆಯರು ಕೋರಿದ್ದಾರೆ. ಪ್ರಕರಣ ಮುಂದಿನ ವಾರ ವಿಚಾರಣೆಗೆ ಬರುವ ನಿರೀಕ್ಷೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X