Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯ ನನ್ನ ಸಾವನ್ನು ಬಯಸಿದೆ: ‘ಪನಾಮಾ...

ರಶ್ಯ ನನ್ನ ಸಾವನ್ನು ಬಯಸಿದೆ: ‘ಪನಾಮಾ ಪೇಪರ್ಸ್’ನ ಜಾನ್ ಡೋ ಆತಂಕ

ವಾರ್ತಾಭಾರತಿವಾರ್ತಾಭಾರತಿ23 July 2022 11:23 PM IST
share
ರಶ್ಯ ನನ್ನ ಸಾವನ್ನು ಬಯಸಿದೆ: ‘ಪನಾಮಾ ಪೇಪರ್ಸ್’ನ ಜಾನ್ ಡೋ ಆತಂಕ

ಬರ್ಲಿನ್, ಜು.24: ‘ಪನಾಮಾ ಪೇಪರ್ಸ್’ ಪ್ರಕರಣದ ಮೂಲಕ ವಿಶ್ವದಾದ್ಯಂತದ ಪ್ರಮುಖ ತೆರಿಗೆ ತಪ್ಪಿಸುವಿಕೆ ಮತ್ತು ವಂಚನೆಯನ್ನು ಬೆಳಕಿಗೆ ತಂದ , ಜಾನ್ ಡೋ ಎಂಬ ಗುಪ್ತನಾಮದಿಂದ ಗುರುತಿಸಿಕೊಂಡಿರುವ ಜಾಗೃತಿ ಕಾರ್ಯಕರ್ತ (ವ್ಹಿಸಲ್ ಬ್ಲೋವರ್), ತನಗೆ ರಶ್ಯ ಪ್ರತೀಕಾರ ಕ್ರಮ ಕೈಗೊಳ್ಳಬಹುದು ಎಂಬ ಭೀತಿಯಿದೆ ಎಂದಿದ್ದಾರೆ.

ರಶ್ಯದ ಉನ್ನತ ಅಧಿಕಾರಿಗಳು ಮತ್ತವರ ಮಿತ್ರರು ಆರ್ಥಿಕ ಅವ್ಯವಹಾರ ಎಸಗಿ ಉಕ್ರೇನ್‌ನಲ್ಲಿನ ಯುದ್ಧಕ್ಕೆ ಹಣಕಾಸಿನ ಬೆಂಬಲ ಒದಗಿಸಿರುವುದಕ್ಕೆ ತನ್ನ ಬಳಿ ಪುರಾವೆಗಳಿವೆ ಎಂದು ಜರ್ಮನಿಯ ಡೆರ್ ಸ್ಪೀಗಲ್ ಎಂಬ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಜಾನ್ ಡೋ ಹೇಳಿದ್ದಾರೆ. ನಿಮಗೇನಾದರೂ ಜೀವಬೆದರಿಕೆ ಇದೆಯೇ ಎಂಬ ಪ್ರಶ್ನೆಗೆ ‘ ನನ್ನ ಸಾವನ್ನು ಬಯಸುವುದಾಗಿ ರಶ್ಯ ಸರಕಾರ ಹೇಳಿಕೆ ನೀಡಿದಂದಿನಿಂದಲೂ ಈ ಅಪಾಯದಲ್ಲಿಯೇ ಜೀವನ ಸಾಗಿಸುತ್ತಿದ್ದೇನೆ’ ಎಂದು ಉತ್ತರಿಸಿದ್ದಾರೆ. ನಿರಂಕುಶ ಆಡಳಿತದಲ್ಲಿನ ಪ್ರಬಲರು ಬಳಸುವ ತೆರಿಗೆ ಸ್ವರ್ಗದ ಕುರಿತ ಪ್ರಶ್ನೆಗೆ ಉತ್ತರಿಸಿದ ಜಾನ್ ಡೋ, ರಶ್ಯದಲ್ಲಿ ಇವರು ವಹಿಸುತ್ತಿರುವ ಪಾತ್ರವನ್ನು ಉದಾಹರಿಸಿದರು.

ಹಿಟ್ಲರ್ಗಿಂತಲೂ ರಶ್ಯ ಅಧ್ಯಕ್ಷ ಪುಟಿನ್ ಅಮೆರಿಕಕ್ಕೆ ಹೆಚ್ಚಿನ ಬೆದರಿಕೆಯಾಗಿದ್ದಾರೆ. ಪುಟಿನ್ ಬೆಂಬಲಕ್ಕೆ ಹಲವು ನಕಲಿ ಸಂಸ್ಥೆಗಳಿವೆ. ಈ ಸಂಸ್ಥೆಗಳು ಉಕ್ರೇನ್ ಯುದ್ಧಕ್ಕೆ ಆರ್ಥಿಕ ನೆರವು ಒದಗಿಸುತ್ತಿವೆ. ಈ ಹಣ ಬಳಸಿ ರಶ್ಯದ ಪಡೆಗಳು ಶಾಪಿಂಗ್ ಸೆಂಟರ್ಗಳನ್ನು ಗುರಿಯಾಗಿಸಿ ದಾಳಿ ಮಾಡಿ ಅಮಾಯಕ ಜನರನ್ನು ಹತ್ಯೆ ಮಾಡುತ್ತಿವೆ. ಅನಾಮಧೇಯ ಸಂಸ್ಥೆಗಳು ಹೊಣೆಗಾರಿಕೆ, ಉತ್ತರದಾಯಿತ್ವದಿಂದ ನುಣುಚಿಕೊಳ್ಳುವ ಮೂಲಕ ಈ ಭೀತಿಯನ್ನು ಇನ್ನಷ್ಟು ಸಂಭಾವ್ಯಗೊಳಿಸಿದೆ. ಆದರೆ ಉತ್ತರದಾಯಿತ್ವ ಇಲ್ಲದೆ ಸಮಾಜ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದವರು ಹೇಳಿದ್ದಾರೆ.

ರಶ್ಯದ ಸರಕಾರಿ ಸ್ವಾಮ್ಯದ ಟಿವಿ ಚಾನೆಲ್ ಆರ್ಟಿ ಎರಡು ಭಾಗಗಳಲ್ಲಿ ಪ್ರಸಾರ ಮಾಡಿದ ಪನಾಮಾ ಪೇಪರ್ಸ್ ಸಾಕ್ಷ್ಯಚಿತ್ರದ ಪ್ರಾರಂಭದಲ್ಲಿ ‘ಜಾನ್ ಡೋ’ ಪಾತ್ರವನ್ನು ಚಿತ್ರಹಿಂಸೆಯಿಂದ ತಲೆಗೆ ಗಾಯವಾದ ರೀತಿಯಲ್ಲಿ ತೋರಿಸಲಾಗಿದೆ. ವಿಲಕ್ಷಣ, ಜಿಗುಟಿನ ಜತೆಗೆ ಇದು ಮಾರ್ಮಿಕವಾಗಿದೆ ಎಂದು ಜೋ ಡೋ ಸಂದರ್ಶನದಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X