Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್ ಸೇನೆಯಿಂದ ಕಾರ್ಯಾಚರಣೆ: ಇಬ್ಬರು...

ಇಸ್ರೇಲ್ ಸೇನೆಯಿಂದ ಕಾರ್ಯಾಚರಣೆ: ಇಬ್ಬರು ಫೆಲೆಸ್ತೀನೀಯರ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ24 July 2022 11:23 PM IST
share
ಇಸ್ರೇಲ್ ಸೇನೆಯಿಂದ ಕಾರ್ಯಾಚರಣೆ: ಇಬ್ಬರು ಫೆಲೆಸ್ತೀನೀಯರ ಹತ್ಯೆ

ಜೆರುಸಲೇಂ, ಜು.24: ಆಕ್ರಮಿತ ಪಶ್ಚಿಮ ದಂಡೆಯ ನಬ್ಲೂಸ್ ನಗರದಲ್ಲಿ ಇಸ್ರೇಲ್ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಪೆಲೆಸ್ತೀನೀಯರು ಹತರಾಗಿದ್ದಾರೆ ಎಂದು ಫೆಲೆಸ್ತೀನ್ ಆರೋಗ್ಯ ಇಲಾಖೆ ಹೇಳಿದೆ.

 25 ವರ್ಷದ ಮುಹಮ್ಮದ್ ಅಝೀರ್ ನ ಎದೆಭಾಗಕ್ಕೆ ಮತ್ತು 28 ವರ್ಷದ ಅಬ್ದುಲ್ ರಹ್ಮಾನ್ ಜಮಾಲ್ ನ ತಲೆಗೆ ಗುಂಡೇಟು ಬಿದ್ದಿದೆ ಎಂದು ಆರೋಗ್ಯ ಇಲಾಖೆಯ ಹೇಳಿಕೆ ತಿಳಿಸಿದೆ. ಶನಿವಾರ ಮಧ್ಯರಾತ್ರಿ ಬಳಿಕ ನಬ್ಲೂಸ್ ನಗರದ ಪಕ್ಕದ ಅಲ್ ಯಸ್ಮಿನಾ ಪಟ್ಟಣಕ್ಕೆ ನುಗ್ಗಿದ ಇಸ್ರೇಲ್ ಸೇನೆ ಅಲ್ಲಿದ್ದ ಮನೆಯೊಂದನ್ನು ಸುತ್ತುವರಿದಿದೆ. ಬಳಿಕ ಮನೆಯ ಮೇಲೆ ಸ್ಫೋಟಕ ಎಸೆದು ಗುಂಡಿನ ದಾಳಿ ನಡೆಸಿದಾಗ ಇಬ್ಬರು ಪೆಲೆಸ್ತೀನೀಯರು ಹತರಾಗಿದ್ದಾರೆ ಎಂದು ಪೆಲೆಸ್ತೀನ್ ಸುದ್ಧಿಸಂಸ್ಥೆ ವಫಾ ವರದಿ ಮಾಡಿದೆ. ಇತರ ಕನಿಷ್ಟ 12 ಮಂದಿ ಗಾಯಗೊಂಡಿದ್ದು ಒಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ಪೆಲೆಸ್ತೀನ್ ರೆಡ್ ಕ್ರೆಸೆಂಟ್ ಮಾಹಿತಿ ನೀಡಿದೆ. ಮನೆಯನ್ನು ಸುತ್ತುವರಿದ ಇಸ್ರೇಲ್ ಸೇನೆ, ಓರ್ವನ ಹೆಸರನ್ನು ಉಲ್ಲೇಖಿಸಿ ಮನೆಯಿಂದ ಹೊರಬರುವಂತೆ ಸೂಚಿಸಿದೆ. ಬಳಿಕ ಸ್ಫೋಟಕ ಎಸೆದು ಗುಂಡು ಹಾರಿಸಿದೆ ಎಂದು ನೆರೆಮನೆಯ ವ್ಯಕ್ತಿಯನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
 ನಬ್ಲೂಸ್ ಓಲ್ಡ್ ಸಿಟಿಯಲ್ಲಿ ಆಕ್ರಮಣ ಪಡೆಯಿಂದ ಮತ್ತೊಂದು ಅಪರಾಧ ಘಟಿಸಿದೆ. 3 ಮಂದಿ ಮರಣ ಹೊಂದಿದ್ದು ಹಲವರು ಗಾಯಗೊಂಡಿದ್ದಾರೆ. ಈ ಅಪರಾಧವನ್ನು ತೀವ್ರವಾಗಿ ಖಂಡಿಸುತ್ತೇವೆ ಮತ್ತು ಈ ಅಪರಾಧಕ್ಕೆ ಆಕ್ರಮಣ ಪಡೆಯನ್ನು ಹೊಣೆಯಾಗಿಸಬೇಕು ಎಂದು ಹಿರಿಯ ಪೆಲೆಸ್ತೀನ್ ಅಧಿಕಾರಿ ಹುಸೈನ್ ಅಲ್ ಶೇಖ್ ಪ್ರತಿಕ್ರಿಯಿಸಿದ್ದಾರೆ.

ನೆಬ್ಲೂಸ್‌ನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭ ಮನೆಯೊಂದರಲ್ಲಿ ಶಂಕಿತ ಉಗ್ರರ ಬಗ್ಗೆ ಸುಳಿವು ಲಭಿಸಿದೆ. ಸೇನೆ ಅಲ್ಲಿಗೆ ತೆರಳಿದಾಗ ಮನೆಯೊಳಗಿಂದ ಗುಂಡಿನ ದಾಳಿ ನಡೆದಿದ್ದು ಯೋಧರು ಪ್ರತ್ಯುತ್ತರ ನೀಡಿದ್ದಾರೆ ಎಂದು ಇಸ್ರೇಲ್ ಸೇನೆ ಹೇಳಿದ್ದು, ಸಾವು ನೋವಿನ ಬಗ್ಗೆ ಉಲ್ಲೇಖಿಸಿಲ್ಲ.
 ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಪಡೆಗಳ ಕಾರ್ಯಾಚರಣೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವುದನ್ನು ಮತ್ತು ಶನಿವಾರದ ಕಾರ್ಯಾಚರಣೆಯಲ್ಲಿ ಪೆಲೆಸ್ತೀನ್ ಯುವಕರು ಹತ್ಯೆಯಾಗಿರುವುದನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X