Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಂದಳಿಕೆ : ಆಟಿಡೊಂಜಿ ದಿನ ಕಾರ್ಯಕ್ರಮ

ನಂದಳಿಕೆ : ಆಟಿಡೊಂಜಿ ದಿನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ25 July 2022 7:26 PM IST
share
ನಂದಳಿಕೆ : ಆಟಿಡೊಂಜಿ ದಿನ ಕಾರ್ಯಕ್ರಮ

ಕಾರ್ಕಳ : ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ವತಿಯಿಂದ ಅಬ್ಬನಡ್ಕ ಕುಂಟಲಗುಂಡಿ ಯಲ್ಲಿರುವ ಸಂಘದ ರಂಗಮಂದಿರದಲ್ಲಿ ರವಿವಾರ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪತ್ರಕರ್ತ ರಾಮಚಂದ್ರ ಬರೆಪ್ಪಾಡಿ, ಆಟಿಡೊಂಜಿ ಕಾರ್ಯಕ್ರಮದ ಮೂಲಕ ಹಿರಿಯರು ಪಾಲನೆ ಮಾಡಿಕೊಂಡು ಬಂದಿರುವ ತುಳುನಾಡಿನ ಸಂಪ್ರದಾಯ, ಆಚಾರ-ವಿಚಾರ, ವೈಜ್ಞಾನಿಕ ಸಂಗತಿ ಯುವ ಸಮುದಾಯಕ್ಕೆ ತಿಳಿಸಿಕೊಡುವ ಕಾರ್ಯವಾಗುತ್ತಿದೆ. ಇಂತಹ ಆಚರಣೆಯಿಂದ ನಮ್ಮತನದ ಉಳಿವು ಸಾಧ್ಯ ಎಂದರು.

ಕಳೆದೆರಡು ದಶಕಗಳಿಂದ ನಿರಂತರವಾಗಿ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್‌ ಕ್ಲಬ್‌ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ. ಸಂಘಟನೆ, ಶಿಸ್ತುವಿಗೆ ಹೆಸರುವಾಸಿಯಾಗಿರುವ ಫ್ರೆಂಡ್ಸ್‌ ಕ್ಲಬ್‌ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುತ್ತಿದೆ ಎಂದು ರಾಮಚಂದ್ರ ಅಭಿಪ್ರಾಯಪಟ್ಟರು. 

ಶಶಿ ಕಿಚನ್ ಯೂಟ್ಯೂಬರ್ ಶಿರ್ವದ ಶಶಿಕಲಾ ಕುಲಾಲ್ ಮಾತನಾಡಿ, ಆಟಿಡೊಂಜಿ ದಿನ ಆಚರಣೆಯಿಂದ ಆಟಿ ತಿಂಗಳ ವೈಶಿಷ್ಟತೆ ಕುರಿತು ತಿಳಿಸಿಕೊಡುವ ಕಾರ್ಯವಾಗುತ್ತಿದೆ. ಈಗಿನ ಫಾಸ್ಟ್‌ಫುಡ್‌, ಮೊಬೈಲ್ ಯುವ ಜನತೆಯ ಮೇಲೆ ಅಗಾಧ ಪರಿಣಾಮ ಬೀರುತ್ತಿದ್ದು ನಮ್ಮೂರಿನ ಸಂಸ್ಕೃತಿ ದೂರುವಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು. 

ಹಚ್ಚಹಸುರಿನ ವೇದಿಕೆ ಅತ್ಯಂತ ಆಕರ್ಷಕವಾಗಿತ್ತು. ತೆಂಗಿನಗರಿಯಲ್ಲಿ ಕಟ್ಟಿದ ಸೌತೆಕಾಯಿ, ಹಳೆಯ ಕಾಲದ ದೀಪ, ಚೆನ್ನೆಮಣೆ, ಮರ ಮತ್ತು ಲೋಹದ ಹಳೆಯ ಪಾತ್ರೆಗಳು, ಹಳೆ ಕಾಲದ ನಾಣ್ಯ ವೇದಿಕೆಯನ್ನು ಅಲಂಕರಿಸಿತ್ತು. ಸಂಘದ ಸದಸ್ಯ ಬೋಳ ಕೀರ್ತನ್ ಪೂಜಾರಿ ಅವರು ವೇದಿಕೆ ನಿರ್ಮಾಣ ಮಾಡಿದ್ದರು. 

ಲೀಲಾ ಜತೊಟ್ಟು, ಅಮಣಿ ಆಚಾರ್ಯ, ಸಂಜೀವಿ ಆಚಾರ್ಯ ಅವರು ತುಳು ಪಾಡ್ದನ ಹಾಡಿದರು. ಸಂಘದ ಬಾಲ ಪ್ರತಿಭೆ ನಿಯಾ ಶೆಟ್ಟಿ ಸುಮಾರು 50ಕ್ಕೂ ಅಧಿಕ ತುಳು ಗಾದೆಗಳನ್ನು ವಾಚಿಸಿದರು.

ಆಟಿಡೊಂಜಿ ದಿನದ ಕಾರ್ಯಕ್ರಮದಲ್ಲಿ 28 ಬಗೆ ಬಗೆಯ ಸ್ವಾದಿಷ್ಟಕರ ಖಾದ್ಯಗಳಿದ್ದವು. ಪೆಜಕಾಯಿ ಚಟ್ನಿ, ಕುಕ್ಕುದ ಚಟ್ನಿ, ಕುಕ್ಕುದ ಉಪ್ಪಡ್, ಕುಡುತ ಚಟ್ನಿ, ಪುನರ್ ಪುಳಿತ ಚಟ್ನಿ, ತಿಮರೆ ಚಟ್ನಿ, ನುರ್ಗೆ ತೊಪ್ಪು, ತೊಂಜಕ್ ಬೊಲೆದ ಸುಕ್ಕ, ತೆಕ್ಕರೆ ತಲ್ಲಿ, ಉಪ್ಪಡ್ ಪಚ್ಚಿರ್, ಗೆಂಡದಡ್ಡೆ, ಹಪ್ಪಳ, ಸೆಂಡಿಗೆ, ಖಾರ ಮುಂಚಿ, ಉರ್ಪೆಲ್ ನುಪ್ಪು, ಕುಡುತ ಸಾರ್, ರೊಟ್ಟಿ ಪಾಯಸ, ಅರಿತ ಪಾಯಸ, ಜೀರಿಗೆದ ಕಷಾಯ, ಪೋಡಿ, ಬಚ್ಚಿರೆ ಬಜ್ಜೆಯಿ, ಅಲೆ (ಮಜ್ಜಿಗೆ), ಗುಜ್ಜೆದ ಗಟ್ಟಿ, ಗುಜ್ಜೆದ ಮುಲ್ಕ, ಅರೆಪುದ ಪುಂಡಿ, ಪತ್ರೊಡ್ಡೆ, ಚಿಲ್ಮಿ, ಲಡ್ಡು‌ ಮೊದಲಾದ ರುಚಿರುಚಿಯಾದ ತಿನಿಸುಗಳಿದ್ದವು.

ಸಂಘದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪೂಜಾರಿ ಬೀರೊಟ್ಟು, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಘುವೀರ್ ಶೆಟ್ಟಿ, ನಿಕಟ ಪೂರ್ವಾಧ್ಯಕ್ಷ ಉದಯ ಅಂಚನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಬ್ಬನಡ್ಕ ಶ್ರೀ ವನದುರ್ಗಾ ಸ್ವ ಸಹಾಯ ಸಂಘದ ಅಧ್ಯಕ್ಷೆ ಲಲಿತಾ ಆಚಾರ್ಯ ಪ್ರಾರ್ಥಸಿದರು. ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಸ್ವಾಗತಿಸಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸುರೇಶ್ ಕಾಸ್ರಬೈಲು ವರದಿ ವಾಚಿಸಿ, ಕಾರ್ಯಕ್ರಮದ ನಿರ್ದೇಶಕ ಅಬ್ಬನಡ್ಕ ಪದ್ಮಶ್ರೀ ಸತೀಶ್ ಪೂಜಾರಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X