Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಷ್ಣಅಲೆಗೆ ನಾಮಕರಣ ಮಾಡಿದ ಸ್ಪೇನ್ ನ ನಗರ

ಉಷ್ಣಅಲೆಗೆ ನಾಮಕರಣ ಮಾಡಿದ ಸ್ಪೇನ್ ನ ನಗರ

ವಾರ್ತಾಭಾರತಿವಾರ್ತಾಭಾರತಿ26 July 2022 10:50 PM IST
share

ಮ್ಯಾಡ್ರಿಡ್, ಜು.26: ಉಷ್ಣವಲಯದ ಬಿರುಗಾಳಿ ಮತ್ತು ಚಂಡಮಾರುತಕ್ಕೆ ನಾಮಕರಣ ಮಾಡುವ ರೀತಿಯಲ್ಲಿಯೇ ಸ್ಪೇನ್‌ನ ನಗರ ಸೆವಿಲ್ಲೆಯು ಉಷ್ಣಅಲೆಗೆ ಹೆಸರು ಇಡುವ ಮೂಲಕ ಈ ರೀತಿ ಮಾಡಿದ ವಿಶ್ವದ ಪ್ರಥಮ ನಗರ ಎನಿಸಿಕೊಂಡಿದೆ. ಸೆವಿಲ್ಲೆ ನಗರವನ್ನು ಅಪ್ಪಳಿಸಿದ ಈ ವರ್ಷದ 4ನೇ ಉಷ್ಣಅಲೆಗೆ ಝೋ ಎಂದು ಹೆಸರಿಡಲಾಗಿದೆ ಎಂದು ನಗರದ ಆಡಳಿತ ವರದಿ ಮಾಡಿದೆ.

ತೀವ್ರ ಉಷ್ಣಅಲೆಯಿಂದ ವಿಪರೀತ ಶಾಖದ ಅವಧಿ ಹೆಚ್ಚಾಗಿರುವುದರಿಂದ ಈ ಬಗ್ಗೆ ಜನರಿಗೆ ಎಚ್ಚರಿಕೆ ನೀಡಲು ಉಷ್ಣಅಲೆಗೆ ಹೆಸರಿಡಲು ನಿರ್ಧರಿಸಲಾಗಿದೆ. ನಗರದ ಹವಾಮಾನ ದತ್ತಾಂಶ ವ್ಯವಸ್ಥೆ 4ನೇ ಉಷ್ಣಅಲೆಗೆ ಝೋ ಎಂದು ಹೆಸರಿಟ್ಟಿದೆ. ಅಧಿಕಾರಿಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ತೀವ್ರತರವಾದ ತಾಪಮಾನದ ಮೇಲೆ ತೇವಾಂಶ ಮತ್ತು ದಿನದ ಸಮಯದ ಪ್ರಭಾವವನ್ನು ಅರ್ಥ ಮಾಡಿಕೊಳ್ಳಲು ಉಷ್ಣಅಲೆಗೆ ಹೊಸ ವರ್ಗೀಕರಣ ವ್ಯವಸ್ಥೆಯನ್ನು ಕಳೆದ ತಿಂಗಳು ಪ್ರಾರಂಭಿಸಲಾಗಿದೆ.

ಝೋ ಉಷ್ಣಅಲೆಯ ಸಂದರ್ಭ ಹಗಲಿನ ತಾಪಮಾನ 43 ಡಿಗ್ರಿ ಸೆಲ್ಶಿಯಸ್ಗೂ ಹೆಚ್ಚಿರುತ್ತದೆ. ಮುಂದಿನ ದಿನಗಳಲ್ಲಿ ಬೀಸಲಿರುವ ಉಷ್ಣಅಲೆಗಳಿಗೆ ಯಾಗೊ, ಕ್ಸೆನಿಯಾ, ವೆನ್ಸೆಸ್ಲಾವೊ ಮತ್ತು ವೆಗಾ ಎಂದು ಹೆಸರಿಡಲಾಗುವುದು. ಝೋ ಉಷ್ಣಮಾರುತದ ಸಂದರ್ಭ ಆದಷ್ಟು ಶ್ರಮದ ಕೆಲಸವನ್ನು ತಪ್ಪಿಸಬೇಕು ಮತ್ತು ಹೆಚ್ಚು ನೀರನ್ನು ಕುಡಿಯಬೇಕು. ಈ ಅವಧಿಯಲ್ಲಿ ತಾಪಮಾನ ಅತ್ಯಂತ ಗರಿಷ್ಟಮಟ್ಟಕ್ಕೆ ತಲುಪಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಸ್ಥಳೀಯ ಹವಾಮಾನ ಇಲಾಖೆ ಮತ್ತು ವಾಷಿಂಗ್ಟನ್ನ ಆರ್ಷ್-ರಾಕ್ ಪ್ರತಿಷ್ಟಾನ ಜಂಟಿಯಾಗಿ ಹಮ್ಮಿಕೊಂಡಿರುವ ವರ್ಷಾವಧಿಯ ಯೋಜನೆಯಡಿ ಈ ವರ್ಗೀಕರಣ ಮಾಡಲಾಗಿದೆ. ಯೋಜನೆಯಡಿಯಲ್ಲಿ ಹವಾಮಾನ ಶಾಸ್ತ್ರಜ್ಞರು ಸೆವಿಲ್ಲೆ ನಗರದ ಐತಿಹಾಸಿಕ ಹವಾಮಾನ ದಾಖಲೆ ಮತ್ತು ಸ್ಥಳೀಯ ಆರೋಗ್ಯ ಮತ್ತು ಮರಣದ ಡೇಟಾವನ್ನು ವಿಶ್ಲೇಷಿಸುತ್ತಾರೆ. ಪ್ರತಿಕೂಲ ಘಟನೆಯ ಐದು ದಿನಗಳ ಮುಂಚಿತವಾಗಿ ಶಾಖದ ಅಲೆಗಳ ಮುನ್ಸೂಚನೆ ನೀಡುತ್ತಾರೆ ಮತ್ತು ಅದರ ಪ್ರಭಾವದ ಆಧಾರದಲ್ಲಿ ಅದನ್ನು ಸ್ವಯಂ ಚಾಲಿತವಾಗಿ ವರ್ಗಾಯಿಸುತ್ತಾರೆ.

 ಹವಾಮಾನ ವೈಪರೀತ್ಯದಿಂದ ಸಂಭವಿಸುವ ಉಷ್ಣಮಾರುತದಿಂದ ಸ್ಪೇನ್ನಲ್ಲಿ 600ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X