Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಳಿಜೋಳ ಕಣಜದಲ್ಲಿಯೇ ಬಿಳಿಜೋಳ ವಿರಳ!

ಬಿಳಿಜೋಳ ಕಣಜದಲ್ಲಿಯೇ ಬಿಳಿಜೋಳ ವಿರಳ!

- ಆಸಿಫ್ ಬಾಗವಾನ (ವಿಜಯಪುರ)- ಆಸಿಫ್ ಬಾಗವಾನ (ವಿಜಯಪುರ)26 July 2022 11:59 PM IST
share
ಬಿಳಿಜೋಳ ಕಣಜದಲ್ಲಿಯೇ ಬಿಳಿಜೋಳ ವಿರಳ!

ವಿಜಯಪುರ, ಜು.26: ಗಟ್ಟಿ ರೊಟ್ಟಿಯ ಬಿಳಿಜೋಳಕ್ಕೆ ಹೆಸರಾದ ವಿಜಯಪುರ ಜಿಲ್ಲೆಯಲ್ಲಿಯೇ ಬಿಳಿಜೋಳ ಕೊರತೆ ಉಂಟಾಗಿದೆ. ಒಂದು ರೀತಿ ಬಿಳಿಜೋಳ ಕಣಜದಲ್ಲಿಯೇ ಬಿಳಿಜೋಳ ವಿರಳವಾಗುತ್ತ ಸಾಗಿದೆ. ಖಡಕ್ ರೊಟ್ಟಿಗೆ ಉತ್ತರ ಕರ್ನಾಟಕದ ಬಿಳಿಜೋಳ ಸುಪ್ರಸಿದ್ಧ. ಆದರೆ ಪಡಿತರ ವ್ಯವಸ್ಥೆಯಲ್ಲಿ ವಿತರಣೆಗೆ ಬಿಳಿಜೋಳವೇ ಸಿಗುತ್ತಿಲ್ಲ. ಇದರಿಂದ ಬೇರೆ ಜಿಲ್ಲೆಗಳ ಮೇಲೆ ಅವಲಂಬನೆಯಾಗಬೇಕಾಗಿದೆ.

ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ರಾಗಿ, ಉ-ಕ ಭಾಗದಲ್ಲಿ ಆಹಾರ ಧಾನ್ಯವಾಗಿ ಬಿಳಿಜೋಳ ವಿತರಣೆಗೆ ರಾಜ್ಯ ಸರಕಾರ ಆದೇಶಿಸಿದೆ. ಅದರಂತೆ ಅಂತ್ಯೋದಯ ಕಾರ್ಡ್ ಒಂದಕ್ಕೆ 20 ಕೆಜಿ ಹಾಗೂ ಬಿಪಿಎಲ್ ಕಾರ್ಡ್‌ಗೆ ಪ್ರತಿ ಸದಸ್ಯರಿಗೆ 2 ಕೆಜಿಯಂತೆ ಜೋಳ ವಿತರಣೆ ಮಾಡಲಾಗುತ್ತಿದೆ. ಆದರೆ ಪಡಿತರ ವ್ಯವಸ್ಥೆಯಲ್ಲಿ ಬಿಳಿಜೋಳ ಸಿಗದೆ ಗ್ರಾಮೀಣ ಭಾಗದ ಮಹಿಳೆಯರು ರೊಟ್ಟಿ ತಟ್ಟುವ ಸದ್ದು ಅಷ್ಟಾಗಿ ಕೇಳಿ ಬರುತ್ತಿಲ್ಲ. ಬಿಳಿಜೋಳ ಬೆಳೆಯುವ ಪ್ರದೇಶಗಳ ಪೈಕಿ ವಿಜಯಪುರ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಾಗಿ ಬಿಳಿಜೋಳ ಬೆಳೆಯಲಾಗುತ್ತಿತ್ತು. ಇಂದಿನ ದುಬಾರಿ ದಿನಗಳಲ್ಲಿ ಹೆಚ್ಚಿನ ಆದಾಯ ತರುವ ವಾಣಿಜ್ಯ ಬೆಳೆಗಳನ್ನು ಬೆಳೆಯುವುದು ಅನಿವಾರ್ಯವಾಗಿದೆ. ಹೀಗಾಗಿ ಸಹಜವಾಗಿಯೇ ರೈತರು ತೊಗರಿ, ಸೂರ್ಯಕಾಂತಿ, ಈರುಳ್ಳಿ, ದ್ರಾಕ್ಷಿ, ದಾಳಿಂಬೆ, ನಿಂಬೆ, ಕಬ್ಬು, ಹತ್ತಿ ಮತ್ತಿತರ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಜೋಳಕ್ಕೆ ಹೋಲಿಸಿದರೆ ಇತರ ಬೆಳೆಗಳಿಗೆ ಬೇಕಾಗುವ ಕಾರ್ಮಿಕರಿಗಿಂತ ಹೆಚ್ಚಿಗೆ ಬೇಕು. ಜೋಳದ ಕೆಲಸಕ್ಕೆ ಕಾರ್ಮಿಕರ ಕೊರತೆ ಕಾಡುತ್ತಿದೆ.

ಈ ಸಮಸ್ಯೆಗಳಿಂದ ಬಹುತೇಕ ರೈತರು ಜೋಳ ಬೆಳೆಯಲು ಹಿಂದೇಟು ಹಾಕುತ್ತಿದ್ದಾರೆ. ದನಕರುಗಳು ಇರುವ ರೈತರು ಅನಿವಾರ್ಯವಾಗಿ ಅಲ್ಪಸ್ವಲ್ಪ ಬಿಳಿಜೋಳ ಬೆಳೆಯುತ್ತಾರೆ. ಇನ್ನೂ ಬೆಂಬಲ ಬೆಲೆ ಯೋಜನೆಯಡಿ ಕ್ವಿಂಟಾಲ್‌ಗೆ 2,787 ರೂ. ಯಂತೆ ಸರಕಾರದ ಆದೇಶದನ್ವಯ ಖರೀದಿಸಬೇಕಾಗುತ್ತದೆ. ಆದರೆ ಮುಕ್ತ ಮಾರುಕಟ್ಟೆಯಲ್ಲಿ ಕ್ವಿಂಟಾಲ್‌ಗೆ 4ರಿಂದ 5 ಸಾವಿರ ರೂ. ದರ ಇದೆ. ಇದರಿಂದ ರೈತರು ಖರೀದಿಸುವುದು ಕಷ್ಟ ಎಂಬ ಮಾತು ರೈತವಲಯದಿಂದ ಕೇಳಿಬರುತ್ತಿದೆ. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಅತಿ ಹೆಚ್ಚು ಬಿಳಿಜೋಳ ಬೆಳೆಯುತ್ತಾರೆ. ಅದರಲ್ಲಿ ವಿಜಯಪುರ ಜಿಲ್ಲೆ ಅಗ್ರ ಸ್ಥಾನದಲ್ಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ಧಾರವಾಡ ಭಾಗದಲ್ಲಿಯೂ ಬಿಳಿಜೋಳ ಬೆಳೆಯುತ್ತಾರೆ. 2020-21ರಲ್ಲಿ ರಾಜ್ಯದಲ್ಲಿ ಒಟ್ಟು 9.36 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿಳಿಜೋಳ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ 6.68 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ಮಾಡಲಾಗಿತ್ತು. ವಿಜಯಪುರ ಜಿಲ್ಲೆಯೊಂದರಲ್ಲಿಯೇ 1.28 ಲಕ್ಷ ಹೆಕ್ಟೇರ್‌ನಲ್ಲಿ ಬಿಳಿಜೋಳ ಬಿತ್ತನೆ ಮಾಡಲಾಗಿತ್ತು. ಕಳೆದ 2021-22ರ ಹಿಂಗಾರಿನಲ್ಲಿ 44,076 ಸಾವಿರ ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆ ಮಾಡಲಾಗಿತ್ತು. ಹೀಗಾಗಿ ರಾಜ್ಯದಲ್ಲಿ ಬಿಳಿಜೋಳ ಬಿತ್ತನೆ ಕ್ಷೇತ್ರ ಪ್ರತಿವರ್ಷವೂ ಇಳಿಮುಖವಾಗುತ್ತಿದ್ದು, ಇದರಿಂದಾಗಿ ಜೋಳದ ದರ ಇದೀಗ ಗಗನಕ್ಕೇರಿದೆ. ಜನ ಸಾಮಾನ್ಯರು ಬಿಳಿಜೋಳ ಖರೀದಿಸಲು ಕಿಸೆ ನೋಡಿಕೊಳ್ಳುವಂತಾಗಿದೆ.

 ಬಿಳಿಜೋಳ ‘ಮಾಲ್ದಂಡಿ’ ಸಿಗದ ಹಿನ್ನೆಲೆಯಲ್ಲಿ ಹೈಬ್ರಿಡ್ ಬಿಳಿಜೋಳ ಖರೀದಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಮುಂದಾಗಿದೆ. ರಾಜ್ಯದ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಪ್ರತಿ ತಿಂಗಳು 3.29 ಲಕ್ಷ ಕ್ವಿಂಟಾಲ್ ಜೋಳ ಪಡಿತರದಲ್ಲಿ ವಿತರಣೆ ಮಾಡಲಾಗುತ್ತದೆ. ಅದರಲ್ಲಿ ಬಾಗಲಕೋಟೆ 33,031.22 ಕ್ವಿಂಟಾಲ್, ಬಳ್ಳಾರಿ 28,980.04, ವಿಜಯಪುರ 37,207.12, ಧಾರವಾಡ 28,826.68, ಗದಗ 19,421.50, ಕಲಬುರಗಿ 41,447.34, ಹಾವೇರಿ 31,907.62, ಬೀದರ್ 27,165.48, ಕೊಪ್ಪಳ 26,125.64, ರಾಯಚೂರು 35,125.40, ಯಾದಗಿರಿ 20,466.58 ಕ್ವಿಂಟಾಲ್ ಸೇರಿದಂತೆ ರಾಜ್ಯದಲ್ಲಿ ಒಟ್ಟು 3,29,704.62 ಕ್ವಿಂಟಾಲ್ ಜೂನ್ ತಿಂಗಳ ಪಡಿತರದಲ್ಲಿ ವಿತರಿಸಲಾಗಿದೆ. ಆದರೆ ಜೋಳ ಬೆಳೆಯುವ ಜಿಲ್ಲೆಗಳಲ್ಲಿಯೇ ಜೋಳದ ಕೊರತೆಯಾಗಿರುವುದರಿಂದ ಅನ್ಯ ಜಿಲ್ಲೆಗಳಾದ ಬಳ್ಳಾರಿ, ರಾಯಚೂರಿನಿಂದ ಹೈಬ್ರಿಡ್ ಜೋಳ ಖರೀದಿ ಮಾಡಿ ವಿತರಿಸಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಮಾಹಿತಿ ಒದಗಿಸಿದೆ.

ಮುಕ್ತ ಮಾರುಕಟ್ಟೆಯಲ್ಲಿ ಬಿಳಿಜೋಳದ ದರ ಹೆಚ್ಚಿ ರುವುದರಿಂದ ರೈತರು ಬೆಂಬಲ ಬೆಲೆ ಯೋಜನೆಯಡಿ ಮಾರಾಟ ಮಾಡಲು ಹಿಂದೇಟು ಹಾಕಿದ ಹಿನ್ನೆಲೆ ಬಿಳಿಜೋಳದ ಕೊರತೆಯಾಗಿದೆ. ಜೂನ್-ಜುಲೈ ಎರಡು ತಿಂಗಳು ಪಡಿತರದಲ್ಲಿ ಜೋಳ ವಿತರಣೆಗೆ ಬಳ್ಳಾರಿ ಹಾಗೂ ರಾಯಚೂರಿನಿಂದ ಖರೀದಿಸಲಾಗಿದೆ. ಸದ್ಯಕ್ಕೆ ಬಿಳಿಜೋಳ ಸಿಗದಿರುವುದರಿಂದ ಹೈಬ್ರಿಡ್ ಜೋಳ ಖರೀದಿಸಿ ವಿತರಣೆ ಮಾಡಲಾಗುತ್ತಿದೆ.

share
- ಆಸಿಫ್ ಬಾಗವಾನ (ವಿಜಯಪುರ)
- ಆಸಿಫ್ ಬಾಗವಾನ (ವಿಜಯಪುರ)
Next Story
X