Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು...

ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಯಾವುದೇ ದರಪಟ್ಟಿ ಆಹ್ವಾನಿಸಿಲ್ಲ: ಆರ್‌ಟಿಐ ದಾಖಲೆಗಳಿಂದ ಬಹಿರಂಗ

ಸಚಿವ ಬಿ.ಸಿ.ನಾಗೇಶ್ ಜಾಲತಾಣ ನಿರ್ವಹಣೆಗೆ ಲಕ್ಷಾಂತರ ರೂ. ಖರ್ಚು ವಿಚಾರ

ಜಿ.ಮಹಾಂತೇಶ್ಜಿ.ಮಹಾಂತೇಶ್27 July 2022 8:26 AM IST
share
ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಯಾವುದೇ ದರಪಟ್ಟಿ ಆಹ್ವಾನಿಸಿಲ್ಲ: ಆರ್‌ಟಿಐ ದಾಖಲೆಗಳಿಂದ ಬಹಿರಂಗ

ಬೆಂಗಳೂರು, ಜು.27: ಸಚಿವ ಬಿ.ಸಿ.ನಾಗೇಶ್ ಅವರ ಫೇಸ್‌ಬುಕ್, ಟ್ವಿಟರ್, ಯೂಟ್ಯೂಬ್ ಸೇರಿದಂತೆ ಇನ್ನಿತರ ಸಾಮಾಜಿಕ ಜಾಲತಾಣ ನಿರ್ವಹಣೆ ಸಂಬಂಧ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಯಾವುದೇ ದರ ಪಟ್ಟಿಯನ್ನು ಆಹ್ವಾನಿಸಿರಲಿಲ್ಲ.

ಯಾವುದೇ ಅನುದಾನ ನಿಗದಿಪಡಿಸದಿದ್ದರೂ ಇದೇ ಮೊದಲ ಬಾರಿಗೆ ಲಕ್ಷಾಂತರ ರೂಪಾಯಿಗಳನ್ನು ಸಚಿವ ಬಿ.ಸಿ.ನಾಗೇಶ್ ಅವರ ಸಾಮಾಜಿಕ ಜಾಲತಾಣಕ್ಕೆ ವೆಚ್ಚ ಮಾಡಿರುವ ಬೆನ್ನಲ್ಲೇ ದರಪಟ್ಟಿಯನ್ನೂ ಆಹ್ವಾನಿಸದೇ ಪೂರ್ವ ನಿರ್ಧರಿತ ನಿರ್ದಿಷ್ಟ ಕಂಪೆನಿಗೇ ವಹಿಸಲಾಗಿತ್ತು ಎಂಬುದು ಆರ್‌ಟಿಐ ದಾಖಲೆಗಳಿಂದ ಬಹಿರಂಗವಾಗಿದೆ. ಈ ಸಂಬಂಧ 'the-file.in' ಆರ್‌ಟಿಐ ಅಡಿಯಲ್ಲಿ ಸಮಗ್ರ ದಾಖಲೆಗಳನ್ನು ಪಡೆದುಕೊಂಡಿದೆ.

ಸಚಿವ ಬಿ.ಸಿ.ನಾಗೇಶ್ ಅವರ ದೈನಂದಿನ ಸರಕಾರಿ ಕೆಲಸ ಕಾರ್ಯಗಳನ್ನು ಸಾರ್ವಜನಿಕರಿಗೆ ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ ಟ್ವಿಟರ್, ಯೂಟ್ಯೂಬ್, ಫೇಸ್‌ಬುಕ್ ಹಾಗೂ ಇನ್ನಿತರ ಸಾಮಾಜಿಕ ಜಾಲತಾಣಗಳ ನಿರ್ವಹಣೆಗೆ ಉನ್ನತಮಟ್ಟದ ಏಜೆನ್ಸಿ ನೇಮಿಸಬೇಕು ಎಂದು ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್.ರವಿ ಅವರು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ 2021ರ ಅಕ್ಟೋಬರ್ 1ರಂದು ಟಿಪ್ಪಣಿಯಲ್ಲಿ ಕೋರಿದ್ದರು ಎಂಬುದು ಆರ್‌ಟಿಐ ದಾಖಲೆಯಿಂದ ತಿಳಿದುಬಂದಿದೆ.

ಈ ಟಿಪ್ಪಣಿಯನ್ನು ಪರಿಶೀಲಿಸಿದ್ದ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೂರು ತಿಂಗಳ ಅವಧಿಯವರೆಗೆ ಖಾಸಗಿ ಸಂಸ್ಥೆಯನ್ನು ಗುರುತಿಸುವ ಸಂಬಂಧ ದರಪಟ್ಟಿ ಆಹ್ವಾನಿಸಬೇಕು ಎಂದು ಕಡತ ಮಂಡಿಸಿತ್ತು.

ಉಲ್ಲೇಖಿತ ಟಿಪ್ಪಣಿಯಲ್ಲಿ ತಿಳಿಸಿರುವಂತೆ ಪ್ರಾಥಮಿಕ, ಪ್ರೌಢ ಮತ್ತು ಸಕಾಲ ಸಚಿವರ ಟ್ವಿಟರ್, ಯೂಟ್ಯೂಬ್, ಫೇಸ್‌ಬುಕ್ ಹಾಗೂ ಇನ್ನಿತರ ಸಾಮಾಜಿಕ ಜಾಲತಾಣಗಳ ನಿರ್ವಹಣೆಗೆ ಖಾಸಗಿ ಸಂಸ್ಥೆಯನ್ನು ಗುರುತಿಸುವ ಸಂಬಂಧ ಪ್ರಾಥಮಿಕ ಹಂತವಾಗಿ ಮೂರು ತಿಂಗಳ ಅವಧಿಯ ಕಾರ್ಯನಿರ್ವಹಣೆಗಾಗಿ ದರಪಟ್ಟಿ ಆಹ್ವಾನಿಸಿ ಅರ್ಹ ಸಂಸ್ಥೆಯನ್ನು ಗುರುತಿಸಬಹುದು ಎಂದು ಸಚಿವರ ಅನುಮೋದನೆಗೆ ಮಂಡಳಿಯು ಕಡತವನ್ನು ಮಂಡಿಸಿತ್ತು ಎಂಬುದು ದಾಖಲೆಯಿಂದ ಗೊತ್ತಾಗಿದೆ.

ಆದರೆ, ಆರ್‌ಟಿಐ ಅಡಿಯಲ್ಲಿ ನೀಡಿರುವ ಸಮಗ್ರ ಕಡತದಲ್ಲಿ ದರಪಟ್ಟಿ ಆಹ್ವಾನಿಸಿರುವ ಬಗ್ಗೆ ಯಾವುದೇ ದಾಖಲೆಗಳಿಲ್ಲ. ಇಂತಹ ಸೇವೆ ನೀಡುವ ಸಂಸ್ಥೆಗಳನ್ನು ಪರಿಶೀಲಿ
ಸಲಾಗಿದೆ ಎಂದು ಮಂಡಳಿಯು ಟಿಪ್ಪಣಿ ಹಾಳೆಗಳಲ್ಲಿ ಉಲ್ಲೇಖಿಸಿದೆಯಾದರೂ ಯಾವ್ಯಾವ ಸಂಸ್ಥೆಗಳಿಂದ ದರಪಟ್ಟಿ ಆಹ್ವಾನಿಸಿದೆ, ದರಪಟ್ಟಿಯಲ್ಲಿ ಎಷ್ಟು ಮೊತ್ತವನ್ನು ನಮೂದಿಸಲಾಗಿದೆ ಎಂಬ  ಬಗ್ಗೆ ಯಾವುದೇ ವಿವರಗಳಿಲ್ಲ.  ಬದಲಿಗೆ ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಪಿ-ಪೋಲ್ ಅನಾಲಿಟಿಕ್ಸ್ ಕಂಪೆನಿಯಿಂದಲೇ ನೇರವಾಗಿ ತಾಂತ್ರಿಕ ಹಾಗೂ ಆರ್ಥಿಕ ಪ್ರಸ್ತಾವವನ್ನು ಪಡೆದಿತ್ತು ಎಂಬುದು ದಾಖಲೆಯಿಂದ ತಿಳಿದು ಬಂದಿದೆ.

 ಅದರಂತೆ ಪಿ-ಪೋಲ್ ಅನಾಲಿಟಿಕ್ಸ್ ಕಂಪೆನಿಯು ಸಲ್ಲಿಸಿದ್ದ ತಾಂತ್ರಿಕ ಮತ್ತು ಆರ್ಥಿಕ ಪ್ರಸ್ತಾವವನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2021ರ ಅಕ್ಟೋಬರ್ 18ರಂದು ಅನುಮೋದಿಸಿತ್ತು. ಪ್ರತಿ ತಿಂಗಳು 94,400 ರೂ. ಲೆಕ್ಕಾಚಾರದಂತೆ ಮೂರು ತಿಂಗಳ ಅವಧಿಗೆ ಎಲ್ಲ ತೆರಿಗೆಗಳನ್ನೂ ಒಳಗೊಂಡಂತೆ 2,83,200 ರೂ. ನಮೂದಿಸಿತ್ತು ಎಂಬುದು ಗೊತ್ತಾಗಿದೆ.
ಇದು 5 ಲಕ್ಷ ರೂ.ಗಿಂತ ಕಡಿಮೆ ಇದ್ದುದ್ದರಿಂದ ದರಪಟ್ಟಿ ಆಹ್ವಾನ ಪ್ರಕ್ರಿಯೆ ಮೂಲಕ ಸಚಿವರ ಸಾಮಾಜಿಕ ಜಾಲತಾಣಗಳ ನಿರ್ವಹಣೆಗೆ ಖಾಸಗಿ ಏಜೆನ್ಸಿಯನ್ನು ನೇಮಿಸಬೇಕು ಎಂದು ಟಿಪ್ಪಣಿ ಹಾಳೆಯಲ್ಲಿ ನಮೂದಿಸಲಾಗಿದೆ. ಇದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಗಮನದಲ್ಲಿತ್ತು ಎಂಬುದು ಟಿಪ್ಪಣಿ ಹಾಳೆಯಿಂದ ತಿಳಿದು ಬಂದಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X