Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜಕೀಯ ಪ್ರೇರಿತ ಕೊಲೆಗಳಿಂದ ಹೆತ್ತವರಿಗೆ...

ರಾಜಕೀಯ ಪ್ರೇರಿತ ಕೊಲೆಗಳಿಂದ ಹೆತ್ತವರಿಗೆ ಸಿಕ್ಕಿದ್ದು ಶವ ಮಾತ್ರ: ಮಿಥುನ್ ರೈ

ವಾರ್ತಾಭಾರತಿವಾರ್ತಾಭಾರತಿ27 July 2022 5:22 PM IST
share
ರಾಜಕೀಯ ಪ್ರೇರಿತ ಕೊಲೆಗಳಿಂದ ಹೆತ್ತವರಿಗೆ ಸಿಕ್ಕಿದ್ದು ಶವ ಮಾತ್ರ: ಮಿಥುನ್ ರೈ

ಮಂಗಳೂರು, ಜು.27: ಕೋಮು ದ್ವೇಷದಿಂದ ನಡೆದ ಸುರತ್ಕಲ್‌ನ ಉದಯ ಪೂಜಾರಿ, ಮಸೂದ್ ಹತ್ಯೆ ಹಾಗೂ ಪ್ರವೀಣ್ ನೆಟ್ಟಾರುವರೆಗಿನ ಹತ್ಯೆಯು ಅವರ ಹೆತ್ತವರಿಗೆ ಸಿಕ್ಕಿದ್ದು ಶವ ಮಾತ್ರ. ಈ ಬಗ್ಗೆ ಯುವಜನತೆ ಎಚ್ಚೆತ್ತುಕೊಳ್ಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು ಬೆಳ್ಳಾರೆಯಲ್ಲಿ ನಿನ್ನೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ದೊರೆಯಲಿ ಎಂದರು. ಮಸೂದ್ ಮತ್ತು ಪ್ರವೀಣ್ ಕುಟುಂಬಕ್ಕೆ ಗರಿಷ್ಠ ಮಟ್ಟದ ಪರಿಹಾರ ನೀಡಬೇಕು. ಜಿಲ್ಲೆಯ ಜನತೆ ಶಾಂತಿಯನ್ನು ಕಾಪಾಡಿಕೊಂಡು ಮುಂದೆ ಇಂತಹ ಘಟನೆ ಆಗದಂತೆ ಸೌಹಾರ್ದತೆ ಕಾಪಾಡಬೇಕು ಎಂದು ಮಿಥುನ್ ರೈ ಹೇಳಿದರು.

ರಾಜಕಾರಣಿಗಳ ಪ್ರಚೋದನೆಯ ಮಾತುಗಳಿಂದ ಪ್ರೇರಿತರಾಗಿ ದ್ವೇಷದಿಂದ ನಡೆಯುವ ಯುವಕರ ಕೊಲೆಗಳಿಂದ ಅಧಿಕಾರಕ್ಕೆ ಬಂದ ಶಾಸಕರು, ಮಂತ್ರಿಯಾದವರು ಬಳಿಕ ಬಲಿ ಪಡೆದವರ ಮನೆಯವರ ನೋವನ್ನು ಆಲಿಸುವುದಿಲ್ಲ. ಇಂತಹ ಸಂದರ್ಭದಲ್ಲಿ ಇವರ ಕಪಟ ಹಿಂದುತ್ವ ಎಲ್ಲಿ ಹೋಗುತ್ತದೆ ಎಂದು ಮಿಥುನ್ ರೈ ಪ್ರಶ್ನಿಸಿದರು.

ಯುವಕರು ಇಂತಹ ಕೋಮು ದ್ವೇಷಕ್ಕೆ ಪ್ರೇರಿತರಾಗದೆ, ಸ್ವಾಭಿಮಾನದಿಂದ ಬದುಕು ಕಟ್ಟುವ ಕೆಲಸ ಮಾಡಬೇಕು. ಯಾರದೋ ಮಾತಿನಿಂದ ಪ್ರೇರಣೆ ಪಡೆದು ಹೆತ್ತವರ ಕಣ್ಣೀರು ಹಾಕುವ ಕೆಲಸ ಮಾಡಬಾರದು. ಜಿಲ್ಲೆಯಲ್ಲಿ ಈವರೆಗೂ ಕೋಮು ಗಲಭೆಯಿಂದ ಮೃತುಪಟ್ಟವರ ಕುಟುಂಬಕ್ಕೆ ಆದ ದು:ಖ ಅವರಿಗೆ ಮಾತ್ರ ಗೊತ್ತು. ಯಾರೇ ಅಧಿಕಾರದಲ್ಲಿದ್ದರೂ ಈ ರೀತಿ ಹಲ್ಲೆ, ಕೊಲೆಯಂತಹ ಕೃತ್ಯ ಮಾಡಿ ರಾಜಕೀಯ ಮಾಡಬಾರದು. ಯುವಕರನ್ನು ಉಪಯೋಗಿಸಿಕೊಂಡು ರಾಜಕೀಯ ಮಾಡುವ ರಾಜಕಾರಣಿಗಳಿಗೆ ಯುವಕರು ಸರಿಯಾದ ಉತ್ತರ ನೀಡಬೇಕು ಎಂದು ಅವರು ಹೇಳಿದರು.

ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗಳನ್ನು ಆದಷ್ಟು ಬೇಗ ಪತ್ತೆ ಹಚ್ಚಿ ಕಾನೂನಿನಡಿ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ  ಮಮತಾ ಗಟ್ಟಿ ಮಾತನಾಡಿ, ಸಮಾಜ ಘಾತುಕ ಶಕ್ತಿಗಳಿಗೆ, ಕೊಲೆಗಡುಕರಿಗೆ ಸರಕಾರದ ಭಯವೇ ಇಲ್ಲವಾಗಿದೆ. ಒಂದೆಡೆ ಈ ಬಿಜೆಪಿ ಸರಕಾರದಲ್ಲಿ ಜನಸಾಮಾನ್ಯರಿಗೆ ನೆಮ್ಮದಿಯಿಲ್ಲ. ಈ ರೀತಿ ಅಮಾಯಕರನ್ನು ಕೊಲೆ ಮಾಡುವಂತವರಿಗೆ ಸರಕಾರ ಕಾನೂನಿನ ಭಯ ಮುಟ್ಟಿಸುತ್ತಿಲ್ಲ. ಪೊಲೀಸ್ ಇಲಾಖೆ ಮೌನ ವಹಿಸಿದೆ ಎಂದರು.

ಮಸೂದ್, ಪ್ರವೀಣ್ ಹತ್ಯೆಯ ಸಂದರ್ಭ ಹರಿದಿದ್ದು ಕೆಂಪು ರಕ್ತ, ಇಬ್ಬರ ಹೆತ್ತವರ ನೋವು ಒಂದೇ ಆಗಿದೆ. ಅಧಿಕಾರಕ್ಕೆ ಬರುವಾಗ ಧರ್ಮಗಳನ್ನು ಎತ್ತಿಕಟ್ಟಿ ಪ್ರಚಾರ ಮಾಡುವ ರಾಜಕಾರಣಿಗಳಿಂದ ಬಡವರ ಮಕ್ಕಳು ಬಲಿಪಶುಗಳಾಗುತ್ತಾರೆ. ಹತ್ಯೆಯಾದ ಪ್ರವೀಣ್ ಮನೆಯಲ್ಲಿನ ಕಂಡ ಕೂಗು, ಆಕ್ರಂದನ ಅವರ ಸ್ನೇಹಿತರು, ಕುಟುಂಬಸ್ಥರು ಹೇಳುವ ಮಾತು ನೋವಿನ ವಿಚಾರ. ಸಂಬಂಧಪಟ್ಟ ಜನಪ್ರತಿನಿಧಿಗಳು ಮೌನ ವಹಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಯುವಜನರಿಗೆ ಸೌಹಾರ್ದತೆಯ ಸಂದೇಶವನ್ನು ಯಾಕೆ ಅವರು ನೀಡುತ್ತಿಲ್ಲ ಎಂದು ಪ್ರಶ್ನಿಸಿದ ಮಮತಾ ಗಟ್ಟಿ,  ಜಿಲ್ಲೆಯಲ್ಲಿ ಕೋಮು ವಿಷ ಬೀಜ ಬಿತ್ತುವುದರಿಂದ ಅಭಿವೃದ್ಧಿಗೆ ಮಾರಕವಾಗುತ್ತಿದೆ ಎಂದರು.

ಗೋಷ್ಠಿಯಲ್ಲಿ ಮುಖಂಡರಾದ ಅನಿಲ್ ಕುಮಾರ್, ಅಪ್ಪಿ, ಸಂತೋಷ್ ಶೆಟ್ಟಿ, ಮಲ್ಲಿಕಾ, ಶುಭೋದಯ ಆಳ್ವ, ಸವಾದ್ ಸುಳ್ಯ, ಶಾಂತಲಾ ಗಟ್ಟಿ, ಸುಭಾಶ್ಚಂದ್ರ ಶೆಟ್ಟಿ, ಚಂದ್ರಕಲಾ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X