ನಿಟ್ಟೂರು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ/ಚಿಕ್ಕಿ ವಿತರಣೆ
![ನಿಟ್ಟೂರು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ/ಚಿಕ್ಕಿ ವಿತರಣೆ ನಿಟ್ಟೂರು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ/ಚಿಕ್ಕಿ ವಿತರಣೆ](https://www.varthabharati.in/sites/default/files/images/articles/2022/07/27/343819-1658924181.jpg)
ಉಡುಪಿ : ರಾಜ್ಯ ಸರಕಾರದ ಸೂಚನೆಯಂತೆ ಇಲ್ಲಿನ ನಿಟ್ಟೂರು ಪ್ರೌಢಶಾಲೆಯಲ್ಲಿ ಇಂದಿನಿಂದ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ/ ಶೇಂಗಾ ಚುಕ್ಕಿ/ ಬಾಳೆಹಣ್ಣು ವಿತರಿಸಲಾಗುತ್ತಿದೆ.
ಈ ಕಾರ್ಯಕ್ರಮಕ್ಕೆ ನಿಟ್ಟೂರು ಎಜುಕೇಶನಲ್ ಸೊಸೈಟಿಯ ಜೊತೆ ಕಾರ್ಯದರ್ಶಿ ದಿನೇಶ್ ಪಿ. ಪೂಜಾರಿ ಚಾಲನೆ ನೀಡಿದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಅನಸೂಯ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕ -ರಕ್ಷಕ ಸಂಘದ ಸಂಯೋಜಕ ರಾಮದಾಸ ನಾಯ್ಕ್ ಮತ್ತು ಪದಾಧಿಕಾರಿಗಳು, ಶಾಲೆಯ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Next Story