ನಾನು ಕಿಂಗ್ ಅಲ್ಲ, ಕಿಂಗ್ ಮೇಕರ್: ಬಸವ ಜಯ ಮೃತ್ಯುಂಜಯ ಶ್ರೀ
ಪಂಚಮಸಾಲಿ ಮೀಸಲಾತಿ ಹೋರಾಟ ವಿಚಾರ

ಹುಬ್ಬಳಿ, ಜು.27: ನಾನು ಯಾವುದೇ ಕಾರಣಕ್ಕೂ ರಾಜಕಾರಣಕ್ಕೆ ಬರುವುದಿಲ್ಲ. ನಾನು ಕಿಂಗ್ ಮೇಕರ್ ಹೊರತು, ಕಿಂಗ್ ಆಗಲು ಇಷ್ಟಪಡುವುದಿಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ.
ಬುಧವಾರ ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮ ಗುರುಗಳಾದವರು ಎಲ್ಲರಿಗೂ ಆಶೀರ್ವಾದ ಮಾಡಬೇಕು. ರಾಜಕಾರಣ ಮಾಡುವುದು ಸರಿಯಲ್ಲ. ಹೀಗಾಗಿ, ರಾಜಕೀಯಕ್ಕೆ ಧುಮುಕುವುದಿಲ್ಲ ಎಂದು ಸ್ವಾಮೀಜಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡುವ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಈ ಹಿಂದೆ ಮಾತು ಕೊಟ್ಟಿದ್ದರು. ಆದರೇ, ಈವರೆಗೂ ಕೊಟ್ಟಮಾತಿನ ಹಾಗೇ ನಡೆದುಕೊಂಡಿಲ್ಲ. ಅಗಸ್ಟ್ 22 ರೊಳಗೆ ಸಮುದಾಯಕ್ಕೆ ಮೀಸಲಾತಿ ಕೊಡುವ ಭರವಸೆ ನೀಡಿದ್ದಾರೆ. ಇದನ್ನು ನೆನಪಿಸಲು ಜು.30ರಂದು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಅಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಪ್ರತಿಭಟನೆಗೆ 10 ಸಾವಿರಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಮೀಸಲಾತಿ ನೆನಪಿಸಲು ಜು.30ರಂದು ಪ್ರತಿಭಟನಾ ಮೆರವಣಿಗೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಷ್ಟ 22ರೊಳಗೆ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡುವ ಭರವಸೆ ನೀಡಿದ್ದಾರೆ. ಇದನ್ನು ನೆನಪಿಸಲು ಜು.30ರಂದು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ.







