Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರವೀಣ್ ಹತ್ಯೆ,ಇಬ್ಬರ ಬಂಧನ ಹಿನ್ನೆಲೆ;...

ಪ್ರವೀಣ್ ಹತ್ಯೆ,ಇಬ್ಬರ ಬಂಧನ ಹಿನ್ನೆಲೆ; ಇಂತಹ ಪ್ರಕರಣಗಳಿಗೆ ತಾರ್ಕಿಕ ಅಂತ್ಯಕ್ಕೆ ಎಲ್ಲಾ ಕ್ರಮ: ಸಚಿವ ಸುನಿಲ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ28 July 2022 4:39 PM IST
share
ಪ್ರವೀಣ್ ಹತ್ಯೆ,ಇಬ್ಬರ ಬಂಧನ ಹಿನ್ನೆಲೆ; ಇಂತಹ ಪ್ರಕರಣಗಳಿಗೆ ತಾರ್ಕಿಕ ಅಂತ್ಯಕ್ಕೆ ಎಲ್ಲಾ ಕ್ರಮ: ಸಚಿವ ಸುನಿಲ್ ಕುಮಾರ್

ಮಂಗಳೂರು, ಜು. 28: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸರಕಾರ ಕೈಕಟ್ಟಿ ಕುಳಿತಿಲ್ಲ. ಘಟನೆ ನಡೆದ 24 ಗಂಟೆಯಲ್ಲಿ ಎರಡು ಜನರ ಬಂಧನವಾಗಿದೆ. ತಪ್ಪಿತಸ್ಥರನ್ನು ಹೆಡೆಮುರಿ ಕಟ್ಟಿ, ಇದರ ಹಿಂದೆ ಮುಂದೆ ಯಾರಿದ್ದಾರೆ. ಇದಕ್ಕೆ ಹಣಕಾಸಿನ ನೆರವು ಯಾರು ನೀಡಿದ್ದಾರೆ ಎಂದು ಕಂಡು ಹಿಡಿದು ಎಲ್ಲರನ್ನೂ ಬಗ್ಗು ಬಡಿದು ಇಂತಹ ಪ್ರಕರಣಗಳಿಗೆ ತಾರ್ಕಿಕ ಅಂತ್ಯ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಮನೆಯ ಮಗ, ಪ್ರಾಮಾಣಿಕ ಕಾರ್ಯಕರ್ತನನ್ನು ಕಳೆದುಕೊಂಡಾಗ ಸಹಜವಾಗಿ ನೋವಾಗುತ್ತದೆ. ನಾವೆಲ್ಲಾ ಕಾರ್ಯಕರ್ತರಾಗಿ ಮಂತ್ರಿಯಾದವರು. ಕಾರ್ಯಕರ್ತರ ಭಾವನೆಗಳು, ನೋವು ಹಾಗೂ ಇದೇ ರೀತಿಯ ಹೋರಾಟಗಳಿಂದ ನಾವೆಲ್ಲಾ ಬಂದ ಕಾರಣ ಈ ಬಗ್ಗೆ ಅರಿವಿದೆ. ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಎಲ್ಲಾ ಆಲೋಚನೆಗಳನ್ನು ಮಾಡಲಾಗಿದೆ. ಕಾನೂನಿನ ಚೌಕಟ್ಟು, ಸಂವಿಧಾನದ ಚೌಕಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದರು.

ನಿನ್ನೆಯಿಂದಲೇ ಈ ಬಗ್ಗೆ ಅಧಿಕಾರಿಗಳ ಜತೆ ಮಾತನಾಡಿ ನಮಗಿರುವ ಮಾಹಿತಿಗಳನ್ನು ಹಂಚಿಕೊಂಡಿದ್ದೇವೆ. ಪೊಲೀಸರು 24 ಗಂಟೆಯಲ್ಲಿ ಇಬ್ಬರನ್ನು ಬಂಧಿಸಿದ್ದಲ್ಲದೇ  ಕೆಲ ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ತನಿಖೆಗೆ ಮುಕ್ತವಾದ ಅವಕಾಶ ನೀಡಲಾಗಿದೆ. ಇದೇ ರೀತಿ ತನಿಖೆಯಾಗಬೇಕು, ಇಂತಹವರೇ ಆರೋಪಿಗಳ ಬಂಧನವಾಗಬೇಕು ಎಂದು ಸರಕಾರ ಎಲ್ಲೂ ಮೂಗು ತೂರಿಸಿಲ್ಲ. ರಾಜ್ಯದಲ್ಲಿ ಇನ್ನು ಮುಂದೆ ಈ ರೀತಿಯ ಪುಂಡಾಟಿಕೆ ನಡೆಯದಂತೆ ತಾರ್ಕಿಕ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಪೊಲೀಸರಿಗೆ ತಿಳಿಸಲಾಗಿದೆ. ಯಾವ ಪಿಎಫ್‌ಐ ಸಂಘಟನೆ ಗಲಭೆಯೇ ನಮ್ಮ ಚಟುವಟಿಕೆ ಅಂದುಕೊಂಡಿದ್ದಾರೋ ಅಂತಹ ಮಾನಸಿಕತೆಯನ್ನು ಹತ್ತಿಕ್ಕಲು ಎಲ್ಲಾ ಸಿದ್ಧತೆ ಮಾಡುವಂತೆ ಪೊಲೀಸ್ ಇಲಾಖೆಯ ಮೇಲಾಧಿಕಾರಿಗಳಿಗೆ ತಿಳಿಸಲಾಗಿದೆ. ಆ ನಿಟ್ಟಿನಲ್ಲಿ ನಾವೆಲ್ಲಾ ಕಾರ್ಯನಿರತರಾಗಿದ್ದೇವೆ ಎಂದು ಅವರು ಹೇಳಿದರು.

ನಿನ್ನೆ ಅಂತ್ಯ ಸಂಸ್ಕಾರ ಸಂದರ್ಭದಲ್ಲಿ ಸಹಜವಾಗಿ ಜನಾಕ್ರೋಶ ನಿರ್ಮಾಣವಾಗಿದೆ. ಕಾರ್ಯಕರ್ತರ ಭಾವನೆಗಳನ್ನು ನಾನು ಗೌರವಿಸುತ್ತೇನೆ. ಆರೋಪಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ನಿರೀಕ್ಷೆಯನ್ನು ಜನ ಮತ್ತು ಕಾರ್ಯಕರ್ತರು ಬಯಸಿದ್ದಾರೆ. ಇಂದು ಅಂತಹ ಕೊಲೆಗಡುಕರನ್ನು ಅದೇ ರೀತಿಯ ಉತ್ತರ ನೀಡಬೇಕೆಂಬ ಆಕ್ರೋಶ ಜನಮಾನಸದಲ್ಲಿ ಬರುತ್ತಿದೆ. ಗಡಿ ಭಾಗದ ಜಿಲ್ಲೆ ಆಗಿರುವುದರಿಂದ ಕ್ರಮಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಪಿಎಫ್‌ಐ ಸಂಘಟನೆಯ ಹಿಂದಿನ ಘಟನೆಗಳ ಆರೋಪಿಗಳನ್ನು ಪತ್ತೆಹಚ್ಚಬೇಕು. ಅವರ ಹಿಂದಿನ ಶಂಕಿತರನ್ನು ಗಮನಿಸಬೇಕೆಂದು ಸೂಚಿಸಲಾಗಿದೆ. ನಮ್ಮ ಸರಕಾರದ ಮೇಲೆ ವಿಶ್ವಾಸ ಇಡಬೇಕಾಗಿದೆ. ಇದೇ ಬಿಜೆಪಿ ಸರಕಾರ ಡಿಜೆ ಹಳ್ಳಿ ಗಲಾಟೆಯನ್ನು ಹತ್ತಿಕ್ಕಿದೆ. ಇದೇ ಬಿಜೆಪಿ ಸರಕಾರ ಮಂಗಳೂರಿನ ಸಿಎಎ ಗಲಭೆಯನ್ನು ಹತ್ತಿಕ್ಕಿದ್ದು. ಇದೇ ಸರಕಾರ ಹುಬ್ಬಳ್ಳಿಯ ಘಟನೆಯಲ್ಲಿ 24 ಗಂಟೆಯಲ್ಲಿ ರಾಜಸ್ತಾನದಿಂದ ಆರೋಪಿಯನ್ನು ತಂದಿದ್ದು, ಇದೇ ಸರಕಾರ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿದ್ದು, ಮತಾಂತರ ನಿಷೇಧ ಕಾಯಿದೆ ಜಾರಿಗೆ ತಂದಿದ್ದು, ಇಂತಹ ಘಟನೆ ನಡೆದಾಗ ಇನ್ನಷ್ಟು ಉಗ್ರ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಾರ್ಯಕರ್ತರು ಬಯಸುತ್ತಾರೆ. ಅವರ ನಿರೀಕ್ಷೆಗಳನ್ನು ಮುಟ್ಟಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X