Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜೀನಾಮೆ ಬದಲು ಬೀದಿಗಳಿದು ಹೋರಾಡಿ:...

ರಾಜೀನಾಮೆ ಬದಲು ಬೀದಿಗಳಿದು ಹೋರಾಡಿ: ಬಿಜೆಪಿ ಕಾರ್ಯಕರ್ತರಿಗೆ ಸೊಗಡು ಶಿವಣ್ಣ ಕರೆ

ವಾರ್ತಾಭಾರತಿವಾರ್ತಾಭಾರತಿ28 July 2022 5:49 PM IST
share
ರಾಜೀನಾಮೆ ಬದಲು ಬೀದಿಗಳಿದು ಹೋರಾಡಿ: ಬಿಜೆಪಿ ಕಾರ್ಯಕರ್ತರಿಗೆ ಸೊಗಡು ಶಿವಣ್ಣ ಕರೆ

ತುಮಕೂರು.ಜು.28: ಬಿಜೆಪಿ ಕಾರ್ಯಕರ್ತರ ಕೊಲೆಯನ್ನು ಖಂಡಿಸಿ,ಪಕ್ಷದ ವಿವಿಧ ಹುದ್ದೆಗಳಿಗೆ ಕಾರ್ಯಕರ್ತರು ರಾಜೀನಾಮೆ ನೀಡುವ ಬದಲು ತುರ್ತು ಪರಿಸ್ಥಿತಿ ಸಂದರ್ಭದ ರೀತಿ, ಬೀದಿಗಿಳಿದು ಸರಕಾರದ ವಿರುದ್ದ ಹೋರಾಟ ನಡೆಸಬೇಕೆಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಸೊಗಡು ಶಿವಣ್ಣ ಕರೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಹೋರಾಟವೆಂಬುದು ಬಿಜೆಪಿಗೆ ಹೊಸದಲ್ಲ. ಈ ಹಿಂದೆ ತುರ್ತ ಪರಿಸ್ಥಿತಿ ಸಂದರ್ಭದಲ್ಲಿ ಜಯಪ್ರಕಾಶ್ ನಾರಾಯಣ್ ಅವರ ಮುದ್ವಾಳತ್ವದಲ್ಲಿ ಬೀದಿಗಿಳಿದು ಹೋರಾಟ ನಡೆಸಿ,ಜೈಲು ವಾಸ ಅನುಭವಿಸಿ,ದೇಶದ ಜನರಿಗೆ ವಾಕ್ ಸ್ವಾತಂತ್ರವನ್ನು ಉಳಿಸಿಕೊಟ್ಟಿದ್ದೇವೆ.ಅದೇ ರೀತಿ ಇಂದಿನ ಸಂದಭದಲ್ಲಿಯೂ ದೃತಿಗೇಡದೆ ಸರಕಾರದ ನಡವಳಿಕೆಗಳ ವಿರುದ್ದ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯ ಎಂದರು.

1947ರಲ್ಲಿಯೇ ಧರ್ಮದ ಆಧಾರದಲ್ಲಿ ಪಾಕಿಸ್ಥಾನ, ಭಾರತ ಎಂದು ವಿಭಜನೆಯಾಗಿದ್ದರೂ, ಭಾರತದಲ್ಲಿರುವ ಮುಸ್ಲಿಂರು ಇಲ್ಲಿನ ಹಿಂದೂಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಆ ಸಮುದಾಯದ ಧಾರ್ಮಿಕ ಮುಖಂಡರು ಬೀಡುತ್ತಿಲ್ಲ. ಬದಲಿಗೆ ದ್ವೇಷ ಬಿತ್ತಿ ನಮ್ಮ ಹಿಂದು ಯುವಕರನ್ನು ಎಲ್ಲೆಂದರಲ್ಲಿ ಕೊಚ್ಚಿ ಹಾಕುವಂತೆ ಪ್ರಚೋದಿಸುತ್ತಿದ್ದಾರೆ.ಸರಕಾರ ಇದನ್ನು ತಡೆಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.ಅಲ್ಲದೆ ಅಧಿಕಾರಿಗಳು ಸ್ವತಂತ್ರರಾಗಿ ನಿರ್ಣಯ ತೆಗೆದುಕೊಳ್ಳಲು ರಾಜಕಾರಣಿಗಳು ಅವಕಾಶ ನೀಡುತ್ತಿಲ್ಲ ಎಂದು ಸೊಗಡು ಶಿವಣ್ಣ ಆರೋಪಿಸಿದರು.

ಇಂದು ಎಲ್ಲಾ ಜನಪ್ರತಿನಿಧಿಗಳು ಧರ್ಮವನ್ನು ಬಿಟ್ಟು,ಜಾತಿಯ ಆಧಾರದಲ್ಲಿ ಒಂದಾಗಲು ಹೊರಟಿದ್ದಾರೆ.ಇದರ ಪರಿಣಾಮ ಹಿಂದು ಸಮಾಜ ದುರ್ಬಲವಾಗುತ್ತಿದೆ.ಹಿಂದು,ಮುಸ್ಲಿಂ ನಡುವೆ ದಂಗೆಯಾಗುವ ಸಾಧ್ಯತೆಯೇ ಹೆಚ್ಚು. ಜಾತಿಯ ಹೆಸರಿನಲ್ಲಿ ದೇಶವನ್ನು ಸಣ್ಣ ಸಣ್ಣ ತುಂಡುಗಳಾಗಿ ವಿಭಜಿಸಲಾಗುತ್ತಿದೆ.ಜಾತಿಯತೆ ನಿರ್ಮೂಲನೆ ಮಾಡದಿದ್ದರೆ ದೇಶಕ್ಕೆ ಉಳಿಗಾಲವಿಲ್ಲ ವೆಂದ ಅವರು,ಮುಸ್ಲಿಂರು ಹಿಂದುಗಳ ವಿರುದ್ದ ಆಘೋಚರ ಯುದ್ದ ಸಾರಿದ್ದಾರೆ.ಇದರ ಪರಿಣಾಮವಾಗಿ 2018 ರಿಂದ ಇಂದಿನ ವರೆಗೆ 35-40 ಜನ ಹಿಂದೂ ಯುವಕರು ಕರಾವಳಿ ಭಾಗದಲ್ಲಿ ಭರ್ಬರವಾಗಿ ಹತ್ಯೆಯಾಗಿದ್ದಾರೆ. ಇದರ ವಿರುದ್ದ ಗಾಂಧೀ ಮಾರ್ಗ ಇಲ್ಲವೇ, ನೇತಾಜಿ ಮಾರ್ಗ ಎರಡರೊಳಗೆ ಒಂದನ್ನು ಹಿಡಿದು ಹೋರಾಟ ಮಾಡದೇ ವಿಧಿಯಿಲ್ಲ ಎಂದರು.

ಕರಾವಳಿ ಭಾಗದಲ್ಲಿ ನಡೆದಿರುವ ಹತ್ಯೆಗಳ ಕುರಿತು ಸರಕಾರ ತನ್ನ ಗುಪ್ತಚರ ಇಲಾಖೆಯ ಮೂಲಕ ಕಂಡು ಹಿಡಿದು ಅವರನ್ನು ತಾಲಿಬಾನ್ ರೀತಿಯಲ್ಲಿ ಸಾರ್ವಜನಿಕವಾಗಿ ನೇಣು ಹಾಕಬೇಕು. ಮುಸ್ಲಿಮರಿಗೆ ಈ ದೇಶದಲ್ಲಿ ಯಾವುದೇ ಹಕ್ಕಿಲ್ಲ. 1947ರಲ್ಲಿಯೇ ಪೂರ್ವ ಪಾಕಿಸ್ಥಾನ ಮತ್ತು ಪಶ್ಚಿಮ ಪಾಕಿಸ್ಥಾನ ಸ್ಥಾಪನೆಯಾದಾಗಲೇ ಕಳೆದುಕೊಂಡಿದ್ದಾರೆ ಎಂದ ಅವರು, ಮುಖ್ಯಮಂತ್ರಿಗಳಾಗಲಿ,ಪಕ್ಷದ ರಾಜಾಧ್ಯಕ್ಷನಾಗಲಿ ಇಂತಹ ಘಟನೆಗಳ ಕುರಿತು ಮಾತನಾಡುವಾಗ ಎಚ್ಚರಿಕೆ ವಹಿಸಬೇಕು ಎಂದು ಸೊಗಡು ಶಿವಣ್ಣ ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X