ರಾಜ್ಯಾದ್ಯಂತ 1,889 ಕೊರೋನ ದೃಢ, ಮೂವರು ಮೃತ್ಯು

ಬೆಂಗಳೂರು, ಜು.28: ರಾಜ್ಯದಲ್ಲಿ ಗುರುವಾರ 1,889 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಮೂವರು ಮೃತಪಟ್ಟಿದ್ದು, 1,587 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 40,016,55ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,097ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 9,135ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
ಮೂವರ ಸಾವು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಬೆಳಗಾವಿ 1, ದಕ್ಷಿಣಕನ್ನಡ 1, ದಾವಣಗೆರೆ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,889 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 38, ಬಳ್ಳಾರಿ 26, ಬೆಳಗಾವಿ 20, ಬೆಂಗಳೂರು ಗ್ರಾಮಾಂತರ 5, ಬೆಂಗಳೂರುನಗರ 1475, ಬೀದರ್ 9, ಚಾಮರಾಜನಗರ 12, ಚಿಕ್ಕಬಳ್ಳಾಪುರ 13, ಚಿಕ್ಕಮಗಳೂರು 6, ಚಿತ್ರದುರ್ಗ 4, ದಕ್ಷಿಣಕನ್ನಡ 20, ದಾವಣಗೆರೆ 6, ಧಾರವಾಡ 46, ಗದಗ 1, ಹಾಸನ 17, ಹಾವೇರಿ 3, ಕಲಬುರಗಿ 24, ಕೊಡಗು 21, ಕೋಲಾರ 23, ಕೊಪ್ಪಳ 9, ಮಂಡ್ಯ 19, ಮೈಸೂರು 39, ರಾಯಚೂರು 9, ರಾಮನಗರ 1, ಶಿವಮೊಗ್ಗ 11, ತುಮಕೂರು 12, ಉಡುಪಿ 8, ಉತ್ತರಕನ್ನಡ 5, ವಿಜಯಪುರ ಜಿಲ್ಲೆಯಲ್ಲಿ ಏಳು ಪ್ರಕರಣ ಪತ್ತೆಯಾಗಿವೆ.
ರಾಜಧಾನಿಯಲ್ಲಿ 1,475 ಜನರಿಗೆ ಕೊರೋನ ದೃಢ
ರಾಜಧಾನಿಯಲ್ಲಿ ಗುರುವಾರದಂದು 1,475 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 1,288 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ನಗರದಲ್ಲಿ ಇಲ್ಲಿಯವರೆಗೆ ಒಟ್ಟು 18,31,957 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,973 ಜನರು ಸೋಂಕಿಗೆ ಬಲಿಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.







