ಮುಖ್ಯಮಂತ್ರಿ, ಗೃಹ ಸಚಿವರ ರಾಜೀನಾಮೆಗೆ ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋ ಆಗ್ರಹ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಉಡುಪಿ : ರಾಜ್ಯದಲ್ಲಿ ಇಷ್ಟೊಂದು ಅಮಾಯಕ ಯುವಕರು ಕೊಲೆಯಾಗುತ್ತಿದ್ದು ಇದಕ್ಕೆಲ್ಲಾ ಅಧಿಕಾರದಲ್ಲಿರುವ ಸರಕಾರದ ವೈಫಲ್ಯಗಳೇ ಕಾರಣವಾಗಿದೆ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಮಂತ್ರಿ ಅರಗ ಜ್ಞಾನೇಂದ್ರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಪ್ರವೀಣ್ ಪೂಜಾರಿ, ಉದಯ್ ಗಾಣಿಗ, ಹರ್ಷ, ಮಸೂದ್, ಪ್ರವೀಣ್ ನೆಟ್ಟಾರ್, ಫಾಝಿಲ್ ಸೇರಿದಂತೆ ಹಲವಾರು ಅಮಾಯಕ ಯುವಕರು ಮಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಕೊಲೆಯಾಗುತ್ತಿದ್ದು ಬಿಜೆಪಿ ಸರಕಾರದ ಮುಖ್ಯಮಂತ್ರಿ ಬೊಮ್ಮಾಯಿ ಶವದ ಮೇಲೆ ಆಡಳಿತವನ್ನು ಮಾಡುತ್ತಿದ್ದಾರೆ. ಸರಕಾರ ಮೊದಲ ಘಟನೆ ನಡೆದಾ ಗಲೇ ಸೂಕ್ತ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದರೆ ಮುಂದೆ ಅಂತಹ ಘಟನೆಗಳು ನಡೆಯುತ್ತಿರಲಿಲ್ಲ ಆದರೆ ಸರಕಾರ ಸಂಪೂರ್ಣ ನಿದ್ರಾವಸ್ಥೆಯಿಂದ ಕೂಡಿದ್ದರ ಪರಿಣಾಮವಾಗಿ ಪ್ರತಿನಿತ್ಯ ಅಮಾಯಕ ಯುವಕರು ಕೊಲೆಯಾಗುತ್ತಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.
Next Story