Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯುವರಾಜ ಫಿಲಿಪ್‌ ಉಯಿಲು ಪ್ರಕರಣ: ದಿ...

ಯುವರಾಜ ಫಿಲಿಪ್‌ ಉಯಿಲು ಪ್ರಕರಣ: ದಿ ಗಾರ್ಡಿಯನ್‌ ಅರ್ಜಿ ತಿರಸ್ಕೃತ

ವಾರ್ತಾಭಾರತಿವಾರ್ತಾಭಾರತಿ29 July 2022 9:27 PM IST
share

 ಲಂಡನ್,ಜು.29: ಯುವರಾಜ ಫಿಲಿಪ್ ನ ಉಯಿಲಿ (ವಿಲ್)ನ ಕುರಿತಾ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ನಡೆದ  ವಿಚಾರಣೆಯ ಕಲಾಪದಲ್ಲಿ ಮಾಧ್ಯಮಗಳಿಗೆ ಪ್ರವೇಶಾನುಮತಿ ನಿರಾಕರಿಸಿದ್ದ ಆದೇಶವನ್ನು ಪ್ರಶ್ನಿಸಿ ತಾನು ಸಲ್ಲಿಸಿದ ಅರ್ಜಿಯು ತಿರಸ್ಕೃತಗೊಂಡಿದೆಯೆಂದು ’ದಿ ಗಾರ್ಡಿಯನ್’ ದಿನ ಪತ್ರಿಕೆ ಶುಕ್ರವಾರ ತಿಳಿಸಿದೆ.

     

ರಾಜಕುಮಾರ ವಿಲಿಯಂ ಅವರ ವಿಧವಾಪತ್ನಿ ಎರಡನೆ ಎಲಿಜಬೆತ್ ಹಾಗೂ ಇತರ ಬ್ರಿಟಿಶ್ ರಾಜವಂಶಸ್ಥರ ಖಾಸಗಿತನವನ್ನು ರಕ್ಷಿಸುವ ಉದ್ದೇಶದಿಂದ ಈ ಉಯಿಲನ್ನು 90 ವರ್ಷಗಳ ಕಾಲ ಮೊಹರು ಮಾಡಿಡಬೇಕೆಂದು ಹೈಕೋರ್ಟ್ ನ್ಯಾಯಾಧೀಶರು 2021ರ ಸೆಪ್ಟೆಂಬರ್ನಲ್ಲಿ ನೀಡಿದ ತೀರ್ಪಿನಲ್ಲಿ ತಿಳಿಸಿತ್ತು.ಈ ವಿಚಾರಣಾ ಕಲಾಪವನ್ನು ರಹಸ್ಯವಾಗಿ ನಡೆಸಲಾಗಿದ್ದು, ಮಾಧ್ಯಮಗಳಿಗೆ ಇದರಲ್ಲಿ ಭಾಗವಹಿಸಲು ಅನುಮತಿಯನ್ನು ನೀಡಿರಲಿಲ್ಲ.

ಇದನ್ನು ಪ್ರಶ್ನಿಸಿ ‘ದಿ ಗಾರ್ಡಿಯನ್’ ಪತ್ರಿಕೆಯು, ಸರಕಾರದ ಮುಖ್ಯ ಕಾನೂನು ಅಧಿಕಾರಿಯಾದ ಅಟಾರ್ನಿ ಜನರಲ್ ಹಾಗೂ ಬ್ರಿಟಿಶ್ ರಾಣಿಯ ಖಾಸಗಿ ವಕೀಲರ ವಿರುದ್ಧ ನ್ಯಾಯಾಲಯದ ಮೆಟ್ಟಲೇರಿತ್ತು ಹಾಗೂ ವಿಚಾರಣಾ ಕಲಾಪದಲ್ಲಿ ಮಾಧ್ಯಮಗಳಿಗೆ ಪಾಲ್ಗೊಳ್ಳಲು ಅವಕಾಶ ನೀಡಬೇಕೆಂದು ಆಗ್ರಹಿಸಿತ್ತು.

ಆದರೆ ನ್ಯಾಯಾಲಯದ ಅರ್ಜಿಯನ್ನು ತಿರಸ್ಕರಿಸಿದ ಹಿರಿಯ ನ್ಯಾಯಾಧೀಶರಾದ ಜೆಫ್ರಿ ವಾಸ್ ಹಾಗೂ ವಿಕ್ಟೋರಿಯಾ ಶಾರ್ಪ್ ಅವರು, ವಿಚಾರಣಾ ಕಲಾಪದ ವೀಕ್ಷಣೆಗೆ ಮಾಧ್ಯಮಗಳಿಗೆ ಅವಕಾಶ ನೀಡುವುದರಿಂದ ಸಾರ್ವಜನಿಕವಾಗಿ ಸಂಚಲನ ಹಾಗೂ ಕೋಲಾಹಲ ಸೃಷ್ಟಿಯಾಗಲಿದೆ ಎಂದು ಅಭಿಪ್ರಾಯಿಸಿದರು.

ಕೆಲವು ಪ್ರಕರಣಗಳಲ್ಲಿ ಉಯಿಲು ಹಾಗೂ ಅದರ ಮೌಲ್ಯಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸದೆ ಇರುವುದಕ್ಕೆ ಬ್ರಿಟಿಶ್ ಕಾನೂನು ಅನುಮತಿ ನೀಡುತ್ತದೆ ಎಂದು ನ್ಯಾಯಾಧೀಶರು ತಿಳಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದ ಸನ್ನಿವೇಶಗಳು ಅಸಾಧಾರಣವಾದುದಾಗಿದೆ ಎಂದವರು ಅಭಿಪ್ರಾಯಿಸಿದ್ದರು.

ಡ್ಯೂಕ್ ಆಫ್ ಎಡಿನ್ಬರ್ಗ್ ಎಂಬುದಾಗಿಯೂ ಕರೆಯಲ್ಪಡುವ ರಾಜಕುಮಾರ ಫಿಲಿಪ್ ಅವರು ಒಂದು ತಿಂಗಳಿಗೂ ಅಧಿಕ ಸಮಯದ ಅಸ್ವಸ್ಥತೆಯ ಬಳಿಕ ಕಳೆದ ವರ್ಷದ ಎಪ್ರಿಲ್ನಲ್ಲಿ ಮೃತಪಟ್ಟರು. ಅವರು 100ನೇ ಹುಟ್ಟುಹಬ್ಬಕ್ಕೆ ಕೆಲವೇ ವಾರಗಳ ಮೊದಲು ಅವರು ಕೊನೆಯುಸಿರೆಳೆದಿದ್ದರು.

ಫಿಲಿಪ್ ಹಾಗೂ ರಾಣಿ ಎಲಿಝಬೆತ್ ಅವರು 73 ವರ್ಷಗಳ ಹಿಂದೆ ವಿವಾಹವಾಗಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X