Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ''ಕಾರ್ಯಕರ್ತರನ್ನು 'ಮತೀಯ...

''ಕಾರ್ಯಕರ್ತರನ್ನು 'ಮತೀಯ ವ್ಯಸನಿ'ಗಳನ್ನಾಗಿ ಮಾಡಿ ಬೇಳೆ ಬೇಯಿಸಿಕೊಳ್ಳುವ ಅಸಲಿ ಮುಖ ಈಶ್ವರಪ್ಪ ಕಳಚಿಟ್ಟಿದ್ದಾರೆ''

ಕುಮಾರಸ್ವಾಮಿ ಕಿಡಿ

ವಾರ್ತಾಭಾರತಿವಾರ್ತಾಭಾರತಿ30 July 2022 1:16 PM IST
share
ಕಾರ್ಯಕರ್ತರನ್ನು ಮತೀಯ ವ್ಯಸನಿಗಳನ್ನಾಗಿ ಮಾಡಿ ಬೇಳೆ ಬೇಯಿಸಿಕೊಳ್ಳುವ ಅಸಲಿ ಮುಖ ಈಶ್ವರಪ್ಪ ಕಳಚಿಟ್ಟಿದ್ದಾರೆ

ಬೆಂಗಳೂರು: ಕಾರ್ಯಕರ್ತರನ್ನು 'ಮತೀಯ ವ್ಯಸನಿ'ಗಳನ್ನಾಗಿ ಮಾಡಿ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ  ಅಸಲಿ ಮುಖವನ್ನು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಕಳಚಿಟ್ಟಿದ್ದಾರೆ. ಇದು ಅತ್ಯಂತ ಹೇಯ ಮತ್ತು ಪಾತಕ, ರಾಕ್ಷಸೀ ರಾಜಕಾರಣದ ಪರಾಕಾಷ್ಠೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.  

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ' ಕಂಡೋರ ಮಕ್ಕಳ ಕಗ್ಗೊಲೆ, ಬಡ ಯುವಕರ ನೆತ್ತರಿನ ಮೇಲೆ ಸುಖದಸೌಧ ಕಟ್ಟುತ್ತಿರುವ ಬಿಜೆಪಿಗೆ ಪಾಪಪ್ರಜ್ಞೆ ಇಲ್ಲ. ಸಹಪಾಠಿಯ ಕೊಲೆಗೆ ಪ್ರತಿಯಾಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರೆ, ಅವರ ಆತ್ಮಸ್ಥೈರ್ಯವನ್ನೇ ಅಣಕಿಸುವ, ಅವರ ನೈತಿಕತೆಯನ್ನೇ ಶಂಕಿಸುವ ಈಶ್ವರಪ್ಪನವರು ಬಿಜೆಪಿಯ ನೈಜ ಮುಖವಾಡ' ಎಂದು ಹೇಳಿದ್ದಾರೆ. 

'ಬಾವುಟ ಕಟ್ಟಲು, ಕರಪತ್ರ ಹಂಚಲು, ಮತ ಕೇಳಲು, ಟೆಂಟ್‌ ಹಾಕಲು, ಗೆದ್ದವರನ್ನು ಭುಜದ ಮೇಲೆ ಹೊತ್ತು ಮೆರವಣಿಗೆ ಮಾಡಲು ಇದೇ ಯುವಕರು ಬೇಕು. ಇಂಥ ಯುವಕರಿಗೆ ನಾಯಕರಾದವರೇ ಧರ್ಮದ ಅಪೀಮಿನ ಅಮಲೇರಿಸಿ, ಅವರ ಜೀವಕ್ಕೆ ಸಂಚಕಾರ ತಂದು, ಅವರ ಕುಟುಂಬಗಳನ್ನು ಬೀದಿಪಾಲು ಮಾಡುವ ಕಿರಾತಕ, ಕೊಲೆಗೆಡುಕ ರಾಜಕಾರಣಕ್ಕೆ ಈಶ್ವರಪ್ಪನವರೇ ಪರಾಕಾಷ್ಠೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ರಾಜೀನಾಮೆ ಒಪ್ಪಿದರೆ ನಿಮ್ಮ ಗತಿ ಏನು? ನಿಮ್ಮ ಜಾಗಕ್ಕೆ ಹೊಸಬರು ಬರುತ್ತಾರೆ! ಬಿಜೆಪಿಗೆ ಕಾರ್ಯಕರ್ತರು ಸಿಗುವುದಿಲ್ಲವೇ? ಯುವಮೋರ್ಚಾ ಕಾರ್ಯಕರ್ತರು ಈಗಷ್ಟೇ ಕಣ್ಣು ಬಿಡುತ್ತಿದ್ದಾರೆ. ಪಕ್ಷಕ್ಕೆ ಅವರ ಕೊಡುಗೆ ಏನು?" ಎಂದು ಪ್ರಶ್ನಿಸಿರುವ ಈಶ್ವರಪ್ಪ, ಸಭ್ಯ ರಾಜಕಾರಣದ ಎಲ್ಲೆ ಮೀರಿ ಅಹಂಕಾರ ಪ್ರದರ್ಶಿಸಿದ್ದಾರೆ' ಎಂದು ಕಿಡಿಗಾರಿದ್ದಾರೆ.

'ಬಿಜೆಪಿ ಎತ್ತ ಸಾಗುತ್ತಿದೆ ಎನ್ನುವುದಕ್ಕೆ ಈಶ್ವರಪ್ಪ ಹೇಳಿಕೆಯೇ ಸಾಕ್ಷಿ. ನೆತ್ತರಿನ ಸುಪ್ಪತ್ತಿಗೆಯ ಮೇಲೆ ಮೆರೆಯುತ್ತಿರುವ ಈಶ್ವರಪ್ಪ, ಶಿವಮೊಗ್ಗದಲ್ಲಿ ಹತ್ಯೆಗೀಡಾದ ಹರ್ಷನ ಕೊಲೆ ಸಂದರ್ಭದಲ್ಲಿ ವರ್ತಿಸಿದ ರೀತಿ ಎಲ್ಲರೂ ಬಲ್ಲರು. ಇವರು ಬಿಜೆಪಿಯ ರಕ್ಕಸ ಮುಖವನ್ನು ಅನಾವರಣ ಮಾಡಿದ್ದಾರೆ' ಎಂದು ಹೇಳಿದ್ದಾರೆ. 

'ಕಗ್ಗೊಲೆಯಾದ ಬಡ ಯುವಕರ ಆತ್ಮಘೋಷದ ಶಾಪ ಬಿಜೆಪಿಗೆ ತಟ್ಟದೆ ಇರದು. ಕರ್ನಾಟಕವನ್ನು ʼಕಗ್ಗೊಲೆಗಳ ಕರ್ನಾಟಕʼವನ್ನಾಗಿ ಮಾಡಿದ ಕುಖ್ಯಾತಿ ಈ ಪಕ್ಷದ್ದೇ. ಕಮಲದ ರೆಕ್ಕೆಗಳಿಗೆ ಅಂಟಿಕೊಂಡಿರುವ ರಕ್ತದ ಕಲೆಗಳು, ನಿಮ್ಮ ಪಾಪದ ಕೊಡವನ್ನು ತುಂಬಿಸುತ್ತಿವೆ' ಎಂದಿದ್ದಾರೆ.

'ಬಿಜೆಪಿ ಕಾರ್ಯಕರ್ತರೇ.., ನೀವು ಸ್ವಾರ್ಥಿ ನಾಯಕರ ಗುಲಾಮರಲ್ಲ, ಇನ್ನಾದರೂ ಕೊಲೆಗೆಡುಕ ರಾಜಕೀಯ ಕರಾಳ ಮುಖವನ್ನು ಅರ್ಥ ಮಾಡಿಕೊಳ್ಳಿ' ಎಂದು ಕುಮಾರಸ್ವಾಮಿ ಟ್ವೀಟ್  ಮೂಲಕ ಎಚ್ಚರಿಸಿದ್ದಾರೆ. 

ಕಾರ್ಯಕರ್ತರನ್ನು 'ಮತೀಯ ವ್ಯಸನಿ'ಗಳನ್ನಾಗಿ ಮಾಡಿ ಬೇಳೆ ಬೇಯಿಸಿಕೊಳ್ಳುವ @BJP4Karnataka ಅಸಲಿ ಮುಖವನ್ನು ಮಾಜಿ ಸಚಿವ @ikseshwarappa ಕಳಚಿಟ್ಟಿದ್ದಾರೆ. ಇದು ಅತ್ಯಂತ ಹೇಯ ಮತ್ತು ಪಾತಕ, ರಾಕ್ಷಸೀ ರಾಜಕಾರಣದ ಪರಾಕಾಷ್ಠೆ. 1/7 pic.twitter.com/1wP5WEh5hk

— H D Kumaraswamy (@hd_kumaraswamy) July 30, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X