Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಖೆರ್ಸೊನ್ ಸಂಘರ್ಷದಲ್ಲಿ 100ಕ್ಕೂ ಅಧಿಕ...

ಖೆರ್ಸೊನ್ ಸಂಘರ್ಷದಲ್ಲಿ 100ಕ್ಕೂ ಅಧಿಕ ರಶ್ಯನ್ ಸೈನಿಕರ ಸಾವು: ಉಕ್ರೇನ್ ಸೇನೆ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ30 July 2022 9:15 PM IST
share
ಖೆರ್ಸೊನ್ ಸಂಘರ್ಷದಲ್ಲಿ 100ಕ್ಕೂ ಅಧಿಕ ರಶ್ಯನ್ ಸೈನಿಕರ ಸಾವು: ಉಕ್ರೇನ್ ಸೇನೆ ಘೋಷಣೆ

 ಒಡೆಸಾ,ಜು.30: ಉಕ್ರೇನ್ ನ ಖೆರ್ಸಾನ್ ಪ್ರಾಂತದಲ್ಲಿ ಶುಕ್ರವಾರ ನಡೆದ ಭೀಕರ ಕದನದಲ್ಲಿ ತಾನು ಸುಮಾರು1 100ಕ್ಕೂ ಅಧಿಕ ಮಂದಿ ರಶ್ಯನ್ ಸೈನಿಕರನ್ನು ಹತ್ಯೆಗೈದಿರುವುದಾಗಿ ಹಾಗೂ ರಶ್ಯ ಸೇನೆಯ ಎರಡು ಶಸ್ತ್ರಾಗಾರಗಳನ್ನು ನಾಶಪಡಿಸಿರುವುದಾಗಿ ಉಕ್ರೇನ್ ಸೇನೆ ತಿಳಿಸಿದೆ. ದಕ್ಷಿಣ ಉಕ್ರೇನ್ನ ಆಯಕಟ್ಟಿನ ಪ್ರಾಂತವಾದ ಖೆರ್ಸಾನ್ನಲ್ಲಿ ಉಕ್ರೇನ್ ಸೇನೆಯು ರಶ್ಯನ್ ಸೇನೆಯ ಮೇಲೆ ತೀವ್ರ ಪ್ರತಿದಾಳಿ ನಡೆಸುತ್ತಿದೆ. ಖೆರ್ಸಾನ್ ಮೂಲಕ ಉಕ್ರೇನ್ನಲ್ಲಿರುವ ರಶ್ಯದ ಸೈನಿಕರಿಗೆ ಶಸ್ತ್ರಾಸ್ತ್ರ,ಸರಂಜಾಮುಗಳ ಪೂರೈಕೆ ನಡೆಯುತ್ತಿರುವುದರಿಂದ ಆ ಪ್ರದೇಶದ ಮೇಲೆ ನಿಯಂತ್ರಣ ಸಾಧಿಸಲು ಉಕ್ರೇನ್ ಸೇನೆ ಶತಾಯಗತಾಯ ಹೋರಾಟ ನಡೆಸುತ್ತಿದೆ.

ಡಿನಿಪ್ರೊ ನದಿಯ ಮೇಲಿನ ರೈಲು ಮಾರ್ಗವನ್ನು ಉಕ್ರೇನ್ ಸೇನೆ ಕಡಿದುಹಾಕಿರುವುದಾಗಿ ಉಕ್ರೇನ್ಸೇನೆಯು ದಕ್ಷಿಣ ಕಮಾಂಡ್ತಿಳಿಸಿದೆ. ಇದರಿಂದಾಗಿ ರಶ್ಯ ಆಕ್ರಮಿತ ಕ್ರಿಮಿಯಾ ಹಾಗೂ ಪೂರ್ವದ ಪ್ರದೇಶಗಳಿಂದ ರಶ್ಯ ಪಡೆಳು ಶಸ್ತ್ರಾಸ್ತ್ರಗಳನ್ನು ಪಡೆಯುವುದು ಕಷ್ಟಕರವಾಗಿದೆ ಎಂದು ಅದು ಹೇಳಿದೆ.

ಪಾಶ್ಚಾತ್ಯ ರಾಷ್ಟ್ರಗಳು ತನಗೆ ಪೂರೈಕೆ ಮಾಡಿರುವ ದೂರವ್ಯಾಪ್ತಿಯ ಕ್ಷಿಪಣಿ ವ್ಯವಸ್ಥೆಗಳನ್ನು ಬಳಸಿಕೊಂಡು, ಡಿನಿಪ್ರೊ ನದಿಯ ಮೇಲಿನ ಸೇತುವೆಗಳನ್ನು ಉಕ್ರೇನ್ ಸೇನೆ ಕಡಿದುಹಾಕಿದೆ. ಇದರಿಂದ ಖೆರ್ಸಾನ್ ನಗರದ ಸಂಪರ್ಕ ಸಂಪೂರ್ಣ ಕಡಿದುಹೋಗಿದ್ದು, ಅಲ್ಲಿನ ಪಶ್ಚಿಮ ದಂಡೆಯಲ್ಲಿ ಬೀಡುಬಿಟ್ಟಿರುವ ರಶ್ಯ ಸೇನೆಯ 49 ನೇ ತುಕಡಿಯು ಅಸಹಾಯಕ ಸ್ಥಿತಿಯಲ್ಲಿದೆ ಎಂದು ಬ್ರಿಟಿಶ್ ರಕ್ಷಣಾ ಇಲಾಖೆಯ ಅಧಿಕಾರಿಗಳು ಅಂದಾಜಿಸಿದ್ದಾರೆ.

ಶುಕ್ರವಾರ ಖೆರ್ಸಾನ್ ಪ್ರಾಂತದಲ್ಲಿ ನಡೆದ ಸಂಘರ್ಷದಲ್ಲಿ 100ಕ್ಕೂ ಅಧಿಕ ರಶ್ಯನ್ ಸೈನಿಕರು ಸಾವನ್ನಪ್ಪಿದ್ದಾರೆ ಹಾಗೂ ಏಳು ಸಮರ ಟ್ಯಾಂಕ್ಗಳು ನಾಶವಾಗಿವೆ ಎಂದು ಉಕ್ರೇನ್ ಸೇನೆ ಹೇಳಿದೆ. ಫೆಬ್ರವರಿ 24ರಂದು ರಶ್ಯ ಸೇನೆಯು ಉಕ್ರೇನ್ ಮೇಲೆ ಆಕ್ರಮಣ ಆರಂಭಿಸಿದ ಬಳಿಕ ರಶ್ಯನ್ನರು ಅತಿಕ್ರಮಿಸಿಕೊಂಡಿದ್ದ ಮೊದಲ ಪ್ರಾಂತವಾಗಿದೆ.

ಮಾಸ್ಕೊ ಬೆಂಬಲಿತ ಪ್ರತ್ಯೇಕವಾದಿಗಳ ವಶದಲ್ಲಿರುವ ಡೊನೆಟೆಸ್ಕ್ ಪ್ರಾಂತದ ಒಲೆನಿವ್ಕಾ ಪಟ್ಟಣದಲ್ಲಿರುವ ಕಾರಾಗೃಹವೊಂದರ ಮೇಲೆ ಉಕ್ರೇನ್ ಸೇನೆ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಉಕ್ರೇನಿ ಯುದ್ಧ ಕೈದಿಗಳು ಸಾವನ್ನಪ್ಪಿದ್ದಾರೆ ಹಾಗೂ 75 ಮಂದಿ ಗಾಯಗೊಂಡಿದ್ದಾರೆಂದುು ರಶ್ಯದ ರಕ್ಷಣಾ ಸಚಿವಾಲಯ ತಿಳಿಸಿದೆ.

ಉಕ್ರೇನ್ ಸೇನೆಯು ಅಮೆರಿಕ ನಿರ್ಮಿತ ಹಿಮಾರ್ಸ್ ರಾಕೆಟ್ಗಳನ್ನು ಬಳಸಿ ರಶ್ಯ ಸೇನೆಯ ಕಾರಾಗೃಹದ ಮೇಲೆ ದಾಳಿ ನಡೆಸಿದೆಯೆಂದು ವಕ್ತಾರರು ತಿಳಿಸಿದ್ದಾರೆ.

ಆದರೆ ಉಕ್ರೇನಿ ಸೇನೆಯು ಕ್ಷಿಪಣಿ ದಾಳಿಯ ಹೊಣೆಹೊತ್ತುಕೊಳ್ಳಲು ನಿರಾಕರಿಸಿದೆ. ಅಲ್ಲಿ ಬಂಧಿತರಾಗಿದ್ದ ಉಕ್ರೇನಿಯನ್ ಕೈದಿಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದುದನ್ನು ಮುಚ್ಚಿಹಾಕುವ ಉದ್ದೇಶದಿಂದ ಅದಾಗಿಯೇ ಈ ದಾಳಿಯನ್ನು ನಡೆಸಿದೆಯೆಂದು ಉಕ್ರೇನ್ ಸೇನೆಯ ವಕ್ತಾರರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X